ಕಲಬುರಗಿ | ನೇಮಕಾತಿಗಳಲ್ಲಿ ತಾರತಮ್ಯ; ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ‌ ಆಗ್ರಹ

Date:

ರಾಜ್ಯದ ಅಯಾ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಆಯ್ಕೆಯ (ಆಧ್ಯತೆ)ಯನ್ನು ಕೇಳುವ ಮೂಲಕ ಅನುಷ್ಠಾನಧಿಕಾರಿಗಳು ನಮ್ಮ ಹಕ್ಕಿನ ಹುದ್ದೆಗಳನ್ನು ಉದ್ದೇಶಪೂರ್ವಕವಾಗಿಯೇ ಕಸಿಯುತ್ತಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಆರೋಪಿಸಿದ್ದಾರೆ.

ಕಲ್ಯಾಣದ ಸಚಿವರು ಗಂಭೀರವಾಗಿ ಪರಿಗಣಿಸಿ ರಾಜ್ಯದ ಎಲ್ಲ ಇಲಾಖೆಗಳ ನೇಮಕಾತಿ ಮತ್ತು ಮುಂಬಡ್ತಿ ನೀಡುವ ಅನುಷ್ಠಾನಾಧಿಕಾರಿಗಳಿಗೆ ಸರ್ಕಾರದ ವತಿಯಿಂದ ಕಟ್ಟು ನಿಟ್ಟಿನ ಆದೇಶ ನೀಡಬೇಕು ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಭಾರತ ಸರ್ಕಾರ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿ ಮತ್ತು ನೇಮಕಾತಿಗಳಲ್ಲಿ ನಮ್ಮ ಪಾಲು ಪಡೆಯುವ ದೃಷ್ಟಿಯಿಂದ ಸಂವಿಧಾನ ಬದ್ಧ ವಿಶೇಷ ಸ್ಥಾನಮಾನ ನೀಡಿದೆ.‌‌ ಆದರೆ, ರಾಜ್ಯ ಸರ್ಕಾರ ಅಯಾ ಇಲಾಖೆಯ ನೇಮಕಾತಿಗಳಿಗೆ ಈ ಹಿಂದೆ ಸುಮಾರು ಐದು ಬಾರಿ ನೇಮಕಾತಿ ಸುತ್ತೋಲೆಗಳನ್ನು ಪರಿಷ್ಕರಣೆ ಮಾಡಿ ದ್ವಂದ್ವ ಸೃಷ್ಟಿಸಿತ್ತು. ತೀವ್ರ ಹೋರಾಟದ ಬಳಿಕ ಎಲ್ಲ ನೇಮಕಾತಿಗಳಲ್ಲಿ ಮೊದಲು ರಾಜ್ಯ ಮಟ್ಟದ ಮೆರಿಟ್ ಪಟ್ಟಿಯಂತೆ ನಮ್ಮ ಅಭ್ಯರ್ಥಿಗಳಿಗೆ ಅವರವರ ಮೆರಿಟ್ ಆಧಾರದ ಮೇಲೆ ಪರಿಗಣಿಸಿ ಪಟ್ಟಿ ಪ್ರಕಟಿಸಿ, ನಂತರ ನಮ್ಮ ಮೀಸಲಾತಿಯಡಿಯ ಪಟ್ಟಿ ಪ್ರಕಟಿಸಬೇಕು ಎಂದು ನಿಯಮ ಜಾರಿಗೆ ತರಲಾಯಿತು ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲಂಚ ಪ್ರಕರಣ | ಲೋಕಾಯುಕ್ತ ಸಿಬ್ಬಂದಿ ಮೇಲೆ ಕಾರು ನುಗ್ಗಿಸಿದ ಅಧಿಕಾರಿ ಬಂಧನ

ಪ್ರಸ್ತುತ ನಿಯಮದಲ್ಲಿ ಹೀಗಿದ್ದರೂ ಕಲ್ಯಾಣದ ಅಭ್ಯರ್ಥಿಗಳಿಗೆ ಆಯ್ಕೆಯ ಪ್ರಶ್ನೆ ಕೇಳುವ ಮೂಲಕ ಅನುಷ್ಠಾನ ಅಧಿಕಾರಿಗಳು ವಿನಾ ಕಾರಣ ಸಮಸ್ಯೆ ಹುಟ್ಟಿಸಿ ನಮ್ಮ ಪಾಲಿನ ಹುದ್ದೆಗಳನ್ನು ಕಬಳಿಸುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಲ್ಯಾಣದ ಮಂತ್ರಿಗಳು ಗಂಭೀರವಾಗಿ ಪರಿಗಣಿಸಿ ವಿಶೇಷ ಸ್ಥಾನಮಾನದಡಿ ನೇಮಕಾತಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾನದಂಡದ ಮಾದರಿ ನಮ್ಮ ಹಕ್ಕಿನ ನೇಮಕಾತಿ, ಮುಂಬಡ್ತಿಗಳು ಸುಸೂತ್ರವಾಗಿ ನಮ್ಮ ಅಭ್ಯರ್ಥಿಗಳಿಗೆ ಸಿಗುವ ನಿಟ್ಟಿನಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯದ ಅನುಷ್ಠಾನಧಿಕಾರಿಗಳ ದ್ವಂದ್ವ ನೀತಿಯನ್ನು ಖಂಡಿಸಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...