ಕಲಬುರಗಿ| ಬಸನಗೌಡ ಪಾಟೀಲ ಯತ್ನಾಳರನ್ನು ಶಾಸಕ ಸ್ಥಾನದಿಂದ ಉಚ್ಚಾಟಿಸಿ: ಜಾಗತಿಕ ಲಿಂಗಾಯತ ಮಹಾಸಭಾ

Date:

ಬಸವಣ್ಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

ಬೀದರ್‌ನಲ್ಲಿ ಯತ್ನಾಳ್ ನೀಡಿರುವ ಹೇಳಿಕೆ ಖಂಡಿಸಿ ಕಲಬುರಗಿಯ ಪ್ರತಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡ ಅಶೋಕ ಘೂಳಿ, “ಶಾಸಕ ಯತ್ನಾಳ್ ಅವರು ವಕ್ಫ್ ಬೋರ್ಡ್ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಆದರೆ ಅವರು ಪ್ರತಿನಿಧಿಸುವ ವಿಜಯಪುರ ಕ್ಷೇತ್ರವೇ ಬಸವಣ್ಣನವರ ಜನ್ಮಭೂಮಿಯಾಗಿದೆ” ಎಂದು ಹೇಳಿದರು.

“ಬಸವಣ್ಣನವರ ಪ್ರಭಾವಕ್ಕೆ ಒಳಗಾಗಿ ಇವರಿಗೆ ಬಸನಗೌಡ ಎಂದು ನಾಮಕರಣ ಮಾಡಲಾಗಿದೆ. ಯಾವ ಧರ್ಮದಲ್ಲಿ ಇವರು ಜನ್ಮ ತಾಳಿದ್ದರೋ ಅದರ ಧರ್ಮದ ಸಂಸ್ಕೃತಿ, ಅರಿವು ಇಲ್ಲದೆ ಮತ್ತು ಅಧ್ಯಯನ ಮಾಡದೆ ಬಸವಣ್ಣನವರು ಧಿಕ್ಕರಿಸಿ ಬಂದ ವೈಧಿಕ ಧರ್ಮದ ಪ್ರತಿನಿಧಿಯಾಗಿ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟ ನಿಲ್ಲಲ್ಲ: ಬಸನಗೌಡ ಪಾಟೀಲ್‌ ಯತ್ನಾಳ ಸ್ಪಷ್ಟನೆ

“ಇಡಿ ವಿಶ್ವದ ಅನೇಕ ರಾಷ್ಟ್ರಗಳು ಬಸವಣ್ಣನವರ ತತ್ವಗಳಿಗೆ ಮಾರುಹೋಗಿ ತತ್ವವನ್ನು ಅನುಷ್ಠಾನಗೊಳಿಸುತ್ತಿರುವಾಗ ಧರ್ಮದ ಗಂಧ ಗಾಳಿಯೂ ಅರಿಯದೆ ಸ್ವಾರ್ಥ ರಾಜಕಾರಣಕ್ಕಾಗಿ ಸ್ವಾಭಿಮಾನವನ್ನು ಮರೆತು ದೀಪದ ಕೆಳಗೆ ಕತ್ತಲು ಎನ್ನುವಂತೆ ಬಸವಣ್ಣನವರ ಮರಣದ ಬಗ್ಗೆ ಹಗುರವಾಗಿ ಹೇಳಿಕೆ ನೀಡಿರುವ ಅಜ್ಞಾನಿ ಬಸನಗೌಡ ಪಾಟೀಲ ಯತ್ನಾಳ್ ಅರವರನ್ನು ಶಾಸಕ ಸ್ಥಾನದಿಂದ ಉಚ್ಚಾಟನೆ ಮಾಡಬೇಕು” ಎಂದು ಆಗ್ರಹಿಸಿದರು.

“ಬಹು ಸಂಖ್ಯಾತರಾಗಿರುವ ಬಸವಣ್ಣನವರ ಅನುಯಾಯಿಗಳಿಗೆ ಇವರ ಹೇಳಿಕೆಯಿಂದ ನೋವುಂಟಾಗಿದೆ. ಸಮಾಜದಲ್ಲಿ ಶಾಂತಿ ಕದಡಿದ್ದು ದಂಗೆ ಏಳುವ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಕಾನೂನು ಪ್ರಕಾರವಾಗಿ ಯತ್ನಾಳ್ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು” ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟ್ಟಿಗಾರ್, ಅಧ್ಯಕ್ಷ ಭಧುಲಿಂಗ ಮುಂದರ, ಪ್ರಭುಲಿಂಗ ಮಹಾಗಾಂವಕರ್, ಸಂಗಮೇಶ ಗುಬ್ಬೇವಾಡ, ಶಶಿಕಾಂತ ಪಸಾರ್, ಹಣಮಂತ ರಾವ್ ಪಾಟೀಲ್, ಅಂಬಾರಾಯ ಬಿರಾದಾರ್, ಮಹಾಂತೇಶ ಕಲಬುರಗಿ, ಐಯನಗೌಡ ಪಾಟೀಲ್, ಎಸ್.ವಿ ನಿಂಗಪ್ಪ, ಶಾಂತಪ್ಪಾ ಪಾಟೀಲ್, ಬಸವರಾಜ ಕೋಣನ್ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...