ಕಲಬುರಗಿ | ಪಹಣಿಯಲ್ಲಿ ವಕ್ಫ್ ಹೆಸರು: ರೈತರಿಂದ ಪ್ರತಿಭಟನೆ

Date:

ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ 2012 ರಿಂದ 2016 ಎಂದು ನಮೂದು ಮಾಡಿರುವ ಹೆಸರುಗಳು ತಕ್ಷಣದಲ್ಲಿ ತೆಗೆಯಬೇಕು ಇಲ್ಲದಿದ್ದಲ್ಲಿ ನಿರಂತರವಾಗಿ ಹೋರಾಟಗಳನ್ನು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೋರಾಟಗಾರ ಜಗದೀಶ್ ಸಾಗರ್ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಟೆಂಗಳಿ ಕ್ರಾಸ್ ಹತ್ತಿರ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ರೈತ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರಗಳು ರೈತರ ಹಿತಾಸಕ್ತಿಯ ಬಗ್ಗೆ ಯೋಚಿಸದೆ ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಿಸಿದೆ. ಬಡ ರೈತರ ಪಹಣಿಯಲ್ಲಿನ ವಕ್ಫ್ ಮಂಡಳಿಯ ಹೆಸರನ್ನು ತೆಗೆದು ಹಾಕಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಸಂಘಟನೆಯಿಂದ ರಾಜ್ಯಾದ್ಯಂತ ರಾಜ್ಯ ಮತ್ತು ರಾಷ್ಟ್ರ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ‌ನೀಡಿದರು.

ಚಿಂಚೋಳಿ ತಾಲೂಕಿನ ಸಿದ್ಧಸಿರಿ ಸಕ್ಕರೆ ಕಾರ್ಖಾನೆ ತಕ್ಷಣ ಪ್ರಾರಂಭಿಸಬೇಕು, ಜಿಲ್ಲಾದ್ಯಂತ ಅಕ್ರಮ ಮರಳುಗಾರಿಕೆ ತಡೆಹಿಡಿಯಬೇಕು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ಜೆ.ಜೆ.ಎಮ್ ಕಾಮಗಾರಿ ತನಿಖೆ ಮಾಡುವ ಕುರಿತು, ಸರಕಾರಿ ಜಮೀನು ಅಕ್ರಮದಿಂದ ಸಕ್ರಮ ಮಾಡಬೇಕು, ಜಿಲ್ಲಾದ್ಯಂತ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಹಿಡಿಯಬೇಕು ಎಂಬ ಬೇಡಿಕೆಗಳನ್ನು ಉಲ್ಲೇಖಿಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರೈತ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ವಿಠಲ್ ಮಾಕಾ, ಜಿಲ್ಲಾ ಕಾರ್ಯದರ್ಶಿ ಪರಮೇಶ್ವರ್ ಝಳಕಿ, ಜಿಲ್ಲಾ ಸದಸ್ಯ ವಿಜಯಕುಮಾರ್ ಚೌವ್ಹಾಣ್, ತಾಲೂಕು ಅಧ್ಯಕ್ಷರಾದ ಶಿವಯೋಗಿ ಪೂಜಾರಿ, ಪರಮೇಶ್ವರ್ ಮತ್ತಿಮೂಡ್, ಮೆಹಬೂಬ ಪಟೇಲ್, ಮಲ್ಲಿಕಾರ್ಜುನ ಭೀಮನಳ್ಳಿಕರ್, ಮಕ್ಬೂಲ್ ಪಟೇಲ್, ಮರೆಪ್ಪಾ ನಿಡಗುಂದಾ, ಡಾ.ಸದಾಶಿವ, ಮಲ್ಲಿನಾಥ ಪೂಜಾರಿ, ರಾಮರಾವ್ ಕುಲಕರ್ಣಿ ಸೇರಿದಂತೆ ಅನೇಕರು ಇದ್ದರು.

ವರದಿ: ಅನಂತ್ ದೇಶಪಾಂಡೆ, ವಾಲೆಂಟಿಯರ್

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...