ಕಲಬುರಗಿ | ಭಾರತ ಆರ್ಥಿಕವಾಗಿ ಬಲಿಷ್ಠ ರಾಷ್ಟ್ರವಾಗುವತ್ತ ದಾಪುಗಾಲು : ಸಚಿವ ಪ್ರಿಯಾಂಕ್ ಖರ್ಗೆ

Date:

ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ಎರಡನೇ ತಂಡದ ತರಬೇತಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು.

ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಲಬುರಗಿಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸಲಾಗುವುದು. ಇಲ್ಲಿ ಪ್ರಸ್ತುತ 100 ಸಂಖ್ಯೆ ಮಕ್ಕಳಿಗೆ ತರಬೇತಿ ನೀಡುವ ಸಾಮರ್ಥ್ಯ ಇದ್ದು, ಇದನ್ನು ಅಗತ್ಯವಿದ್ದಲ್ಲಿ 500 ಸಂಖ್ಯೆಗೆ ಹೆಚ್ಚಿಸಲು ಪ್ರಸ್ತಾವನೆ ನೀಡುವಂತೆ ಹಾಗೂ ನಮ್ಮ ಭಾಗದ ಮಕ್ಕಳು ದೇಶ ಸೇವೆಗೈಯುವ ಸೈನಿಕರಾಗಿ ಆಯ್ಕೆಯಾಗಲು ಸಮರ್ಪಕ ರೀತಿಯಲ್ಲಿ ತರಬೇತಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

‘ಭಾರತವು ಇಂದು ಆರ್ಥಿಕವಾಗಿ ಬಲಿಷ್ಠ ರಾಷ್ಟ್ರವಾಗುವತ್ತ ದಾಪುಗಾಲು ಇಟ್ಟಿದೆ. ಇದಕ್ಕೆ ಪ್ರಜಾಪ್ರಭುತ್ವದ ವ್ಯವಸ್ಥೆ ಕಾರಣವಾಗಿದ್ದು, ಪ್ರಜಾಪ್ರಭುತ್ವ ಉಳಿವಿನಲ್ಲಿ ಸೇನೆ ಪಾತ್ರ ಅಗಾಧ. ದೇಶ ಸೇವೆಗಾಗಿ ನೀವೆಲ್ಲರೂ ಮನೆ-ಕುಟುಂಬಗಳನ್ನು ಬಿಟ್ಟು ಬಂದಿದ್ದೀರಿ. ಕಠಿಣ ಸೇವೆಯ ತರಬೇತಿಗೆ ನೀವೆಲ್ಲ ಅಣಿಯಾಗಿರುವುದು ಸಂತೋಷ ಉಂಟುಮಾಡಿದೆ. ಕಾಲೇಜು ಮಟ್ಟದಲ್ಲಿ ಯುವಜನತೆಗೆ ಶಿಸ್ತಿನ ಅಭ್ಯಾಸ ಅತ್ಯಗತ್ಯವಾಗಿದೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಕ್ಕಳು ಅವರು ಪಡೆದ ತರಬೇತಿಯ ಪ್ರದರ್ಶನ ಮಾಡಿದರು. ಭಯೋತ್ಪಾದಕರು ದೇಶಕ್ಕೆ ನುಗ್ಗಿ ಬಂಕರ್‌ನಲ್ಲಿ ಅಡಗಿಕೊಂಡಾಗ ಅವರನ್ನು ಹೊಡೆದು ಬಂಕರ್ ಸರ್ವನಾಶ ಮಾಡುವ ಬಂಕರ್ ಡ್ರಿಲ್ ಪ್ರದರ್ಶನ ಗಮನ ಸೆಳೆಯಿತು.

WhatsApp Image 2025 06 08 at 8.00.27 AM

‘ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಾಲ್ಕು ತಿಂಗಳ ಅವಧಿಗೆ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ದೈಹಿಕ ಸಹಿಷ್ಣುತೆ ಹಾಗೂ ಲಿಖಿತ ಪರೀಕ್ಷೆಗೆ ಸಂಬಂಧಿಸಿದ ತರಬೇತಿಯನ್ನೂ ನೀಡಲಾಗುವುದು. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಗತ್ಯವಿರುವ ಟ್ರ್ಯಾಕ್ ಸೂಟ್, ಸಮವಸ್ತ್ರ ಹಾಗೂ ಶೂಗಳನ್ನು ಉಚಿತವಾಗಿ ವಿತರಿಸಲಾಗುತ್ತದೆʼ ಎಂದು ಹೇಳಿದರು.

‘ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ವಿಜ್ಞಾನ, ಗಣಿತ ಹಾಗೂ ಸಾಮಾನ್ಯ ಜ್ಞಾನದ ವಿಷಯಗಳ ತರಬೇತಿಯನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ನೀಡಲಾಗುತ್ತದೆ. ತರಬೇತಿ ಪಡೆದ ನಂತರ ಅಭ್ಯರ್ಥಿಗಳು 21 ವರ್ಷಗಳ ವಯಸ್ಸಿನವರೆಗೆ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ ಸೇವೆಗಳಿಗೆ ಸೇರಲು ಅನುಕೂಲವಾಗುತ್ತದೆ. 23ನೇ ವಯಸ್ಸಿನವರೆಗೆ ಅರೆ ಸೇನಾ ಸೇವೆಗಳಾದ BSF, CISF, CRPF, SSB, ITBP, AR, NIA, SSF ಪಡೆಗಳಿಗೆ ಸೇರಲು ಅವಕಾಶವಿದೆ. 23 ರಿಂದ 28 ವರ್ಷದವರೆಗೆ ಪೊಲೀಸ್ ಮತ್ತು ಪಿಎಸ್‌ಐ ತರಬೇತಿ ಪಡೆಯಬಹುದಾಗಿದೆ’ ಎಂದು ತಿಳಿಸಿದರು.

‘ದೇಶ ಹಾಗೂ ನಾಡಿನ ರಕ್ಷಣೆಗೆ ಸೇರಬಯಸುವ ಕಲ್ಯಾಣ ಕರ್ನಾಟಕ ಭಾಗದ ಆಕಾಂಕ್ಷಿಗಳಿಗೆ ನಮ್ಮ ಸರ್ಕಾರದ ಈ ಯೋಜನೆಯು ಅತ್ಯುತ್ತಮವಾಗಿದೆ’ ಎಂದು ಹೇಳಿದರು.

ಇದನ್ನೂ ಓದಿ : ಅಪ್ರಾಪ್ತ ಮಗಳನ್ನೇ ಅತ್ಯಾಚಾರಿಗಳಿಗೆ ಒಪ್ಪಿಸಿದ್ದ ಬಿಜೆಪಿ ಮುಖಂಡೆ! ʼಶಿಸ್ತಿನ ಪಕ್ಷʼದಲ್ಲಿ ಹೀಗೇಕೆ?

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಐಎಎಸ್ ಅಧಿಕಾರಿ ಭನ್ವರ್ ಸಿಂಗ್ ಮೀನಾ, ಐಪಿಎಸ್ ಅಧಿಕಾರಿ ಡಾ. ಶರಣಪ್ಪ ಎಸ್.ಡಿ, ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...