ಕಲಬುರಗಿ | ಸಿಮೆಂಟ್ ಕಂಪೆನಿಯಿಂದ ಅನ್ಯಾಯ‌; ಬೇಸತ್ತ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನ

Date:

ಸೇಡಂ ತಾಲೂಕು ವ್ಯಾಪ್ತಿಯಲ್ಲಿ ಇರುವ ವಿಕಾಟ ಸಾಗರ ಸಿಮೆಂಟ್ ಕಂಪೆನಿಗೆ ಜಮೀನು ನೀಡಿದ್ದ ಕುಟುಂಬಕ್ಕೆ ಉದ್ಯೋಗ ನೀಡದೆ ವಂಚಿಸುತ್ತಿರುವ ಕಂಪೆನಿಯ ಆಡಳಿತ ಮಂಡಳಿ ಧೋರಣೆ ಖಂಡಿಸಿ ಅನ್ಯಾಯಕ್ಕೊಳಗಾದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನಸಿದ ಘಟನೆ ನಡೆದಿದೆ.

ʼಚಿಂಚೋಳಿ ತಾಲೂಕಿನ ಚಿತ್ರಸಾಲಿ ಗ್ರಾಮದ ಈರಪ್ಪ ಮಲ್ಲಪ್ಪ ಬೈಕೋರ್ ಎಂಬುವವರು ಕಂಪೆನಿಗೆ 8 ಎಕರೆ ಕೃಷಿ ಭೂಮಿ ನೀಡಿದ್ದರು. ಭೂಮಿ ನೀಡಿದ ಮಾಲೀಕರಿಗೆ ಪರಿಹಾರದ ಜೊತೆಗೆ ಕುಟುಂಬದ ಒಬ್ಬ ಸದಸ್ಯನಿಗೆ ಖಾಯಂ ನೌಕರಿ ಕೊಡಬೇಕೆಂದು ಕಂಪೆನಿಯೊಂದಿಗೆ ಒಪ್ಪಂದವಾಗಿತ್ತು. ಆದರೆ ಜಮೀನು ನೀಡಿದ್ದ ಮಾಲೀಕ ಈರಪ್ಪ ಅವರು ಮೃತಪಟ್ಟ ಹಿನ್ನೆಲೆ ಕಂಪೆನಿಯ ಆಡಳಿತ ಮಂಡಳಿಯವರ ಕುಟುಂಬದ ಯಾವುದೇ ಸದಸ್ಯರಿಗೆ ನೌಕರಿ ನೀಡದೆ ಅನ್ಯಾಯ ಎಸಗಿದ್ದಾರೆ ʼಎಂದು ಮೃತ ಈರಪ್ಪನವರ ಪತ್ನಿ ಲಕ್ಷ್ಮೀ ಬೈಕೋರ್ ಆರೋಪಿಸಿದ್ದಾರೆ.

ಈ ಕಂಪೆನಿಯು ಸೇಡಂ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ಗಮನಕ್ಕೆ ತರಲಾಗಿತ್ತು. ಸಚಿವರು ಕಂಪೆನಿ ಆಡಳಿತ ಮಂಡಳಿಯೊಂದಿಗೆ ಮಾತನಾಡಿ, ‘ನಿಯಮಗಳ ಪ್ರಕಾರ ಕುಟುಂಬಕ್ಕೆ ಒಂದು ಉದ್ಯೋಗ ಕಡ್ಡಾಯವಾಗಿ ನೀಡಲೇಬೇಕಾಗುತ್ತದೆ’ ಎಂದು ತಿಳಿಸಿದರು. ಆದರೆ ಕಂಪೆನಿ ಆಡಳಿತ ಮಂಡಳಿ ಮುಖ್ಯಸ್ಥ ಕೊದಂಡರಾಮರೆಡ್ಡಿ ಅವರು ಸಚಿವರ ಮಾತಿಗೂ ಬೆಲೆ ಕೊಡದೆ ಕಂಪೆನಿಗೆ ಅಲೆದಾಡಿಸುತ್ತಿರವುದರಿಂದ ಬೇಸತ್ತು 22 ವರ್ಷ ವಯಸ್ಸಿನ ಮಗ, ಮಗಳೊಂದಿಗೆ ಕಂಪೆನಿ ಎದುರುಗಡೆ ಪ್ರತಿಭಟನೆ ನಡೆಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ಚಿಂಚೋಳಿ ಪಿಎಸ್ಐ ಗಂಗಮ್ಮ ಅವರು ಪ್ರತಿಭಟನಾಕಾರರಿಂದ ಪೆಟ್ರೋಲ್ ಡಬ್ಬಿ ಕಸಿದುಕೊಂಡು ಅನಾಹುತ ತಪ್ಪಿಸಿದರು.

ಸಚಿವರ ತವರು ಕ್ಷೇತ್ರದಲ್ಲಿ ಬಡ ಕುಟುಂಬಕ್ಕೆ ಅನ್ಯಾಯವಾಗುತ್ತಿದ್ದು, ಕೃಷಿ ಭೂಮಿ ಕಳೆದುಕೊಂಡು ಉಪಜೀವನಕ್ಕಾಗಿ ಪರಿತಪ್ಪಿಸುತ್ತಿರುವ ಕುಟುಂಬಕ್ಕೆ ಜನಪ್ರತಿನಿಧಿಗಳು ನೆರವಿಗೆ ಬಾರದಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ನಾರಾಯಣಪುರ ಎಡ-ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ರೈತರ ಬೃಹತ್ ಪ್ರತಿಭಟನೆ

ಮುಖಂಡರಾದ ಮಾರುತಿ ಗಂಜಗಿರಿ, ಗೋಪಾಲ ಗಾರಂಪಳ್ಳಿ, ದಸ್ತಪ್ಪ ಮರಪಳ್ಳಿ ಅವರು ಸ್ಥಳಕ್ಕೆ ತೆರಳಿ ಕುಟುಂಬಕ್ಕೆ ಬೆಂಬಲವಾಗಿ ನಿಂತು ನ್ಯಾಯಕ್ಕಾಗಿ ದನಿ ಎತ್ತಿದರು.

ವರದಿ: ವಾಲಿಂಟರ್ ವೆಂಕಟೇಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...