ಸರ್ಕಾರಿ ಶಿಕ್ಷಕರ ಗೈರು ಹಾಜರಿ ತಡೆಗೆ ‘ಜಿಪಿಎಸ್‌’ ಕ್ರಮ

Date:

ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕರು ಜಿಪಿಎಸ್‌ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್) ಮೂಲಕ ತಾವಿರುವ ಸ್ಥಳಗಳನ್ನು ದೃಢೀಕರಿಸಬೇಕು ಎಂದು ಅಲ್ಲಿನ ಬಿಇಒ ವೀರಣ್ಣ ಬೊಮ್ಮನಳ್ಳಿ ಸೂಚಿಸಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರು ಗೈರು ಹಾಜರಾಗುತ್ತಿದ್ದಾರೆ. ಯಾವಾಗಲೋ ಬಂದು ಹಾಜರಾತಿ ಹಾಕುತ್ತಾರೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆ ಈ ನಿರ್ದೇಶನ ಹೊರಡಿಸಿದ್ದಾರೆ. ಅದರಂತೆ, ಕಲಬುರಗಿ ಉತ್ತರ ಬಿಇಒ ಕಚೇರಿ ವ್ಯಾಪ್ತಿಯ 207 ಸರ್ಕಾರಿ ಶಾಲೆಗಳ ಶಿಕ್ಷಕರು ಪ್ರತಿ ದಿನ ಬೆಳಗ್ಗೆ ಪಾರ್ಥನೆಯ ಸಮಯ ಮತ್ತು ಶಾಲೆ ಮುಚ್ಚುವ ಸಮಯದಲ್ಲಿ ಜಿಪಿಎಸ್‌ ಸ್ಥಳಗಳನ್ನು ವಾಟ್ಸಾಪ್‌ನಲ್ಲಿ ದೃಢಪಡಿಸಬೇಕು ಎಂದು ಸೂಚಿಸಲಾಗಿದೆ.

ಈ ಕ್ರಮವು ಕಡ್ಡಾಯವಲ್ಲದಿದ್ದರೂ, ಶಿಕ್ಷಕರು ಮತ್ತು ಪೋಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಶಿಕ್ಷಕರು ವಿಶೇಷವಾಗಿ ದೂರದ ಪ್ರದೇಶಗಳ ಶಾಲೆಗಳಿಗೆ ತೆರಳುವವರು ತರಗತಿಗಳನ್ನು ಬಂಕ್ ಮಾಡುವುದು ಮತ್ತು ಅನಧಿಕೃತ ರಜೆ ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಹಲವಾರು ಪೋಷಕರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಲಾಪುರ ತಾಲೂಕಿನಲ್ಲಿ ಶಿಕ್ಷಕರ ಗೈರು ಹಾಜರಾತಿಯ ದೂರುಗಳು ಹೆಚ್ಚಾಗಿ ಕೇಳಿಬಂದಿವೆ. ಇತ್ತೀಚೆಗಷ್ಟೇ ಕಮಲಾಪುರ ಹೊಸ ತಾಲೂಕಾಗಿ ಘೋಷಣೆಯಾಗಿದ್ದು, ಇನ್ನೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸ್ಥಾಪನೆಯಾಗಿಲ್ಲ. ಕಲಬುರಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಕಮಲಪುರ ತಾಲೂಕಿನ ಹಲವಾರು ಶಾಲೆಗಳು 70 ಕಿ.ಮೀ ಅಧಿಕ ದೂರದಲ್ಲಿವೆ. ಪರಿಣಾಮವಾಗಿ ಶಿಕ್ಷಣಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಲು ಸಾಧ್ಯವಾಗದೆ, ಶಿಕ್ಷಕರ ಮೇಲೆ ನಿಗಾ ಇಡುವುದು ಕಷ್ಟವಾಗಿದೆ. ಹೀಗಾಗಿ, ಜಿಪಿಎಸ್‌ ಮೊರೆ ಹೋಗಿದ್ದೇವೆ ಎಂದು ಬಿಇಒ ಬೊಮ್ಮನಳ್ಳಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

“ನಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ 226 ವಿದ್ಯಾರ್ಥಿಗಳಿದ್ದಾರೆ. ಆದರೆ, ಕೇವಲ ನಾಲ್ವರು ಶಿಕ್ಷಕರಿದ್ದಾರೆ. ಈ ಹಿಂದೆ ಖಾಯಂ ಶಿಕ್ಷಕರು ಅತಿಥಿ ಶಿಕ್ಷಕರಿಗೆ ತರಗತಿಗಳನ್ನು ನಡೆಸುವಂತೆ ಹೇಳಿ, ಗೈರಾಗುತ್ತಿದ್ದರು. ಆದರೆ, ಈಗ ಅನುಸರಿಸಿದ ಕಟ್ಟುನಿಟ್ಟಿನ ಕ್ರಮಗಳು ಶಿಕ್ಷಕರು ಶಾಲೆಗೆ ಬರುವಂತೆ ಮಾಡಿದೆ” ಎಂದು ಮರಮಂಚಿ ತಾಂಡಾ ನಿವಾಸಿ ಸಂಜೀವ್ ಕುಮಾರ್ ರಾಠೋಡ್ ಹೇಳಿರುವುದಾಗಿ ಡಿಎಚ್ ವರದಿ ಮಾಡಿದೆ.

“ಬಹುತೇಕ ಗ್ರಾಮಗಳು ಮತ್ತು ತಾಂಡಾಗಳಿಗೆ ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲ. ಈಗ ಅವರು ಪ್ರತಿದಿನ ತಮ್ಮ ಶಾಲೆಗಳಿಗೆ ಪ್ರಯಾಣಿಸಲು ಕ್ರೂಸರ್ ಮತ್ತು ಇತರ ವಾಹನಗಳನ್ನು ಬಾಡಿಗೆಗೆ ಪಡೆಯುತ್ತಿದ್ದಾರೆ” ಎಂದು ಕಣ್ಣೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಮೇಶ್ ಕೊಪ್ಪರಾದ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೀದರ್ | ಔರಾದ ಶಾಸಕರ ಊರಿನಲ್ಲೇ ಇಲ್ಲ ಖಾಯಂ ಶಿಕ್ಷಕರು

“ಶಿಕ್ಷಕರು ಗೈರುಹಾಜರಾಗುತ್ತಿರುವ ಬಗ್ಗೆ ಇಲಾಖೆಗೆ ಹಲವಾರು ದೂರುಗಳು ಬಂದಿವೆ. ಅವರನ್ನು ನಿಯಂತ್ರಿಸಲು ಜಿಪಿಎಸ್ ಕ್ರಮ ಉತ್ತಮವಾಗಿದೆ. ಎಲ್ಲ ಸರ್ಕಾರಿ ಶಾಲೆಗಳಿಗೂ ವಿಸ್ತರಿಸುವ ಮುನ್ನ ಸಾಧಕ-ಬಾಧಕಗಳ ಕುರಿತು ಅಧ್ಯಯನ ಮಾಡಲಾಗುವುದು” ಎಂದು ಕಲ್ಯಾಣ ಕರ್ನಾಟಕ ಶಾಲಾ ಶಿಕ್ಷಣ ಹೆಚ್ಚುವರಿ ಆಯುಕ್ತ ಆನಂದ್ ಪ್ರಕಾಶ್ ಮೀನಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...