ಕಲಬುರಗಿ | ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಮಳಿಗೆ ತೆರೆಯಲು ಆದ್ಯತೆ ನೀಡಿ: ಕೆ.ನೀಲಾ

Date:

ಕರ್ನಾಟಕದ ನಂದಿನಿ ಹಾಲು ಎಲ್ಲ ರೀತಿಯಲ್ಲಿಯೂ ಉತ್ತಮ ಗುಣಮಟ್ಟದ ವೈವಿಧ್ಯಮಯ ಉತ್ಪನ್ನಗಳನ್ನು ತಯಾರಿಸಿ ಮಾರುತ್ತ ಜನಮನ್ನಣೆ‌ ಗಳಿಸಿದ್ದು, ಬೆಂಗಳೂರು ಮೆಟ್ರೋ ರೈಲು ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಆದ್ಯತೆ ನೀಡಬೇಕೆಂದು ಸಿಪಿಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಅಭಿಪ್ರಾಯ ವ್ಯಕ್ತಪಡಿಸಿದರು.

ʼಬಹುತೇಕ ಸಣ್ಣ ಮತ್ತು ಅತಿ ಸಣ್ಣ ಹೈನುಗಾರರಿಂದ ಪ್ರತಿದಿನ ಸುಮಾರು 1 ಕೋಟಿ ಲೀಟರ್ ಗಿಂತ ಹೆಚ್ಚು ಹಾಲು ಸಂಗ್ರಹಣೆ ಮಾಡುತ್ತಿರುವ ಕೆಎಂಎಫ್ ಬಹುತೇಕ ಮಾರುಕಟ್ಟೆಗೆ ಬೆಂಗಳೂರು ಮಹಾನಗರವನ್ನೇ ಆಶ್ರಯಿಸಿದೆ. ರೈತರ ಸಹಕಾರಿಯಾಗಿರುವ ನಂದಿನಿಯನ್ನು ಬೆಳೆಸುವುದು ಹಾಗೂ ಉಳಿಸುವುದು ಸರ್ಕಾರದ ಆದ್ಯತೆಯಾಗಬೇಕು. ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಲ್ಲಿ ಒಂದಾದ ಶಾಲಾ ಮಕ್ಕಳಿಗೆ ಹಾಲು ವಿತರಣೆಗೆ ಸರಬರಾಜು ಆಗುತ್ತಿರುವುದು ನಂದಿನಿ ಹಾಲು ಆಗಿದೆ. ಸಂಗ್ರಹವಾಗುವ ಎಲ್ಲ ಹಾಲು ಮಾರಾಟವಾಗುವುದಿಲ್ಲ. ಹಲವು ಉಪ‌ ಉತ್ಪನ್ನಗಳನ್ನು ತಯಾರಿಸಿದ ಮೇಲೂ ಹಾಲು ಹೆಚ್ಚುವರಿಯಾಗಿ ಉಳಿಯುತ್ತದೆʼ ಎಂದು ಹೇಳಿದರು.

ʼಪ್ರತಿಯೊಂದು ರಾಜ್ಯವು ತನ್ನದೇ ಆದ ಸಹಕಾರಿ ಒಕ್ಕೂಟವನ್ನು ಹೊಂದಿದ್ದು, ಕೆಲವು ರಾಜ್ಯಗಳು ಕೊರತೆಯನ್ನು ಕೆಲವು ರಾಜ್ಯಗಳು ಮಿಗತೆಯನ್ನು ಹೊಂದಿವೆ. ಇಂತಹ ಸಂದರ್ಭದಲ್ಲಿ ಪರಸ್ಪರರ ಮಾರುಕಟ್ಟೆ ಕಸಿಯುವ ಆನಾರೋಗ್ಯಕರ ಪೈಪೋಟಿ ನಿವಾರಿಸಲು ಈ ಹಿಂದೆ ಎನ್‌ಡಿಡಿಬಿ ಮೂಲಕ ಹೆಚ್ಚುವರಿ ಹಾಲು ಲಾಭ ಇರುವ ಸಹಕಾರಿ ಒಕ್ಕೂಟಗಳಿಂದ ಪಡೆದು ಕೊರತೆ ಇರುವ ರಾಜ್ಯಗಳಲ್ಲಿ ಆ ರಾಜ್ಯದ ಬ್ರಾಂಡ್ ಹೆಸರಿನಲ್ಲೇ ಮಾರಾಟ ಮಾಡಲು ಕ್ರಮ ವಹಿಸಲಾಗುತ್ತಿತ್ತು .ಆ ಮೂಲಕ ರಾಜ್ಯಗಳ ಸಹಕಾರಿ ಒಕ್ಕೂಟಗಳು ಪರಸ್ಪರ ಆನಾರೋಗ್ಯಕರ ಪೈಪೋಟಿ ಗೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲಾಗುತ್ತಿತ್ತುʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಹಕಾರಿ ವಲಯಕ್ಕೆ ಅಮುಲ್ ಲಗ್ಗೆ ಇಡುತ್ತದೆ ಎಂಬುದು ಕೂಡಾ ಚರ್ಚೆಯ ವಿಷಯವಾಗಿತ್ತು. ಈಗ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕೆಎಂಎಫ್‌ನ ನೂತನ ನಿರ್ದೇಶಕರಾಗಿದ್ದು, ಮುಂದೆ
ಅಧ್ಯಕ್ಷರಾಗಲು ಎಲ್ಲಾ ತಯಾರಿ ನಡೆಸಿರುವ ಸಂದರ್ಭದಲ್ಲಿ ಅಮುಲ್ ಉತ್ಪನ್ನಗಳನ್ನು ಮೆಟ್ರೋ ನಿಲ್ದಾಣಗಳು ಅಥವಾ ಇತರ ಸರಕಾರಿ ಒಡೆತನದ ಜಾಗಗಳಲ್ಲಿ ಮಾರಾಟಕ್ಕೆ ಅನುಕೂಲ ಮಾಡಿಕೊಡುವುದು ಎಷ್ಟು ಸರಿ? ಟೆಂಡರ್ ಪ್ರಕ್ರಿಯೆಯಲ್ಲಿ ಅಮುಲ್ ಮಾತ್ರ ಭಾಗವಹಿಸಿತ್ತು ಕೆಎಂಎಫ್‌ ಭಾಗವಹಿಸಿಲ್ಲ ಎಂದರೆ ಅದರ ಹೊಣೆ ಯಾರದು? ಟೆಂಡರ್ ಹಾಕದಿರಲು ಕಾರಣವೇನೆಂದು ಬಹಿರಂಗ ಪಡಿಸಬೇಕುʼ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಕಲಬುರಗಿ | ಕರ್ತವ್ಯ ಲೋಪ ಆರೋಪ : ಪ್ರಭಾರ ಮುಖ್ಯಶಿಕ್ಷಕ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...