ಕಲಬುರಗಿ | ಸಂವಿಧಾನ ಇಲ್ಲವೆಂದಾದರೆ ಮನುಸ್ಮೃತಿಯಂತೆ ಬದುಕುವ ಪರಿಸ್ಥಿತಿ ನಿರ್ಮಾಣವಾಗುತ್ತೆ: ಮೀನಾಕ್ಷಿ ಬಾಳಿ

Date:

ಸಂವಿಧಾನ ಇಲ್ಲ ಎಂದಾದರೆ ಎರಡು ಸಾವಿರ ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ. ಮನುಸ್ಮೃತಿ ಪ್ರಕಾರ ನಾವು ನೀವು ಬದುಕುವ ಪರಿಸ್ಥಿತಿ ನಿರ್ಮಾಣವಾಗುತ್ತೆ ಎಂದು ಜನವಾದಿ ಮಹಿಳಾ ಸಂಘಟನೆ ಡಾ ಮೀನಾಕ್ಷಿ ಬಾಳಿ ಹೇಳಿದರು.

ಕಲಬುರಗಿ ಜಿಲ್ಲೆಯ ಶಹಾಬಾದ್‌ ಪಟ್ಟಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಬಸವಣ್ಣ, ವಾಲ್ಮೀಕಿ, ಕನಕದಾಸ ಸಾವಿತ್ರಿ ಬಾಯಿ ಫುಲೆ ಸೇರಿದಂತೆ ಉಳಿದೆಲ್ಲ ನಾಯಕರ ಜಯಂತಿಗಳನ್ನು ಕರ್ನಾಟಕದಲ್ಲಿ ಮಾತ್ರ ಆಚರಣೆ ಮಾಡಿದರೆ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಇಡೀ ಭಾರತ ದೇಶಾದ್ಯಂತ ಆಚರಿಸಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೂದ್ರರು ಎಂದರೆ ದಲಿತರು, ಲಿಂಗಾಯತ, ಕುರುಬ, ಕಬ್ಬಲಿಗ ಅಲ್ಪಸಂಖ್ಯಾತರು ಸೇರಿದಂತೆ ಇತರ ಜಾತಿಗಳೂ ಒಳಗೊಂಡಿವೆ. ದುಡಿಯುವ ಜನ ಜಾತಿ, ಭೇದ, ಧರ್ಮ ಬಿಟ್ಟು ಎಲ್ಲರೂ ಒಂದಾಗಬೇಕು. ಆಗ ಮಾತ್ರ ಆಳುವ ಜನ ಹೆದರುತ್ತಾರೆ, ಸಂವಿಧಾನ ಉಳಿಯುತದೆ” ಎಂದು ಜನರಿಗೆ ಮನವರಿಕೆ ಮಾಡಿದರು.

“ಬಸವಣ್ಣ ಲಿಂಗಾಯತರ ನಾಯಕರು, ಕನಕದಾಸ ಕುರುಬರ ನಾಯಕ, ಅಂಬೇಡ್ಕರ್ ದಲಿತರ ನಾಯಕ ಎಂದು ಹೇಳಿ ಸಮಾಜವನ್ನು ಛಿದ್ರ ಛಿದ್ರವಾಗಿ ಒಡೆಯುವ ಹುನ್ನಾರು ನಡೆಯುತ್ತಿದೆ.
ಸಂವಿಧಾನ ಇರುವ ಕಾರಣಕ್ಕೆ ನಾವು ನೀವೆಲ್ಲ ಮಾತನಾಡಲು ಸಾಧ್ಯವಾಗಿದೆ. ಉಡಲು ಬಟ್ಟೆ ಕೊಟ್ಟಿದೆ, ತಮ್ಮಿಚ್ಚೆಯಂತಹ ಆಹಾರ ಸೇವಿಸುವ ಹಕ್ಕು ಕೊಟ್ಟಿದೆ” ಎಂದು ಹೇಳಿದರು.

“ಇಡೀ ದೇಶದ ಹೆಣ್ಣುಮಕ್ಕಳು ಮುಂಜಾನೆ ಎದ್ದು ಅಂಬೇಡ್ಕರ್ ಅವರನ್ನು ನೆನೆಯಬೇಕು. ಕಾರಣ ಹೆಣ್ಣುಮಕ್ಕಳಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಪಿತ್ರಾರ್ಜಿತ ಅಸ್ತಿಯಲ್ಲಿ ಹಕ್ಕು, ಮಕ್ಕಳನ್ನು ದತ್ತು ಪಡೆಯುವ ಹಕ್ಕು, ಮಹಿಳೆಯರಿಗೆ ವಿಚ್ಛೇದನ ಪಡೆಯುವ ಹಕ್ಕು ಕೊಡಬೇಕೆಂದು ಇಟ್ಟ ಬೇಡಿಕೆ ಫಲಿಸದಿದ್ದಾಗ ಮಹಿಳೆಯರಿಗಾಗಿ ಮಂತ್ರಿಗಿರಿ ತ್ಯಾಗ ಮಾಡಿದ ಏಕೈಕ ಮಹಾನ್‌ ವ್ಯಕ್ತಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್” ಎಂದು ಸ್ಮರಿಸಿದರು.

“ಬರಗಾಲ ಘೋಷಣೆ ಆಗಿದ್ದರೂ ಬಡವರು, ಕೂಲಿ ಕಾರ್ಮಿಕರು, ರೈತರು ಕಂಗಾಲಾಗಿದ್ದಾರೆ. ಕೆಲಸ ಸಿಗುತ್ತಿಲ್ಲ, ಉದ್ಯೋಗ ಖಾತ್ರಿ ಅಡಿಯಲ್ಲಿಯೂ ಕೆಲಸ ಕೊಡುತ್ತಿಲ್ಲ. ಅಚ್ಛೇ ದಿನ್‌, ಅಚ್ಛೇ ದಿನ್‌ ಎನ್ನುತ್ತಲೇ ಜನರ ಬದುಕು ಮುರಾಬಟ್ಟಿಯಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರ ಶಿಕ್ಷಣವನ್ನು ಖಾಸಗಿಕರಣ ಮಾಡಿ, ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದ್ದಾರೆ. ಅಂಬೇಡ್ಕರ್‌ ಅವರು ಅಂದೇ, ʼಎಲ್ಲಿವರೆಗೆ ನನ್ನ ಜನ ಶಿಕ್ಷಣ ಕಲಿಯೋದಿಲ್ಲವೋ, ಅಲ್ಲಿಯವರೆಗೆ ಸಂವಿಧಾನದ ಮಹತ್ವ ಗೊತ್ತಾಗುವುದಿಲ್ಲ. ನನ್ನ ಜನ ಶಿಕ್ಷತರಾಗಬೇಕು” ಎಂದು ಹಂಬಲಿಸಿದ್ದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನೀರು ಪೂರೈಕೆಗೆ ಮೀನಾಮೇಷ; ಅತ್ತನೂರು ಗ್ರಾ. ಪಂಚಾಯಿತಿಗೆ ಮಹಿಳೆಯರಿಂದ ಮುತ್ತಿಗೆ

“ದೇಶದಲ್ಲಿ ಒಟ್ಟು 43ಕ್ಕೂ ಹೆಚ್ಚು ಮೀಸಲಾತಿ ಇದೆ. ಶಿಕ್ಷಣದಲ್ಲಿ ಅತಿ ಹೆಚ್ಚು ಮೀಸಲಾತಿ ಇದೆ. ಖಾಸಗಿ ಶಾಲೆಯಲ್ಲಿ ಮೀಸಲಾತಿ ಇಲ್ಲ. ಸಂವಿಧಾನ ತೋರಿಕೆಯ ಗ್ರಂಥವಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಶಿಕ್ಷಣಕ್ಕೆ ಅನುದಾನ ಬಿಡುಗಡೆ ಮಾಡುತ್ತಿಲ್ಲ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ, ಅವಶ್ಯಕತೆ ಇರುವಷ್ಟು ವಸತಿ ನಿಲಯಗಳನ್ನು ನಿರ್ಮಾಣ ಮಾಡುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...