ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆ : ಫ್ರಿಕ್ವೆನ್ಸಿ ಕಡಿತಕ್ಕೆ ಗ್ರಾಮಸ್ಥರ ಒತ್ತಾಯ

Date:

ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಸಲಾಗಿದ್ದು, ಇದರಿಂದಾಗಿ ಅಕ್ಕ-ಪಕ್ಕದ ಗ್ರಾಮಗಳ ಜನರು ಮೊಬೈಲ್‌ನಲ್ಲಿ ಮಾತನಾಡಲು ತೀವ್ರ ಸಂಕಷ್ಟವಾಗುತ್ತಿದೆ. ಕೂಡಲೇ ಪ್ರಿಕ್ವೆನ್ಸಿ ಕಡಿಮೆ ಮಾಡುವಂತೆ ಸುತ್ತಲಿನ ಗ್ರಾಮಸ್ಥರು ಒತ್ತಾಯಿಸಿದರು.

ಈ ಸಂಬಂಧ ನಂದಿಕೂರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪವನಕುಮಾರ ವಳಕೇರಿ ನೇತೃತ್ವದಲ್ಲಿ ಪಾಣೆಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಸ್ಥರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ.ಅನಿತಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮುಖಂಡ ಪವನ್ ಕುಮಾರ್ ವಳಕೇರಿ ಮಾತನಾಡಿ, ʼಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಬಾರದೆಂದು ಜಾಮರ್ ಅಳವಡಿಸಿದ್ದಾರೆ. ಆದರೆ, ಇದರ ಶಿಕ್ಷೆ ಕೈದಿಗಳಿಗಿಂತ ಜನಸಾಮಾನ್ಯರಿಗೆ ಹೆಚ್ಚು ಆಗುತ್ತಿದೆ. ಜೈಲು ಸುತ್ತಲಿನ ಗ್ರಾಮಗಳಾದ ಪಾಣೇಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಗಳ ಜನರು ನೆಟವರ್ಕ್‌ ಸಮಸ್ಯೆಯಿಂದ ಬೇಸತ್ತು ಹೋಗಿದ್ದಾರೆ. ಇಲ್ಲಿನ ಜನರು ಮೊಬೈಲ್ ಕರೆ ಬರುವ-ಹೋಗುವುದು ಸಾಧ್ಯ ಇಲ್ಲದಂತಾಗಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸೀತನೂರ್ ಗ್ರಾಮದಲ್ಲಿ ನೆಟ್ವರ್ಕ್ ಬ್ಯೂಸಿ ಎಂದು ತೋರಿಸುತ್ತಿದು, ಫೋನ್ ಕರೆ ಮಾಡಿದವರು ತಪ್ಪಾಗಿ ಅರ್ಥೈಸಿಕೊಂಡು ಉದ್ದೇಶಪೂರ್ವಕ ಕರೆ ಸ್ವೀಕರಿಸುತ್ತಿಲ್ಲ ಎಂಬ ಭಾವನೆ ಮೂಡಿಸುತ್ತಿದ್ದಾರೆ. ಇದರಿಂದ ಜನರು ಯಾರೊಂದಿಗೂ ಸಂಪರ್ಕಿಸಲು ಸಾಧ್ಯವಾಗದೇ ಕೆಲಸ ಕಾರ್ಯಗಳಿಗಾಗಿ ಪರದಾಡಬೇಕಾದ ಸ್ಥಿತಿ ಎದುರಿಸುತ್ತಿದ್ದಾರೆʼ ಎಂದು ಹೇಳಿದರು.

ʼಜೈಲಿನಲ್ಲಿ ಅಳವಡಿಸಿರುವ ಜಾಮರ್ ಫ್ರಿಕ್ವೆನ್ಸಿ ತುಂಬಾ ಕಡಿಮೆ ಮಾಡಬೇಕು ಮತ್ತು ಅದರ ವ್ಯಾಪ್ತಿ ಕಡಿಮೆಗೊಳಿಸಿ ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇದೇ ಮೇ 26ರಂದು ಮುಖ್ಯ ಹೆದ್ದಾರಿ ರಸ್ತೆ ಬಂದ್ ಮಾಡಿ ಚಳುವಳಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಮುಖರಾದ ಶಂಕರ್ ಕಾರ್ಬಾರಿ, ನಾಗೇಶ್ ಮುಚಖೇಡ, ಶರಣಯ್ಯ ಸ್ವಾಮಿ ಸೀತನೂರ್, ಹುಸೇನ್ ಸಾಬ್ ಮೋಹಜನ್, ವೀರಯ್ಯ ಸ್ವಾಮಿ, ಕಲ್ಯಾಣರಾವ್ ಪಾಟೀಲ್ ಸೇರಿದಂತೆ ಇತರರಿದ್ದರು.

ಇದನ್ನೂ ಓದಿ : ಬೀದರ್‌ | ಬಿಟ್ಟೂಬಿಡದ ಮಳೆ : 325 ಹೆಕ್ಟೇರ್‌ಗೂ ಅಧಿಕ ಬೆಳೆ ಹಾನಿ; ಪರಿಹಾರದ ನಿರೀಕ್ಷೆಯಲ್ಲಿ ರೈತರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...