ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ; ಅಪ್ಪ, ಮಗನಿಗೆ ಜೈಲು ಶಿಕ್ಷೆ

Date:

ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದರಿಂದ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯವು “ಅಪರಾಧಿಯಾದ ಮಗನಿಗೆ 30 ವರ್ಷ ಹಾಗೂ ಆತನ ತಂದೆಗೆ 5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ಆರೋಪಿಗಳಾದ ಸತೀಶ್ ಕಾಶಿ ಸೂರ್ಯಕಾಂತ(21) ಹಾಗೂ ಸೂರ್ಯಕಾಂತ ಕಾಶಿ(45) ಶಿಕ್ಷೆಗೆ ಒಳಗಾದವರು. ಬಾಲಕಿಯನ್ನು ಪ್ರೀತಿಸುವುದಾಗಿ ಹಿಂದೆ ಬಿದ್ದಿದ್ದ ಸತೀಶ್, 2022ರ ಮೇ 5ರಂದು ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಆಗ, ಬಾಲಕಿಯ ಕುಟುಂಬಸ್ಥರು ದೂರು ಕೊಡಲು ಮುಂದಾದರು. 18 ವರ್ಷ ತುಂಬಿದ ಬಳಿಕ ಮದುವೆಯಾಗುವುದಾಗಿ ಹೇಳಿದ ಅಪರಾಧಿ, ಬಾಲಕಿಯನ್ನು ತನ್ನ ಮನೆಯಲ್ಲಿ ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡಿದ್ದು, ಆಗಾಗ ಅತ್ಯಾಚಾರವನ್ನೂ ಎಸಗಿದ್ದ.

ಸತೀಶ್ ಕುಟುಂಬಸ್ಥರು ಬಾಲಕಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದರು. ಜತೆಗೆ ಸತೀಶ್ ತಂದೆ ಸೂರ್ಯಕಾಂತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಜೀವ ಬೆದರಿಕೆಯನ್ನೂ ಹಾಕಿದ್ದ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐಗಳಾದ ಶಿವಾನಂದ ಎನ್ ಅಂಬಿಗೇರ ಹಾಗೂ ಪ್ರಕಾಶ್ ಆರ್ ಯಾತನೂರ್ ಅವರು ತನಿಖೆ ನಡೆಸಿದ್ದರು. ವಿವಿಧ ಕಾಯ್ದೆಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಮನಗರ | ಡಿ ದೇವರಾಜ ಅರಸು ಜನ್ಮದಿನಾಚರಣೆ

ವಾದ-ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ(ವಿಶೇಷ ಪೋಕ್ಸೊ) ಎಫ್‌ಟಿಎಸ್‌ಸಿ-1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಸತೀಶ್‌ಗೆ ಪೋಕ್ಸೊ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ 30 ವರ್ಷ ಜೈಲು ಶಿಕ್ಷೆ ಮತ್ತು ₹20,000 ದಂಡ ಹಾಗೂ ಸೂರ್ಯಕಾಂತಗೆ 5 ವರ್ಷ ಜೈಲು ಶಿಕ್ಷೆ ಮತ್ತು 3,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ ತುಪ್ಪದ ಅವರು ವಾದ ಮಂಡಿಸಿದರು. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹7 ಲಕ್ಷ ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ವರದಿ : ವಾಲೆಂಟಿಯರ್‌ ಅನಂತ ದೇಶಪಾಂಡೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...