ಕಲಬುರಗಿ| ಅಕ್ರಮವಾಗಿ ಮದ್ಯ ಮಾರಾಟ; ಕ್ರಮಕ್ಕೆ ಬಿಎಸ್‌ಪಿ ಅಗ್ರಹ

Date:

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಬಿಎಸ್‌ಪಿ(ಬಹುಜನ ಸಮಾಜ ಪಕ್ಷ) ಕಲಬುರಗಿ ಜಿಲ್ಲೆಯ ಜೇವರ್ಗಿ ಘಟಕದಿಂದ ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಹಾಗೂ ಅಬಕಾರಿ ನಿರೀಕ್ಷಕರು ವಲಯ ಜೇವರ್ಗಿರವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿ ತಾಲೂಕು ಸಂಯೋಜಕ ಪರಶುರಾಮ್ ನಡೆಗಟ್ಟಿ ಮಾತನಾಡಿ, “ಹಳ್ಳಿಗಳಲ್ಲಿ ದಿನದ 24 ಗಂಟೆಗಳ ಕಾಲ ಮದ್ಯ ದೊರೆಯುತ್ತಿದೆ. ಹಾಗಾಗಿ ಅಲ್ಲಿನ ಕೆಲ ಜನರು, ಕಾರ್ಮಿಕರು ಬೆಳಿಗ್ಗೆ 6ರಿಂದ ರಾತ್ರಿಯವರೆಗೂ ಕುಡಿದುಕೊಂಡು ಕೆಲಸಕ್ಕೂ ಹೋಗದೆ ನಶೆಯಲ್ಲಿ ತೇಲಾಡುತ್ತ ಕುಡಿಯಲು ಸಾಲ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸುಮಾರು ಕುಟುಂಬಗಳು ಬೀದಿಪಾಲಾಗುತ್ತಿವೆ. ಕೌಟುಂಬಿಕ ಹಾಗೂ ಸಾಮಾಜಿಕ ಕಲಹಗಳು ಹೆಚ್ಚಾಗಿ ಅಶಾಂತಿ ಮೂಡುತ್ತಿದೆ. ಸಣ್ಣಪುಟ್ಟ ಮಕ್ಕಳು ಹಾಗೂ ವಿದ್ಯಾರ್ಥಿಗಳ ಮೇಲೆ ತುಂಬಾ ಪ್ರಭಾವ ಬೀರಿ ದಾರಿ ತಪ್ಪುವಂತಾಗುತ್ತಿದೆ. ಸಮಾಜದಲ್ಲಿ ಪುಜ್ಞಾವಂತರು ಎನಿಸಿಕೊಂಡಿರುವ ನಾವೆಲ್ಲರೂ ಇದನ್ನು ಗಮನಹರಿಸದಿರುವುದು ನಿಜವಾಗಿಯೂ ದುರಂತ” ಎಂದು ಬೇಸರ ವ್ಯಕ್ತಪಡಿಸಿದರು.

“ವೈನ್ ಶಾಪ್ ಮತ್ತು ಬಾರ್‌ಗಳ ಮಾಲೀಕರು ತರಕಾರಿ ಮಾರುವಂತೆ ಪ್ರತಿ ಹಳ್ಳಿಗಳ ಅಂಗಡಿ ಮತ್ತು ಹೋಟೆಲ್‌ಗಳಿಗೆ ರಾಜಾರೋಷವಾಗಿ ಸರಬರಾಜು ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮದ್ಯ ಮಾರಾಟ ತೊಡಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ಮೌನವಹಿಸಿ ಏನೂ ಗೊತ್ತಿಲ್ಲದಂತಿದ್ದಾರೆ. ಈ ಅವ್ಯವಹಾರಕ್ಕೆ ಅಬಕಾರಿ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹುಜನ ಸಮಾಜ ಪಕ್ಷ ಉಪಾಧ್ಯಕ್ಷ ತಿಪ್ಪಣ್ಣ ಎಂ ಕಿನೋರ ಮಾತನಾಡಿ, “ಜೇವರ್ಗಿ ತಾಲೂಕಿನ ಎಲ್ಲ ಹಳ್ಳಿಗಳಲ್ಲಿ ಮತ್ತು ನಗರದ ವಾರ್ಡ್‌ಗಳಲ್ಲಿ ವೈನ್‌ಶಾಪ್ ಮತ್ತು ಬಾರ್‌ಗಳಿಂದ ಮದ್ಯ ಖರೀದಿಸಿ ಹಳ್ಳಿ ಮತ್ತು ವಾರ್ಡ್‌ಗಳ ಕಿರಾಣಿ ಅಂಗಡಿ, ಪಾನ್ ಶಾಪ್‌, ಚಹಾದಂಗಡಿ ಸೇರಿದಂತೆ ಇನ್ನೂ ಕೆಲವರು ಮನೆಯಲ್ಲಿಯೇ ಯಾವುದೇ ಭಯವಿಲ್ಲದೆ ರಾಜಾರೋಷವಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹಳ್ಳಿಗಳಿಗೆ ಮತ್ತು ನಗರದ ವಾರ್ಡ್‌ಗಳಿಗೆ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿರುವ ವೈನ್‌ಶಾಪ್ ಮತ್ತು ಬಾರ್ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದು ಮಾಡಬೇಕು. ವೈನ್ ಶಾಪ್ ಮತ್ತು ಬಾರ್‌ಗಳಲ್ಲಿ ಮದ್ಯ ಖರೀದಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಕ್ರಮ ಮದ್ಯ ಮಾರಾಟಕ್ಕೆ ಸಾಥ್ ನೀಡುತ್ತಿರುವ ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಕ್ಫ್ ಮಂಡಳಿಯಿಂದ ಆಗುತ್ತಿರುವ ಅನ್ಯಾಯ ಸರಿಡಿಸಲು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

“ಕೆಲವು ವೈನ್‌ಶಾಪ್‌ಗಳು ಮತ್ತು ಬಾರ್‌ಗಳು, ಶಾಲೆ, ದೇವಸ್ಥಾನ, ಮಹಾಪುರುಷರ ಪುತ್ಥಳಿ ಹತ್ತಿರವೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇಂತಹ ವೈನ್‌ಶಾಪ್ ಮತ್ತು ಬಾರ್‌ಗಳನ್ನು ಪರಿಶೀಲಿಸಿ ಸ್ಥಳಾಂತರಿಸಬೇಕು. ಪ್ರತಿ ಹಳ್ಳಿಗೆ ಪೊಲೀಸ್ ಇಲಾಖೆಯಿಂದ ಒಬ್ಬರನ್ನು ಪೊಲೀಸ್ ಬೀಟ್‌ ಎಂದು ನೇಮಕ ಮಾಡಿ ಬೇರೆ ಬೇರೆ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು ನೇಮಕ ಮಾಡಿದ್ದು, ಅವರೂ ಕೂಡ ಈ ಅಕ್ರಮ ಮದ್ಯ ಮಾರಾಟದ ತಪಾಸಣೆ ನಡೆಸಿ ಮದ್ಯ ಮಾರಾಟ ನಿಲ್ಲಿಸುವಂತೆ ಸೂಚಿಸಬೇಕು” ಎಂದರು.

ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ತಾಲೂಕು ಅಧ್ಯಕ್ಷ ಧರ್ಮರಾಯ ಎಸ್ ಎಲಿಮನಿ, ಪಾಟೀಲ್ ರಾಸಣಗಿ, ಶರಣು ಪೂಜಾರಿ, ಹುಸೇನಿ ರಾಸಣಗಿ, ಹಣಮಂತ ಬೋವಿ, ಸಂಗನಗೌಡ ಅಂಗಡಿ, ದೇವೀಂದ್ರ ಬಣಮಿಗಿ, ಕೃಷ್ಣ ಅಡವಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...