ಕಲಬುರಗಿ | ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಉಚಿತ ವೈದ್ಯಕೀಯ ತಪಾಸಣೆ

Date:

ಭೀಮಾ ನದಿಯ ಪ್ರವಾಹದಿಂದ ಚಿತ್ತಾಪುರ ತಾಲ್ಲೂಕಿನ ಕಡಬೂರು ಮತ್ತು ಕುಂದನೂರ ಗ್ರಾಮಗಳು ತೀವ್ರ ಹಾನಿಗೊಳಗಾದವು. ಮನೆಗಳು, ಕೃಷಿ ಜಮೀನುಗಳು ಮತ್ತು ಜೀವನೋಪಾಯ ನಷ್ಟಗೊಂಡು ಸಾವಿರಾರು ಜನರು ತಾತ್ಕಾಲಿಕ ಆಶ್ರಯಗಳಲ್ಲಿ ಬದುಕುತ್ತಿದ್ದಾರೆ. ಪ್ರವಾಹದ ನಂತರ ಉಂಟಾದ ಆರೋಗ್ಯ ತೊಂದರೆ, ಮಾಲಿನ್ಯ ಮತ್ತು ಸೋಂಕು ಹರಡುವ ಅಪಾಯವನ್ನು ಮನಗಂಡು ಮೆಡಿಕಲ್ ಸರ್ವಿಸ್ ಸೆಂಟರ್ (ಎಮ್‌ಎಸ್‌ಸಿ), ವೈಟ್ ಸ್ಪಾರ್ಕ್ಸ್, ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಶನಿವಾರ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವು ಎರಡು ಗ್ರಾಮಗಳಲ್ಲಿ ನಡೆದಿದ್ದು, ಸಾವಿರಕ್ಕೂ ಹೆಚ್ಚು ಸಂತ್ರಸ್ತರು ಮಲೇರಿಯಾ, ಟೈಫಾಯ್ಡ್, ಚರ್ಮರೋಗ, ಕಾಲರಾ ಮುಂತಾದ ರೋಗಗಳ ತಡೆಗೆ ಆರೋಗ್ಯ ಸೇವೆ ಪಡೆದರು. ಉಚಿತ ಔಷಧಿ, ಪರೀಕ್ಷೆಗಳು ಮತ್ತು ಆರೋಗ್ಯ ಸಲಹೆಗಳು ಪಡೆದುಕೊಂಡಿದ್ದಾರೆ.

WhatsApp Image 2025 10 19 at 7.46.25 AM

ಶಿಬಿರದಲ್ಲಿ ಡಾ.ವಸುದೇಂದ್ರ ಎನ್. (ನೇತ್ರ ತಜ್ಞ, ದಾವಣಗೆರೆ), ಡಾ. ದಿವ್ಯಾ ಪಿ.(ಬಳ್ಳಾರಿ), ಡಾ. ವರ್ಷಾ ಆರ್ ಬಿ (ದಾವಣಗೆರೆ), ಡಾ. ಸೀಮಾ ದೇಶಪಾಂಡೆ (ಕಲಬುರಗಿ), ಡಾ. ಕರುಣಾ ಕಾಂಬಳೆ (ಆಯುಷ್ ವೈದ್ಯಾಧಿಕಾರಿ, ವಾಡಿ) ಮತ್ತು ಡಾ. ಮಂಜುಳಾ ಎಸ್. ಬೂಳ ಇದ್ದರು. ಆರೋಗ್ಯ ನಿರೀಕ್ಷಕ ದೇವೇಂದ್ರಪ್ಪ, ಫಾರ್ಮಸಿಸ್ಟ್ ಉಪೇಂದ್ರ ಎನ್ ಡಿ ಮತ್ತು ಸಹಾಯಕ ಸಿಬ್ಬಂದಿಯವರು ಶಿಬಿರದ ಕಾರ್ಯಾಚರಣೆಗೆ ನೆರವೇರಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಕೆಕೆಎಮ್‌ಎಸ್ ರಾಜ್ಯ ಅಧ್ಯಕ್ಷ ಎಂ. ಶಶಿಧರ್ ಮಾತನಾಡಿ, ‘ಪ್ರವಾಹದಿಂದ ಹಾನಿಗೊಳಗಾದ ಗ್ರಾಮಸ್ಥರ ಆರೋಗ್ಯವನ್ನು ರಕ್ಷಿಸುವುದು ನಮ್ಮ ಮುಖ್ಯ ಗುರಿ. ಈ ಶಿಬಿರವು ತುರ್ತು ಸೇವೆಗಳನ್ನು ಒದಗಿಸುವ ಮೂಲಕ ಜನರ ಬದುಕು ಉಳಿಸಲು ಸಹಾಯವಾಗಿದೆ. ಸರ್ಕಾರ ಮತ್ತು ಸ್ಥಳೀಯ ಆಡಳಿತ ಸಹಕಾರ ವಹಿಸಬೇಕಾಗಿದೆ’ ಎಂದರು.

ಇದನ್ನು ಓದಿದ್ದೀರಾ? ಕಲಬುರಗಿ | ಆರ್‌ಎಸ್‌ಎಸ್ ಭಗವಾಧ್ವಜ, ಬ್ಯಾನರ್‌ ಹಾಗೂ ಕಟೌಟ್‌ ತೆರವು ; ನಗರದಲ್ಲಿ ಸಂಚಲನ

ಶಿಬಿರದಲ್ಲಿ ಕಡಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಸುಮಿಯಾ ಹಾಗೂ ಸಂಘಟಕರು ವೀರಭದ್ರಪ್ಪ ಆರ್.ಕೆ., ಶರಣು ಹೇರೂರ, ಗೌತಮ್ ಪರ್ತೂರ್‌ಕರ್, ವೆಂಕಟೇಶ ದೇವದುರ್ಗ, ವಿಠ್ಠಲ್ ರಾಠೋಡ್, ರಾಜು ವಡೆಯರ್, ಗೋದಾವರಿ ಕಾಂಬಳೆ, ಗೋವಿಂದ ಯಳವಾರ, ಶ್ರೀಶೈಲ್ ಕಡಬೂರ, ಸಿದ್ದಾರ್ಥ ತಿಪ್ಪನೂರ, ಸಂಪತ್, ಗೋವಿಂದ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...