ಕಲಬುರಗಿ | ಶಾಸಕರ ಹೆಸರಲ್ಲಿ ನಕಲಿ ಪತ್ರ; ದೂರು ದಾಖಲಿಸಿದ ಆಳಂದ ಶಾಸಕ

Date:

ಅನುದಾನ ಬಿಡುಗಡೆಗೆ ಬೇಡಿಕೆ ಇಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಳಂದ ಶಾಸಕ ಬಿ.ಆರ್‌ ಪಾಟೀಲ್‌ ಪತ್ರ ಬರೆದಿದ್ದಾರೆ ಎಂದು ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ‘ಆ ಪತ್ರವನ್ನು ನಾನು ಬರೆದಿಲ್ಲ. ಯಾರೋ ಕಿಡಿಗೇಡಿಗಳು ನಕಲಿ ಪತ್ರ ಸೃಷ್ಟಿಸಿದ್ದಾರೆ’ ಎಂದಿರುವ ಶಾಸಕ ಬಿ.ಆರ್ ಪಾಟೀಲ್ ಕಲಬುರಗಿ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

“ನಕಲಿ ಲೆಡರ್‌ಹೆಡ್‌ ಬಳಸಿಕೊಂಡು ನನ್ನ ಹೆಸರಿನಲ್ಲಿ ಪತ್ರ ಬರೆದು, ವೈರಲ್‌ ಮಾಡಿದ್ದಾರೆ. ಇಲ್ಲಸಲ್ಲದ ವಿಷಯವನ್ನು ಪ್ರಸ್ತಾಪ ಮಾಡಿ ನನ್ನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರ ನಡುವೆ ದ್ವೇಷ ಹುಟ್ಟುಹಾಕಲು ಪ್ರಯತ್ನಿಸಿದ್ದಾರೆ. ರಾಜಕೀಯ ಹುನ್ನಾರದಿಂದ ಈ ಪತ್ರ ಸೃಷ್ಠಿಸಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

“ವೈರಲ್ ಆಗಿರುವ ನಕಲಿ ಪತ್ರದಲ್ಲಿರುವ ಲೆಟರ್‌ಹೆಡ್‌ ಈಗಿನದ್ದಲ್ಲ. ನಾನು ಕಳೆದ ಬಾರಿ ಶಾಸಕನಾಗಿದ್ದಾಗ ವಾಸವಿದ್ದ ಕಲಬುರಗಿ ಶಾಂತಿನಗರದ ಹಳೇ ವಿಳಾಸವಿರುವ ಈ ಹೆಟ್‌ಹೆಡ್‌ಅನ್ನು ಕಿಡಿಗೇಡಿಗಳು ಕಲರ್‌ ಜೆರಾಕ್ಸ್‌ ಮಾಡಿಕೊಂಡು, ಪತ್ರ ಸೃಷ್ಟಿಸಿದ್ದಾರೆ. ನಾನು ನಾಲ್ಕು ವರ್ಷದಿಂದ ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿ ವಾಸಿಸುತ್ತಿದ್ದೇನೆ. ನನ್ನ ಈಗಿನ ಲೆಟರ್‌ಹೆಡ್‌ನಲ್ಲಿ ಹೊಸ ವಿಳಾಸವಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಕಲಿ ಪತ್ರ ಸೃಷ್ಟಿಸಿ, ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ತನಿಖೆಯಾಗಬೇಕು. ಪತ್ರದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಬಯಲಿಗೆ ತರಬೇಕು. ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...