ಕಲಬುರಗಿ | ಶೈಕ್ಷಣಿಕ ಸುಧಾರಣಾ ಸಮಿತಿಗೆ ಗುರುರಾಜ ಕರಜಗಿ ನೇಮಕ ಖಂಡನೀಯ: ವೆಲ್ಪೇರ್ ಪಾರ್ಟಿ

Date:

ಶೈಕ್ಷಣಿಕ ಸುಧಾರಣಾ ಸಮಿತಿಯ ನೇತೃತ್ವವನ್ನು ಸಂಘ ಪರಿವಾರ ಹಿನ್ನೆಲೆಯ ಗುರುರಾಜ ಕರಜಗಿಯವರನ್ನು ನೇಮಕ ಮಾಡಿದ ಸರಕಾರದ ಕ್ರಮ ಖಂಡನೀಯ ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಈ ಸಂಬಂಧ ಹೇಳಿಕೆ ನೀಡಿರುವ ಅವರು, “ಸರ್ಕಾರದ ಇಂತಹ ನಡೆ ನೋಡಿದಾಗ ಜನರಿಗೆ ಈಗ ಆಡಳಿತದಲ್ಲಿರುವುದು ಕಾಂಗ್ರೆಸ್ ಸರಕಾರವೋ ಅಥವಾ ಬಿಜೆಪಿ ಸರಕಾರವೋ ಎಂಬ ಅನುಮಾನ ಮೂಡುವಂತಿದೆ” ಎಂದರು.

“ಶಿಕ್ಷಣದ ಸುಧಾರಣಾ ಸಮಿತಿಯಂತಹ ಮಹತ್ವದ ಹುದ್ದೆಗಳಿಗೆ ನೇಮಕ ಮಾಡುವಾಗ ಅವರ ಹಿನ್ನೆಲೆ ಅರಿಯುವಂತಹ ವ್ಯವಧಾನ ಸರಕಾರಕ್ಕೆ ಇಲ್ಲದಾಯಿತೇ? ಇಂತಹವರ ನೇಮಕಾತಿಗೆ ಶಿಫಾರಸು ಮಾಡುವವರು ಬಗ್ಗೆಯೂ ಜನರಿಗೆ ಸಂಶಯವಿದೆ” ಎಂದು ಅನುಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಣ ಕ್ಷೇತ್ರವನ್ನು ಶ್ರೀಮಂತಗೊಳಿಸುವುದು ಬಿಟ್ಟು ಹಾಳು ಮಾಡಲು ಅವಕಾಶ ಮಾಡಿಕೊಡುವ ಸರಕಾರದ ನಿರ್ಧಾರವನ್ನು ವೆಲ್ಪೇರ್ ಪಾರ್ಟಿ ತೀವ್ರವಾಗಿ ಖಂಡಿಸುತ್ತಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಹಳೆಬೀಡು | ‘ಬಿಗ್‌ಬಾಸ್’ನಿಂದ ಸಮಾಜದ ಸಾಮರಸ್ಯ ಹದಗೆಡುತ್ತಿದೆ: ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ

“ಸರಕಾರ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಕನ್ನಡ ನಾಡಿನಲ್ಲಿ ಆ ಹುದ್ದೆಗೆ ಅರ್ಹರಾದ ಹಲವಾರು ಮಂದಿಯಿದ್ದರೂ ಅತ್ತ ಗಮನ ಹರಿಸದೆ ಸಂಘಪರಿವಾರ ಹಿನ್ನೆಲೆಯ ವ್ಯಕ್ತಿಗಳನ್ನು ತಂದು ಕೂರಿಸುವ ಉದ್ದೇಶವಾದರೂ ಏನು ಎಂದು ಮುಬೀನ್ ಅಹ್ಮದ್ ಅವರು ರಾಜ್ಯ ಸರಕಾರವನ್ನು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...