ಕಲಬುರಗಿ | ಬೆಳಕೋಟಾ ಗ್ರಾಮದ ಪುನರ್ವಸತಿಯ ಖಾಲಿ ನಿವೇಶನಗಳ ಹಕ್ಕುಪತ್ರ ನಕಲು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಮುಳುಗಡೆಯಾದ ಬೆಳಕೋಟಾ ಗ್ರಾಮದ ಪುನರ್ವಸತಿಯಲ್ಲಿನ ಖಾಲಿ ನಿವೇಶನಗಳ ಹಕ್ಕುಪತ್ರ ನಕಲು ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕಮಲಾಪುರ ಪಟ್ಟಣ ಪಂಚಾಯಿತಿಯ ಆಸ್ತಿ ಸಂಖ್ಯೆ 11-192ರಲ್ಲಿ ನಡೆಯುತ್ತಿರುವ ಗಜಾನನ ಟೈರ್ ಮೋಲ್ಡಿಂಗ್ ಕಂಪನಿಯ ಕಾಮಗಾರಿ ತಡೆಹಿಡಿಯುವಂತೆ ಪ್ರಜಾ ಪರಿವರ್ತನ ವೇದಿಕೆ ಕಲಬುರಗಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ ಅವರು, “ಕಮಲಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಬೆಳಕೋಟಾ ಗ್ರಾಮವು ಮುಳುಗಡೆಯಾಗಿತ್ತು. ಸದರಿ ಗ್ರಾಮದ ಪುನರ್ವಸತಿಯನ್ನು ಕಮಲಾಪುರದ ಬಳಿ ನೀಡಲಾಗಿದ್ದು, ಆ ಪುನರ್ವಸತಿಯಲ್ಲಿ ಮುಳುಗಡೆಯಾದ ಬೆಳಕೋಟ ಗ್ರಾಮದ ನಿರಾಶ್ರಿತರಿಗೆ ಖಾಲಿ ನಿವೇಶನಗಳ ಹಕ್ಕುಪತ್ರಗಳನ್ನು ನೀಡಲಾಗಿದೆ. ಗ್ರಾಮದ ಬಹುತೇಕ ನಿವಾಸಿಗಳಿಗೆ ಇನ್ನೂ ಖಾಲಿ ನಿವೇಶನಗಳ ಹಕ್ಕುಪತ್ರ ನೀಡಿರುವುದಿಲ್ಲ. ಆದರೆ ಕೆಲವು ದುಷ್ಕರ್ಮಿಗಳು ಪುನರ್ವಸತಿಯಲ್ಲಿರುವ ಖಾಲಿ ನಿವೇಶನಗಳನ್ನು ನೋಡಿ ನಕಲಿ(ಜಾಲಿ) ಹಕ್ಕುಪತ್ರಗಳನ್ನು ತಯಾರಿಸಿ, ಪುನರ್ವಸತಿಯಲ್ಲಿ ಖಾಲಿ ಇರುವ ಖಾಲಿ ನಿವೇಶನಗಳ ಸಂಖ್ಯೆಯನ್ನು ಹಾಕಿ ಮಾರಾಟ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಜುಲೈ 10ರಂದು ದೂರು ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಕ್ರಮ ಜರುಗಿಸಿರುಲ್ಲ” ಎಂದು ಆರೋಪಿಸಿದರು.

“ಸದರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯನ್ನು ರಚಿಸಬೇಕು. ಸಮಿತಿಯ ನೇತೃತ್ವದಲ್ಲಿ ನಕಲಿ(ಜಾಲಿ) ಹಕ್ಕು ಪತ್ರಗಳನ್ನು ತಯಾರಿಸಿದವರನ್ನು ತನಿಖೆ ಮಾಡಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಜಾನನ ಟೈರ್ ಮೋಲ್ಡಿಂಗ್ ಕಂಪನಿಯು ಮಾಡುತ್ತಿರುವ ಕಾಮಗಾರಿಯಿಂದ ಕಮಲಾಪುರದಲ್ಲಿನ ಪರಿಸರ ಹಾಳಾಗುತ್ತಿದೆ. ಈ ಕಂಪನಿಯು ಹಳೆ ಟೈರ್‌ಗಳನ್ನು ಸುಡುವುದರಿಂದ ಅದರಿಂದ ಬರುವ ಕೆಟ್ಟ ಹೊಗೆಯಿಂದ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದ್ದು, ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಉಸಿರಾಟಕ್ಕೆ ತೊಂದರೆಯುಂಟು ಮಾಡುತ್ತಿದೆ” ಎಂದರು.

“ಸಾರ್ವಜನಿಕರ ಹಿತದೃಷ್ಟಿಯಿಂದ ಸದರಿ ಗಜಾನನ ಟೈರ್ ಮೋಲ್ಡಿಂಗ್ ಕಂಪನಿಯು ಮಾಡುವ ಕಾಮಗಾರಿಯನ್ನು ಕೂಡಲೇ ತಡೆಹಿಡಿಯಬೇಕು. ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಕಂಪೆನಿಗೆ ನೀಡಿರುವ ಪರವಾನಗಿಯನ್ನು ರದ್ದುಪಡಿಸಬೇಕು. ಒಂದುವೇಳೆ ಈ ವಿಷಯಕ್ಕೆ ಸ್ಪಂದಿಸದಿದ್ದಲ್ಲಿ ನಮ್ಮ ಸಂಘಟನೆಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇವಾಲಯದ ಆಸ್ತಿ ಕಬಳಿಕೆ ಆರೋಪ

ಈ ಸಂದರ್ಭದಲ್ಲಿ ರಮೇಶ್ ಆರ್ ಬೆಳಕೋಟಿ, ಅರುಣ್, ಆನಂದ ಸಿಂಗೆ, ಧರ್ಮಣ್ಣ, ಸಿದಪ್ಪ ನಾರಾಯಣಪುರ, ಅಜಾರೋದ್ದಿನ್, ಸಿದಪ್ಪ ಕೌನಳ್ಳಿ, ವಿಜಯಕುಮಾರ್ ಹೋಲ್ಕರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...