ಕಲಬುರಗಿ | ಕಬ್ಬಿನ ಬಾಕಿ ಹಣ ಬಿಡುಗಡೆ ಮಾಡಲು ರೈತ ಸಂಘ ಆಗ್ರಹ

Date:

ರೈತರ ಕಬ್ಬಿನ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಅಫಜಲಪುರ ಘಟಕದಿಂದ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ಕಬ್ಬಿನ ಹಿಂದಿನ ಬಾಕಿ ಹಣ ಬಿಡುಗಡೆ ಮಾಡಲು ಆದೇಶ ಹೊರಡಿಸಿದರೂ ಕೂಡಾ ಬಾಕಿ ಹಣ ಕೊಡದ ಸಕ್ಕರೆ ಕಾರ್ಖಾನೆಗಳ ರೈತ ವಿರೋಧಿ ನೀತಿ ಖಂಡನೀಯ. ಮೊನಟಗಾ ಗೂಳುರು ಬ್ರಿಜ್ ಕಂ ಬ್ಯಾರೇಜ್ ಗೆ ಗೇಟ್ ಕೂಡಿಸಿ ರೈತರ ಜಮೀನುಗಳಿಗೆ ನೀರು ಹರಿಸಬೇಕು. ಮುಳುಗಡೆ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು. ಬಾಕಿಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು” ಎಂದು ಒತ್ತಾಯಿಸಿದರು.

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ಮಾಡುವುದರ ಮೂಲಕ ಕರ್ನಾಟಕ ನೀರಾವರಿ ನಿಗಮ ನಿಯಮಿತ(ಕೆಎನ್ಎನ್ಎಲ್) ಮುಖ್ಯ ಎಂಜಿನಿಯರ್ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧ್ಯಕ್ಷ ಮಾತನಾಡಿ, “ರೈತರ ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚ 2023-24ನೇ ಸಾಲಿನಲ್ಲಿ ಆಯುಕ್ತರು ನಿಗದಿಪಡಿಸಿರುವ ದರಕ್ಕೆ ಅನುಗುಣವಾಗಿ ಸಕ್ಕರೆ ಕಾರ್ಖಾನೆ ಮಾಲೀಕರುಗಳು ನಡೆದುಕೊಳ್ಳದೆ ಇರುವುದು ಹಾಗೂ ಕಬ್ಬು ಕಟಾವಾದ 14 ದಿನದೊಳಗೆ ಹಣಪಾವತಿ ಮಾಡದಿರುವುದು ತುಂಬಾ ಖೇದಕರ ಸಂಗತಿಯಾಗಿದೆ” ಎಂದರು.

“ಕಬ್ಬು ಬೆಳೆಗಾರರ ಹಿಂದಿನ ಬಾಕಿಹಣ ಕೊಡಬೇಕೆಂದು ರಾಜ್ಯ ಸರ್ಕಾರದ ಕಬ್ಬು ಅಭಿವೃದ್ಧಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಆದರೆ ಈವರೆಗೆ ಸಕ್ಕರೆ ಕಾರ್ಖಾನೆಗಳು ಒಂದು ನಯಾ ಪೈಸೆ ಹಣ ಕೊಟ್ಟಿಲ್ಲ. ಸಚಿವರು ಇದರ ಬಗ್ಗೆ ಮಾತನಾಡಿ ಕಬ್ಬು ಬೆಳೆಗಾರರ ನೆರವಿಗೆ ಬರಬೇಕು” ಎಂದು ರೈತ ಸಂಘದ ಪರವಾಗಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸ್ವಚ್ಛತಾ ಭಾಗ್ಯ ಕಾಣದ ಅಂಕಲಗಾ ಗ್ರಾಮ

“ರೇಣುಕಾ ಶುಗರ್ಸ್ ಹಾವಳಗಾ ಸಕ್ಕರೆ ಕಾರ್ಖಾನೆ ಒಟ್ಟು 23,000 ಮಂದಿ ರೈತರ ಒಟ್ಟು 10 ಲಕ್ಷ ಟನ್ ಎಫ್ಅರ್ಪಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ₹112ರಂತೆ ಹತ್ತು ಲಕ್ಷ ಟನ್ನಿನ ಬಾಕಿ ಹಣ ಕೊಡಬೇಕು. ಕೆಆರ್ಪಿ ಚಿಣಮಗೆರಾ ಸಕ್ಕರೆ ಕಾರ್ಖಾನೆಯಲ್ಲಿ ಎಫ್ಆರ್ಪಿ ಪ್ರಕಾರ ಪ್ರತಿ ಟನ್ ಕಬ್ಬಿಗೆ 162 ರೂಪಾಯಿಯಂತೆ ಒಟ್ಟು 25,000 ಮಂದಿ ರೈತರ ಒಟ್ಟು 11 ಲಕ್ಷ ಟನ್ ಕಬ್ಬಿನ ಬಾಕಿ ಹಣ ಕೊಡಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿರಾದಾರ ಸಿದ್ದರಾಮ ದಣ್ಣೂರು, ಅಶೋಕ ಬಿ ಹೂಗಾರ್, ಶಿವಯೋಗಪ್ಪಾ, ಪ್ರಕಾಶ ಜಾನೆ, ದೇವು ಗುತ್ತೆದಾರ, ಚಂದಪ್ಪಾ ಪೂಜಾರಿ ಹಾವುನೂರು, ಅಂಬರಾಯ ಎಸ್ ಜಯಪ್ಪಗೊಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...