ಕಲಬುರಗಿ | ಸಿಮೆಂಟ್‌ ಕಾರ್ಖಾನೆ ಜೊತೆ ಗ್ರಾಮ ಪಂಚಾಯತಿ ಅವ್ಯವಹಾರ; ತನಿಖೆಗೆ ಆಗ್ರಹ

Date:

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ‘ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆ’ಯಿಂದ ನಿಯಮಾನುಸಾರ ತೆರಿಗೆ ವಸೂಲಿ ಮಾಡಲಾಗುತ್ತಿಲ್ಲ. ಗ್ರಾಮ ಪಂಚಾಯತಿ ಅಧಿಕಾರಿಗಳು ಅನಧಿಕೃತ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿ ಪಂಚಾಯತಿ ಸದಸ್ಯ ಉಮೇಶ್‌ ಪಾಂಡುಸಿಂಗ್ ಚವ್ಹಾಣ್‌ ಅವರು ತಾಲೂಕಿನ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

“ನಿಯಮದಂತೆ ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆಯು ವಾರ್ಷಿಕ 43,25,175 ರೂ. ತೆರಿಗೆ ಪಾವತಿಸಬೇಕು. ಆದರೆ, ಇಲ್ಲಿಯವರೆಗೂ ಅವರು ತೆರಿಗೆ ಸಂದಾಯ ಮಾಡಿಲ್ಲ. ಕರ್ನಾಟಕ ಪಂಚಾಯತಿ ಕಾಯ್ದೆ 1993ರ ಭಾಗ 8 ಮತ್ತು ಕಲಂ 202ರ ಪ್ರಕಾರ ಕಾರ್ಕಾನೆ, ಕಟ್ಟಡಗಳಿಗೆ ತೆರಿಗೆಯನ್ನು ನಿಗದಿ ಮಾಡಲಾಗುತ್ತದೆ. ಆದರೆ, ಪಂಚಾಯತಿ ಅಧಿಕಾರಿಗಳು ಈ ನಿಯಮಗಳನ್ನು ಗಾಳಿಗೆ ತೂರಿ ಅಲ್ಟ್ರಾಟೆಕ್‌ ರಾಜ ಸಿಮೆಂಟ್ ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಇತರೇ ಸದಸ್ಯರುಗಳು ಕಂಪನಿಯಿಂದ ಪ್ರತ್ಯೇಕ್ಷವಾಗಿ ಮತ್ತು ಪರೋಕ್ಷವಾಗಿ ಅನುಕೂಲತ ಪಡೆದಿದ್ದಾರೆ. ಅವರ ಬ್ಯಾಂಕ್‌ ಖಾತೆಗಳಿಗೆ ಹಣ ಸಂದಾಯವಾಗಿರುವುದು ಕಂಡು ಬಂದಿರುತ್ತದೆ. ಕಾರ್ಖಾನೆಯೊಂದಿಗೆ ಅವ್ಯವಹಾರ ನಡೆಸಿರುವ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...