ಕಲಬುರಗಿ | ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

Date:

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಜೇವರ್ಗಿ ತಾಲೂಕು ಜೇನಾಪುರ ಗ್ರಾಮದ ನಾಗಣ್ಣ (54) ಎಂಬುವವರು ಆಯತಪ್ಪಿ ಬಿದ್ದಿದ್ದ ವೇಳೆ ಹೊಟ್ಟೆಯ ಭಾಗಕ್ಕೆ ಮಂಚ ಬಡಿದಿತ್ತು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ತನ್ನ ಮಗನೊಂದಿಗೆ ಕಲಬುರಗಿಯಲ್ಲಿರುವ ಯುನೈಟೆಡ್ ಆಸ್ಪತ್ರೆಗೆ ದಾಖಲಾಗಿದ್ದರು.

ತಪಾಸಣೆ ನಡೆಸಿದ್ದ ಆಸ್ಪತ್ರೆಯ ವೈದ್ಯರು, ಹೊಟ್ಟೆಗೆ ಪೆಟ್ಟು ಬಡಿದಿರುವುದರಿಂದ ಹೊಟ್ಟೆಯೊಳಗೆ ರಕ್ತ ಹೆಪ್ಪುಗಟ್ಟಿದೆ. ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ತಿಳಿಸಿದ್ದಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ ಬಳಿಕ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ, ಆಪರೇಷನ್ ಆದ ಬಳಿಕ ವ್ಯಕ್ತಿಯು ದಿಢೀರನೆ ಕೋಮಾಕ್ಕೆ ಜಾರಿದ್ದಾರೆ. 10 -15 ದಿನಗಳು ಕೋಮಾದಲ್ಲಿದ್ದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಇದಕ್ಕೆ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿ ಆಸ್ಪತ್ರೆಯ ಮುಂದೆ ಧರಣಿ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ 9

“10 -15 ದಿನಗಳು ಕೋಮಾದಲ್ಲಿದ್ದರೂ ರೋಗಿಯ ಆರೋಗ್ಯದ ಕುರಿತು ಏನೂ ಸರಿಯಾದ ಮಾಹಿತಿ ನೀಡಿಲ್ಲ. ಈಗ ಸಾವನ್ನಪ್ಪಿದ್ದಾರೆ. ಲಕ್ಷಗಟ್ಟಲೆ ಬಿಲ್ ಮಾಡಿದ್ದಾರೆ. ಅಲ್ಲದೇ, ವೈದ್ಯರು ಬರೆದಿದ್ದ ಔಷಧಿಯನ್ನು ಸರಿಯಾಗಿ ಗಮನಿಸದೆ, ಮೆಡಿಷನ್ ಸರಿಯಾಗಿ ಅರಿತುಕೊಳ್ಳದೆ ಔಷಧಿಯವರು ಕೂಡ ಎರಡು ಬಾರಿ ತಪ್ಪಾಗಿ ಔಷಧಿ ಕೊಟ್ಟಿದ್ದಾರೆ. ಇದರಿಂದಾಗಿಯೇ ಚಿಕಿತ್ಸೆ ಫಲಕಾರಿಯಾಗದೇ ನಮ್ಮ ಕುಟುಂಬದ ವ್ಯಕ್ತಿ ಸಾವ್ವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ದೊಡ್ಡ ಅವ್ಯವಹಾರ ನಡೆಯುತ್ತಿದೆ” ಎಂದು ಯುನೈಟೆಡ್ ಆಸ್ಪತ್ರೆಯ ಎದುರುಗಡೆ ಪ್ರತಿಭಟನೆ ನಡೆಸಿದರು.

ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಆಸ್ಪತ್ರೆ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ರೋಗಿಗಳ ಜೀವದೊಂದಿಗೆ ಆಸ್ಪತ್ರೆ ಆಟವಾಡುತ್ತಿದೆ. ಹಾಗಾಗಿ, ಇದನ್ನು ಮುಚ್ಚಬೇಕು ಎಂದು ವೈದ್ಯಾಧಿಕಾರಿ ಹಾಗೂ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...