ಕಲಬುರಗಿ | ಭಾರಿ ಮಳೆ : ಅಲೆಮಾರಿ ಗುಡಿಸಲಿಗೆ ನುಗ್ಗಿದ ನೀರು, ರಾಜ್ಯ ಹೆದ್ದಾರಿ ಸೇತುವೆ ಕುಸಿತ

Date:

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ‌ ಮಳೆ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆ ಅವಾಂತರ ಸೃಷ್ಟಿ ಮಾಡಿದೆ.

ಜೇವರ್ಗಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಹೊಲ, ಮನೆಗಳಲ್ಲಿ ನೀರು ನುಗ್ಗಿ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಪಟ್ಟಣದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿವೆ. ದಿನ ಬಳಕೆಯ ವಸ್ತುಗಳು ಸೇರಿದಂತೆ ವಿವಿಧ ಸಾಮಗ್ರಿಗಳು ನೀರು ಪಾಲಾಗಿವೆ.

ಜೇವರ್ಗಿ ಪಟ್ಟಣ ಅಲೆಮಾರಿ ಜನಾಂಗ ವಾಸಿಸುವ ವಾರ್ಡ್‌ -16 ಹಾಗೂ ವಾರ್ಡ್-‌1ರಲ್ಲಿ ಗುಡಿಸಲುಗಳಿ ಅಪಾರ ಪ್ರಮಾಣದಲ್ಲಿ ಮಳೆ ನೀರು ನುಗ್ಗಿ ದವಸ, ಧಾನ್ಯ ಸೇರಿದಂತೆ ಸಾಮಾಗ್ರಿಗಳು ಹಾನಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 28 at 1.12.15 PM

ಈ ವೇಳೆ ಅಲೆಮಾರಿ ಮುಖಂಡರು ಮಾತನಾಡಿ, ʼಭಾರಿ ಮಳೆಯಿಂದ ಗುಡಿಸಲುಗಳಿಗೆ ಮಳೆ ನೀರು ನುಗ್ಗಿ ಅಸ್ತವ್ಯಸ್ತಗೊಂಡಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದೆವು. ಈ ಕುರಿತು ಶಾಸಕ ಅಜಯ ಸಿಂಗ್‌, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆʼ ಎಂದು ಜೇವರ್ಗಿಯ ಟಿಪ್ಪು ಸುಲ್ತಾನ್ ಸಮಿತಿಯ ಅಧ್ಯಕ್ಷ ಮೊಹಿಯುದ್ದೀನ್ ಇನಾಮದಾರ ಹೇಳಿದರು,

‘ಅಧಿಕಾರಿಗಳು ಗುಡಿಸಲು ವಾಸಿಗಳ ಸಮಸ್ಯೆ ಆಲಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಕುಟುಂಬಗಳಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿಕೊಂಡುವಂತೆ’ ಎಂದು ಅವರು ಆಗ್ರಹಿಸಿದರು.

ಸೇತುವೆ ಕುಸಿತ : ಸಂಪರ್ಕ ಸ್ಥಗಿತ

ಭಾರಿ ಮಳೆಯಿಂದಾಗಿ ಕಮಲಾಪುರ-ಜೀವಣಗಿ ಮಾರ್ಗವಾಗಿ ಚಿಂಚೋಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ರಸ್ತೆ-126 ಮಧ್ಯೆ ತಾತ್ಕಾಲಿಕವಾಗಿ ನಿರ್ಮಿಸಲಾದ ಸೇತುವೆ ಕುಸಿದ ಹಿನ್ನೆಲೆ ಸಂಪರ್ಕ ಕಡಿತಗೊಂಡಿದೆ.

WhatsApp Image 2025 08 28 at 8.59.02 PM

ಕಮಲಾಪುರ ಪಟ್ಟಣ ಹಾಗೂ ಜೀವಣಗಿಗೆ ಸಂಪರ್ಕ ಕಲ್ಪಿಸುವ ಮಾರ್ಗಮಧ್ಯದ ಸೇತುವೆ ಕಳೆದ ವರ್ಷ ಮಳೆಗಾಲದಲ್ಲಿ ಬಿದ್ದು ಸಂಪರ್ಕ ಕಡಿತಗೊಂಡು ಎರಡು ತಿಂಗಳಾದರೂ ಕ್ರಮಕ್ಕೆ ಮುಂದಾಗಲಿಲ್ಲ. ಈ ಕುರಿತು ಈದಿನ.ಕಾಮ್ ವರದಿ ಪ್ರಕಟಿಸಿದ ನಂತರ ತಾತ್ಕಾಲಿಕವಾಗಿ ಸಿಡಿ, ಮುರಮು ಹಾಕಿ ಸೇತುವೆ ನಿರ್ಮಾಣ ಮಾಡಿದರು.

ಇದನ್ನೂ ಓದಿ : ಬೀದರ್‌ | ಮಳೆ ಅಬ್ಬರ, ನದಿ, ಕೆರೆಗಳಲ್ಲಿ ಉಬ್ಬರ, ಜನಜೀವನ ತತ್ತರ!

ತದನಂತರ ಶಾಶ್ವತ ಸೇತುವೆ ನಿರ್ಮಿಸುವುದಾಗಿ ಅಧಿಕಾರಿಗಳು ಹೇಳಿದರೂ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಮತ್ತೆ ಸೇತುವೆ ಕುಸಿದಿದ್ದು, ಶಾಶ್ವತ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...