ಕಲಬುರಗಿ | ಮನರೇಗಾ ಕಾರ್ಮಿಕರಿಗೆ ಕೆಲಸ ನೀಡಲು ಆಗ್ರಹಿಸಿ ರೈತ ಸಂಘ ಧರಣಿ

Date:

ಯಡಾಮಿ ತಾಲ್ಲೂಕಿನ ಆಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಕಾಸರಬೋಸಗಾ ಗ್ರಾಮದ ಕೂಲಿ ಕಾರ್ಮಿಕರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿಯಲ್ಲಿ ನಿರಂತರ ಕೆಲಸ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಪದಾಧಿಕಾರಿಗಳು ಧರಣಿ ನಡೆಸಿದರು.

ಆಲೂರು ಗ್ರಾಮ ಪಂಚಾಯತ ಕಾರ್ಯಾಲಯ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿದ ರೈತ ಸಂಘದ ಪದಾಧಿಕಾರಿಗಳು, ಕಾರ್ಮಿಕರು ಗ್ರಾ.ಪಂ. ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ದಾವೂದ್ ಮುಜೇವಾರ ಮಾತನಾಡಿ, ʼಬೇಸಿಗೆಯಲ್ಲಿ ಕೆಲಸವಿಲ್ಲದೆ ಕಾರ್ಮಿಕರು ಪರದಾಡುವಂತಾಗಿ ಕೆಲಸಕ್ಕಾಗಿ ನಗರ, ಪಟ್ಟಣದತ್ತ ವಲಸೆ ಹೋಗುತ್ತಿದ್ದಾರೆ. ನರೇಗಾ ಯೋಜನೆಯಡಿ ಕಾರ್ಮಿಕರಿಗೆ ನಿರಂತರ ಕೆಲಸ ನೀಡಬೇಕು, ನೀರುದ್ಯೋಗಿ ಭತ್ಯೆ ನೀಡಿದರೆ ಕಾರ್ಮಿಕರ ಬದುಕಿಗೆ ಆಸರೆಯಾಗುತ್ತದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನರೇಗಾ ಕೆಲಸದ ವೇಳೆ ಮೂಲಭೂತ ಸೌಕರ್ಯ, ಉದ್ಯೋಗ ಚೀಟಿ ವಿತರಿಸಿ ಕೆಲಸ ನೀಡಬೇಕು. ಕಾಸರಬೋಸಗಾ ಗ್ರಾಮದಲ್ಲಿ ಸರಕಾರ ಯೋಜನೆ ಅಡಿಯಲ್ಲಿ ಬಡವರಿಗೆ ಮಂಜೂರಾದ ಮನೆಗಳ ಮಾಹಿತಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. 2023-24 ಹಾಗೂ 2024-25 ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳ ವಿವರ ನೀಡಬೇಕುʼ ಎಂದು ಆಗ್ರಹಿಸಿದರು.

ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಸರಸ್ಕೃತಿ ಕಾಸರಬೋಸಗಾ, ಈರಣ್ಣಾ ಚೌಡಾಪೂರ ಕಾಸರಬೋಸಗಾ, ಅವ್ವಣ್ಣ, ಚೌಡಾಪೂರ ಕಾಸರಬೋಸಗಾ, ಖಾದರ್ ಪಟೇಲ್‌ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...