ಕಲಬುರಗಿ | ನರನಾಳ ಗ್ರಾಮದ ರೈತ ಆತ್ಮಹತ್ಯೆ

Date:

ಒಂದು ಎಕರೆ ಮೂವತ್ತು ಗುಂಟೆ ಹೊಲದಲ್ಲಿ ತೊಗರಿ ಬೆಳೆದಿದ್ದು, ಸಾಲ ಭಾದೆಯಿಂದಾಗಿ ಹೊಲದಲ್ಲಿ ವಿಷ ಕುಡಿದು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನರನಾಳ ಗ್ರಾಮದಲ್ಲಿ ನಡೆದಿದೆ.

ಚಿಂಚೊಳಿ ತಾಲೂಕಿನ ನರನಾಳ ಗ್ರಾಮದ ನಿವಾಸಿ ರೈತ ನಾಗಪ್ಪ(40) ರೈತ ನವೆಂಬರ್ 6ರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ತಮ್ಮ ಸ್ವಂತ ಹೊಲದಲ್ಲಿ ವಿಷ ಕುಡಿದಿದ್ದು, ಅವರನ್ನು ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 8ರಂದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರೈತ ನಾಗಪ್ಪನವರ ತಂದೆ ಹೆಸರಿನಲ್ಲಿರುವ ಜಮೀನಿನಲ್ಲಿ ತೊಗರಿ ಬೆಳೆ ಬೆಳೆಯಲಾಗಿತ್ತು. ಅತಿವೃಷ್ಠಿಯಿಂದಾಗಿ ಉದ್ದು, ಹೆಸರು ಬೆಳೆ ಹಾನಿಯಾಗಿದೆ. ಧರ್ಮಸ್ಥಳ ಸಂಘ ಮತ್ತು ಎಲ್‌ಎಂಟಿ ಸಂಘದಲ್ಲಿ ₹2 ಲಕ್ಷ ರೂಪಾಯಿ ಸಾಲ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಲ ವಸೂಲಿಗಾಗಿ ದಿನ ಬೆಳಿಗ್ಗೆ ರೈತ ನಾಗಪ್ಪನ ಮನೆ ಮುಂದೆ ಧರಣಿ ಕುಳಿತು ರೈತನಿಗೆ ಮಾನಸಿಕ ಹಿಂಸೆ ಕೊಟ್ಟು ಅವಮಾನ ಮಾಡುತ್ತಿರುದ್ದ ಧರ್ಮಸ್ಥಳ ಮತ್ತು ಎಲ್‌ಎಂಟಿ ಸಂಘಗಳ ಕಿರುಕುಳದಿಂದ ಜಿಗುಪ್ಸೆಗೊಂಡು ಸಾಲದ ಭಾದೆ ತಾಳಲಾರದೆ ರೈತ ನಾಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ l ಅಕ್ರಮವಾಗಿ ಮದ್ಯ ಮಾರಾಟ; ನಾಶ ಪಡಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು

ಮೃತ ನಾಗಪ್ಪನಿಗೆ ಒಬ್ಬ ಪುತ್ರಿ(8), ಒಬ್ಬ ಪುತ್ರ(3)ನಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡುವಂತೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...