ಕಲಬುರಗಿ | ಪರಿಸರ ರಕ್ಷಣೆ ಎಲ್ಲರ ಹೊಣೆ; ಶಾಲಾ ಮಕ್ಕಳಿಂದ ಜಾಗೃತಿ ಜಾಥಾ

Date:

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಪರಿಸರ ಮಹತ್ವದ ತಿಳಿಸುವುದರ ಜತೆಗೆ ಶಾಲಾ ಮಕ್ಕಳು, ಗ್ರಾಮಸ್ಥರಲ್ಲಿ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಅರಿವು ಮೂಡಿಸುವ ಸಲುವಾಗಿ ಕಾಡು ಬೆಳಸಿ ನಾಡು ಉಳಿಸಿ, ಹಸಿರೆ ನಮ್ಮ ಉಸಿರು, ಪರಿಸರವನ್ನು ನಾವು ರಕ್ಷಣೆ ಮಾಡಿದರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ ಎಂಬಿತ್ಯಾದಿ ಘೋಷಣೆ ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಿದರು.

ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಮಾತನಾಡಿ, “ಪರಿಸರ ದಿನೇ ದಿನೆ ನಾಶವಾಗುತ್ತಿರುವುದಕ್ಕೆ ಮಾನವನೇ ನೇರ ಕಾರಣ. ಆಧುನಿಕತೆ ಹೆಸರಿನಲ್ಲಿ ರಸ್ತೆ ಮಾಡಲು ಸಾವಿರಾರು ಮರಗಳ ಮಾರಣ ಹೋಮ ನಡೆಸಲಾಗುತ್ತಿದೆ. ಇದರಿಂದ ಸರಿಯಾದ ಸಮಯಕ್ಕೆ ಮಳೆ ಇಲ್ಲದೆ, ಬೆಳೆ ಇಲ್ಲದೆ ಜೀವ ಸಂಕುಲ ಪರಿತಪಿಸುವಂತಾಗಿದೆ. ಮನೆಯಲ್ಲಿ ಎರಡು ಕಸದ ಬುಟ್ಟಿ ಇಟ್ಟು ಒಣ ಕಸ-ಹಸಿ ಕಸ ಪ್ರತ್ಯೇಕವಾಗಿ ಹಾಕಬೇಕು ನಮ್ಮ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರತಿ ಮನೆಗಳಲ್ಲಿ ಸಸಿಗಳನ್ನು ನೆಡಬೇಕು. ನಾವು ಬದಲಾದರೆ ಜಗತ್ತು ಬದಲಾಗುತ್ತದೆ. ಬದಲಾವಣೆ ನಮ್ಮಿಂದಲೇ ಶುರುವಾಗಲಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಬಾಣಂತಿಯರ ಸರಣಿ ಸಾವು ಖಂಡಿಸಿ ಆರೋಗ್ಯ ಹಕ್ಕಿನ ಜಾಥಾ

ಜಾಥಾದಲ್ಲಿ ಸರಸ್ವತಿ ಸಿಂಗೆ, ರಾಮಪ್ಪ ನಡಗಟ್ಟಿ, ಶಾಂತಬಾಯಿ ಕಡಬಿನ್,‌ ಜಯಶ್ರೀ ಭಂಗಿ, ಶಿಕ್ಷಣ ಪ್ರೇಮಿ ದೇವೇಂದ್ರ ನಡಗಟ್ಟಿ, ಭೂತಾಳಿ ನಡಗಟ್ಟಿ, ಶಾಲಾ ಮಕ್ಕಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...