ಕಲಬುರಗಿ | ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Date:

ಆಳಂದ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಆಳಂದ ತಾಲೂಕು ಘಟಕ ಉದ್ಘಾಟನೆ ಸಮಾರಂಭ ನಡೆಯಿತು.

ಆಳಂದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳೆ ಅವರು ನೇಮಕಾತಿ ಆದೇಶ ಪ್ರತಿ ನೀಡಿ ಗೌರವಿಸಿದರು.

ವಿಜಯ್ ಕುಮಾರ್ ಜಿಡಗೆ( ತಾಲೂಕ ಅಧ್ಯಕ್ಷರು), ಶ್ರೀನಾಥ್ ನಾಗೂರ ( ತಾಲೂಕು ಪ್ರಧಾನ ಕಾರ್ಯದರ್ಶಿ), ಸುಭಾಷ್.ಎಸ್. ಪಾಟೀಲ್ ಗ್ರಾಮ ಆಡಳಿತ ಅಧಿಕಾರಿ (ತಾಲೂಕ ಉಪಾಧ್ಯಕ್ಷ), ರಮೇಶ್ ಸಿ ಕುಲಕರ್ಣಿ ಉಪನ್ಯಾಸಕರು (ಖಜಾಂಚಿ), ಬಸಣ್ಣ ಸಿಗರಕಂಟಿ ( ಕಾನೂನು ಸಲಹೆಗಾರ), ಜಗನ್ನಾಥ ಕುಂಬಾರ ಪಶು ವೈದ್ಯಕೀಯ ಪರಿವೀಕ್ಷಕರು ( ತಾಲೂಕು ಸಂಘಟನಾ ಕಾರ್ಯದರ್ಶಿ), ರಾಜೇಶ ಶಾಕಾ ದ್ವಿ.ದ.ಸ ಖಜಾನೆ (ತಾಲೂಕು ಉಪಾಧ್ಯಕ್ಷ), ಲಕ್ಷ್ಮಣ ಕಾಂಬಳೆ ಭೂಮಾಪಕ ಇಲಾಖೆ(ಸಹ ಕಾರ್ಯದರ್ಶಿ), ಧರ್ಮರಾಜ ದಂಗಾಪುರ ಸುಶ್ರುತ ಅಧಿಕಾರಿ(ತಾಲೂಕ ಸಹ ಕಾರ್ಯದರ್ಶಿ) ಯಾಶ್ಮಿನ್ ತಬಸುಮ (ತಾಲೂಕ ಉಪಾಧ್ಯಕ್ಷ), ವಿದ್ಯಾಸಾಗರ ಮೈನಾಳ (ತಾಲೂಕು ಮಾಧ್ಯಮ ಪ್ರತಿನಿಧಿ) ಅವರು ನೇಮಕಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳೆ ಮಾತನಾಡಿ, ʼಕಲ್ಯಾಣ ಕರ್ನಾಟಕ ಭಾಗದ 371(ಜೆ) ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ ನೌಕರರು ಎದುರಿಸುವ ಸಮಸ್ಯೆಗಳು, ಈ ಭಾಗದಲ್ಲಿ ಆಗುತ್ತಿರುವ ಶೈಕ್ಷಣಿಕ ಹಿನ್ನಡೆಗೆ ಸಂಘಟನಾತ್ಮಕ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸೋಣʼ ಎಂದರು.

ʼಭಾರತೀಯ ಸಂವಿಧಾನದ ಆಶಯದಂತೆ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಸಮತೋಲನ ಕಾಪಾಡಿಕೊಳ್ಳಲು 371(ಜೆ) ಸಂವಿಧಾನಾತ್ಮಕ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಅದನ್ನು ಸಂಪೂರ್ಣವಾಗಿ ಅನುಷ್ಠಾನವಾಗುವಲ್ಲಿ, ಸಂವಿಧಾನದ ಆಶಯ ಈಡೇರಿಸುವಲ್ಲಿ ಸರ್ಕಾರಿ ನೌಕರರಾದ ನಾವು ಸಂಘಟನಾತ್ಮಕವಾಗಿ ಕಾರ್ಯೋನ್ಮುಖರಾಗಬೇಕುʼ ಎಂದು ಕರೆ ನೀಡಿದರು.

ಇದನ್ನೂ ಓದಿ : ಬೀದರ್‌ | ಒಟಿಪಿ ಹೇಳದಿದ್ದರೂ ಖಾತೆಯಿಂದ ₹8 ಲಕ್ಷ ಹಣ ಕಳೆದುಕೊಂಡ ಕಾರ್ಮಿಕ!

ಸಭೆಯಲ್ಲಿ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಗುತ್ತೇದಾರ್, ಸದಸ್ಯ ಭೀಮಣ್ಣ ಹಂದ್ರಾಳ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...