ಕಲಬುರಗಿ | ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ : ಬಸವರಾಜ ಬಿರಾದಾರ್‌

Date:

ಪಿಯು ದ್ವಿತೀಯ ವಾರ್ಷಿಕ ಪರೀಕ್ಷೆ ವೆಬ್‌ಕಾಸ್ಟಿಂಗ್ ಬಗ್ಗೆ ಅನಗತ್ಯ ಗೊಂದಲ, ಭಯ ಪಡದೆ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಪಿಯು ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಸವರಾಜ ಬಿರಾದಾರ ತಿಳಿಸಿದರು.

ಆಳಂದ ಪಟ್ಟಣದ ಡಾ.ರಾಮ ಮನೋಹರ್ ಲೋಹಿಯಾ ಪಿಯು ಕಾಲೇಜಿನ ವಾರ್ಷಿಕೋತ್ಸವ ಹಾಗೂ ಪಿಯು ದ್ವಿತೀಯ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ʼವೆಬ್‌ಕಾಸ್ಟಿಂಗ್ ವ್ಯವಸ್ಥೆಯು ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಿ ಪಾರದರ್ಶಕವಾಗಿ ನಡೆಸಲು ಬಂದಿದೆ. ಸತತ ಅಧ್ಯಯನ, ನಿರಂತರ ಪರಿಶ್ರಮ ಹಾಗೂ ಆಸಕ್ತಿಯಿಂದ ಅಭ್ಯಾಸ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ, ಮೊಬೈಲ್, ಟಿವಿ ಮತ್ತಿತರ ಆಕರ್ಷಣೆಗಳಿಗೆ ಸಮಯ ವ್ಯರ್ಥ ಮಾಡದಂತೆ ವಿದ್ಯಾರ್ಥಿ ಓದಿನ ಕಡೆಗೆ ಹೆಚ್ಚಿನ ಗಮನಹರಿಸಬೇಕುʼ ಎಂದು ತಿಳಿಸಿದರು.

ಸಂಬುದ್ಧ ಪದವಿ ಕಾಲೇಜು ಪ್ರಾಂಶುಪಾಲ ಸಂಜಯ ಪಾಟೀಲ ಮಾತನಾಡಿ, ʼಪಿಯು ದ್ವಿತೀಯ ಹಂತವು ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಅವಕಾಶಗಳ ದೃಷ್ಟಿಯಿಂದ ಜೀವನದ ದಿಕ್ಕೂಚಿಯಾಗಲಿದೆ. ನಮ್ಮ ಸಂಸ್ಥೆಯು ವೃತ್ತಿಪರ ಶಿಕ್ಷಣ, ವೈದ್ಯಕೀಯ ಕಾಲೇಜು ಮತ್ತು ಪದವಿ ಕಾಲೇಜು ಅವಕಾಶಗಳಲ್ಲಿ ಗುಣಮಟ್ಟದ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ದೊರೆಯಲಿದೆ. ಇದನ್ನು ಸದುಪಯೋಗ ಮಾಡಿಕೊಳ್ಳಲಿʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಚಾರ್ಯ ನಾಗಣ್ಣ ಸಲಗರೆ ಮಾತನಾಡಿ, “1460 ವಿದ್ಯಾರ್ಥಿಗಳು ನಮ್ಮ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಕಳೆದ ಒಂದು ದಶಕದಿಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆಗೈದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಕಂಪನಿಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆʼ ಎಂದರು.

ವಿದ್ಯಾರ್ಥಿಗಳಾದ ಚನ್ನವೀರ ಬಟ್ಟರಗಾ, ಚೇತನಕುಮಾರ, ಲಕ್ಷ್ಮಿ, ಆದಿತ್ಯ, ಲಕ್ಷ್ಮಿ ಮುಗುಳೆ ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ಆಯೋಜಿಸಿದ ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ ಹಾಗೂ ವಿಶೇಷ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಮತ್ತು ಪದಕ ನೀಡಿ ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಿ : ಸಚಿವ ಪ್ರಿಯಾಂಕ್‌ ಖರ್ಗೆ

ಆಡಳಿತಾಧಿಕಾರಿ ಮಹಾದೇವಪ್ಪ ಪಾಟೀಲ ಅಧ್ಯಕ್ಷತೆ ವಹಿಸಿದರು. ಉಪನ್ಯಾಸಕರಾದ ಶರಣಬಸಪ್ಪ ಇಟಗಿ, ಮಲ್ಲಿಕಾರ್ಜುನ ಪಾಟೀಲ, ಶಮಸೋದ್ದೀನ್ ಕಮಲಾಪುರೆ, ಶಿವಲಿಂಗಪ್ಪ, ಮಂಟಗಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಮೃತ್ಯುಂಜಯ ಪಾಟೀಲ, ಜೈನೋದ್ದಿನ್ ಮುಜಾವರ್, ಸತೀಶ ಮುಲಗೆ, ಸಂಜೀವಿನಿ ಪಾಟೀಲ್ ಉಪಸ್ಥಿತರಿದ್ದರು.‌ ನಾಗರಾಜ ಘಂಟೆ ನಿರೂಪಿಸಿದರೆ, ಅಶ್ವಿನ್ ಪಾಟೀಲ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...