ಕಲಬುರಗಿ | ಪೇಜಾವರ ಸ್ವಾಮಿ ಹೇಳಿಕೆಗೆ ಗೋಪಾಲ ಎಲ್ ನಾಟೇಕರ್ ಖಂಡನೆ

Date:

ಉಡುಪಿ ಪೇಜಾವರ‌ ಮಠದ ವಿಶ್ವತೀರ್ಥ ಸ್ವಾಮೀಜಿ(ಪೇಜಾವರ ಸ್ವಾಮಿ) ʼಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ್ಯಾ ನಂತರ ಜಾತ್ಯತೀತ ರಾಷ್ಟ್ರವಾಗಿದೆ. ಈಗ ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕುʼ ಎಂದು ಹೇಳಿಕೆ ನೀಡಿರುವುದನ್ನು ಅಂಬೇಡ್ಕರ್ ಯುವಸೇನೆ ತಾಲೂಕು ಅಧ್ಯಕ್ಷ ಗೋಪಾಲ ಎಲ್ ನಾಟೇಕರ್ ಖಂಡಿಸಿದ್ದಾರೆ.

ಕಲಬುರಗಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು “ಇಲ್ಲಿ ಅಗೌರವಕ್ಕೆ ಬಲಿಯಾಗಿರುವ ಹಿಂದೂಗಳು ಯಾರು? ಯಾವ ರೀತಿಯಾಗಿ ಅವರಿಗೆ ಅವಮಾನವಾಗಿದೆ. ಸಂವಿಧಾನದಲ್ಲಿ ಹಿಂದೂಗಳಿಗೆ ಅಗೌರವಿಸುವ ಅಂಶ ಯಾವುದಿದೆ. ಇಲ್ಲಿಯತನಕ ಯಾವ ಹಿಂದೂಗಳು ತಮ್ಮ ಗೌರವಕ್ಕೆ ಚ್ಯುತಿಯಾಗಿದೆಯೆಂದು ಯಾವ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ಇವರು ಯಾವುದೇ ಆಧಾರಗಳಿಲ್ಲದೆ ಗಾಳಿಯಲ್ಲಿ ಗುಂಡು ಹೊಡೆದಂತೆ ಮಾತಾಡಿರುವುದರ ಉದ್ದೇಶ ಬೇರೆಯೇ ಇದ್ದಂತೆ ಕಾಣುತ್ತದೆ” ಎಂದು ಕಿಡಿಕಾರಿದರು.

“ದೌರ್ಜನ್ಯಕ್ಕೆ ಬಲಿಯಾಗುತ್ತಿರುವ ಹಿಂದೂಗಳೆಲ್ಲರಿಗೂ ಸ್ವತಂತ್ರ ಭಾರತದ ಸಂವಿಧಾನವೇ ಸನ್ಮಾನ ಮತ್ತು ಸಂರಕ್ಷಣೆ ನೀಡಿದೆ. ವಾಸ್ತವವಾಗಿ ಅಗೌರವ, ಅಪಮಾನ, ಹಿಂಸೆ, ಹತ್ಯೆಗಳಿಗೆ ಬಲಿಯಾಗುತ್ತಿರುವವರೆಲ್ಲರೂ ಹಿಂದೂಗಳೆಂದೇ ಗುರುತಿಸಲ್ಪಟ್ಟಿರುವ ಎಸ್‌ಸಿ/ಎಸ್‌ಟಿಗಳೇ ಆಗಿದ್ದಾರೆ ಮತ್ತು ತಾವೂ ಕೂಡಾ ಹಿಂದೂಗಳೆಂದು ಹೇಳಿಕೊಳ್ಳುತ್ತಿರುವವರಿಂದಲೇ ಈ ಹಿಂದೂಗಳೆಲ್ಲರೂ ಅಗೌರವ, ಅಪಮಾನ ಮತ್ತು ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪಕ್ಷಾತೀತವಾಗಿ ಕೋಲಿ ಸಮಾಜದ ಸಂಘಟನೆಯಾಗಲಿ: ಭೀಮಣ್ಣ ಸಾಲಿ

“ಬ್ರಾಹ್ಮಣ್ಯದ ಸಂರಕ್ಷಕರಾದ ಪೇಜಾವರರು, ತಮ್ಮವರ ಬ್ರಾಹ್ಮಣ್ಯ ಧೋರಣೆಗೆ ಬಲಿಯಾಗುತ್ತಿರುವ ಎಸ್‌ಸಿ/ಎಸ್‌ಟಿ ಮತ್ತಿತರರ ಶೋಷಿತರಿಗೆ ಸಂರಕ್ಷಣೆ ನೀಡುತ್ತಿರುವ ಸಂವಿಧಾನವನ್ನು ಬದಲಿಸಬೇಕು ಎನ್ನುತ್ತಿದ್ದಾರೆ. ಅಂದರೆ, ಹಳೆಯ ಮನುಸ್ಮೃತಿಯನ್ನೇ ಜಾರಿಗೆ ತರಬೇಕು ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಇವರ ಸಂವಿಧಾನ-ವಿರೋಧಿ ಹೇಳಿಕೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಮತ್ತು ಇಂತಹ ಹೇಳಿಕೆ ನೀಡಿರುವ ಈ ಮನುವಾದಿ ಪೇಜಾವರರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...