ಕಲಬುರಗಿ | ʼಪಾಶʼ ಕಿರುಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಗಳ ಗರಿ

Date:

ಗಧಾಗ್ರಜ ಫಿಲಂಸ್‌ ಅಡಿಯಲ್ಲಿ ನಿರ್ಮಾಣಗೊಂಡಿದ್ದ ʼಪಾಶʼ ಕಿರುಚಿತ್ರ 8  ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕಲಬುರಗಿಯವರೇ ಆದ ನಿರ್ದೇಶಕ ಲಕ್ಷ್ಮೀಕಾಂತ ಜೋಶಿ ಅವರು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಕಾರ್ಯ ನಿರ್ವಹಿಸುತ್ತಾ  ಚೊಚ್ಚಲ ಚಿತ್ರ ನಿರ್ದೇಶನಕ್ಕೆ ಪ್ರಯತ್ನಸಿದ್ದಾರೆ.

ಇಡೀ ತಂಡ ಕಲಬುರಗಿ ಭಾಗದವರೇ ಆಗಿದ್ದು, ಜಿಲ್ಲೆಗೆ ಇರುವ ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿಯನ್ನು ಕಿತ್ತೊಗೆಯಲು ಶ್ರಮಿಸಿದ್ದೇವು ಹಾಗೂ ಅದರಂತೆ ಜಯಸಿದ್ದೇವೆ ಎನ್ನುತ್ತದೆ ಚಿತ್ರತಂಡ.

ಈ ಕಿರುಚಿತ್ರಕ್ಕೆ ಹಿರಿಯ ಸಾಹಿತಿ ಹಾಗೂ ನಿರ್ದೇಶಕ ʼಜೋಗಿʼ ( ಗಿರೀಶರಾವ ಹತ್ವಾರ) ಅವರ ʼಲೈಫ್ ಈಸ್ ಬ್ಯೂಟಿಫುಲ್ʼ ಕೃತಿಯಲ್ಲಿಯ ಮೊದಲ ಕತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಚಿತ್ರ ನಿರ್ದೇಶಕ ಲಕ್ಷ್ಮಿಕಾಂತ ಜೋಶಿ ಅವರು ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪಾಶʼ ಬೆಂಗಳೂರಿನ ʼವಿಡಿಯೋಟೇಪ್ ಫಿಲ್ಮ್ ಫೆಸ್ಟಿವಲ್ʼ ನಲ್ಲಿ ‘ಉತ್ತಮ ಸಾಮಾಜಿಕ ಸಂದೇಶ’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ.

ಅದೇ ರೀತಿ ಕೊಲ್ಕತ್ತಾದ ಪ್ರತಿಷ್ಠಿತ ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ʼಉತ್ತಮ ಕನ್ನಡ ಕಿರುಚಿತ್ರʼ ಹಾಗೂ ಮುಂಬೈನ ಜಾಶ್ನೆ ಚಲನಚಿತ್ರೋತ್ಸವʼ ದಲ್ಲಿಯೂ ಉತ್ತಮ ಕನ್ನಡ ಕಿರುಚಿತ್ರ ಪ್ರಶಸ್ತಿ ಪಡೆದುಕೊಂಡಿದೆ.

ಮಹಾರಾಷ್ಟ್ರದ ರೀಲ್ಸ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ʼಉತ್ತಮ ಕಿರುಚಿತ್ರʼ ವಿಭಾಗದಲ್ಲಿ ತನ್ನ ಛಾಪು ಮೂಡಿಸಿದೆ ಮತ್ತು ಆನ್ ಲೈನ್ ಫೆಸ್ಟಿವಲ್‌ಗಳಾದ ಡೈಮಂಡ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ʼಉತ್ತಮ ಕತೆʼ ಹಾಗೂ ಐಕಾನಿಕ್ ಶಾರ್ಟ್ ಸಿನಿ ಅವಾರ್ಡ್ಸ್ ನಲ್ಲಿಯೂ ʼಉತ್ತಮ ಕತೆʼ, ʼಉತ್ತಮ ಪ್ರಾಯೋಗಿಕ ಕಿರುಚಿತ್ರʼ, ʼಉತ್ತಮ ಕನ್ನಡ ಕಿರುಚಿತ್ರʼ ವಿಭಾಗದಲ್ಲಿ ಜಯಭೇರಿ ಭಾರಿಸಿದೆ.

ಈ ಗೆಲುವಿಗೆ ತಂಡದ ಎಲ್ಲಾ ಸದಸ್ಯರ ಸಹಕಾರ, ಪರಿಶ್ರಮವೇ ಕಾರಣ. ಈ ಗೆಲುವನ್ನು ಅವರೊಂದಿಗೆ ಹಂಚಿಕೊಳ್ಳುವುದಕ್ಕೆ ತುಂಬಾ ಸಂತಸ ಎನಿಸುತ್ತದೆ ಎನ್ನುತ್ತಾರೆ ನಿರ್ದೇಶಕರು.

ಮುಖ್ಯಪಾತ್ರದಲ್ಲಿ  ಕಿರುತೆರೆಯ (ಮುಕ್ತ ಮುಕ್ತ, ಮಹಾಸತಿ, ಗಂಗಾ ಧಾರಾವಾಹಿ ಖ್ಯಾತಿಯ) ಹಿರಿಯ ನಟ ವಿಜಯ ಕುಲಕರ್ಣಿ ನಟಿಸಿದ್ದರೆ, ಕಲರ್ಸ್ ಕನ್ನಡ ವಾಹಿನಿಯ, ಕಾಮಿಡಿ ಕಂಪನಿ ಖ್ಯಾತಿಯ ಸೋಮಶಂಕರ್ ಬಿರಾದಾರ ಅವರು ಪ್ರಮುಖ ಪಾತ್ರವೊಂದರಲ್ಲಿ ತೆರೆ ಹಂಚಿಕೊಂಡಿದ್ದಾರೆ.

ರಂಗಾಯಣ ಕಲಾವಿದರಾದ ಉಮೇಶ್ ಪಾಟೀಲ್, ಶ್ರೀನಿವಾಸ ದೋರನಳ್ಳಿ, ಕೌಶಿಕ್ ಕುಲಕರ್ಣಿ, ಪ್ರದೀಪ ಬೆಳಮಗಿ, ರಿಷಿಕೇಶ ಕುಲಕರ್ಣಿ, ನೀಲಾಂಬಿಕಾ, ಲಕ್ಷ್ಮೀ ಅಥಣಿ ತಾರಾಗಣದಲ್ಲಿದ್ದಾರೆ. ಕುಮಾರಿ ಸ್ಪೂರ್ತಿ ಅಥಣಿ , ಸ್ನೇಹ , ಕಾವ್ಯ , ವೈಷ್ಣವಿ ಬಾಲ ಕಲಾವಿದರಾಗಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಸಹ ನಿರ್ದೇಶಕರಾಗಿ ಸೋಮಶಂಕರ್ ಬಿರಾದಾರ, ಸಹಾಯಕ ನಿರ್ದೇಶಕರಾಗಿ ಅಂಬರೀಶ್ ಮರಾಠಾ ಕಾರ್ಯ ನಿರ್ವಹಿಸಿದ್ದಾರೆ. ಛಾಯಾಗ್ರಾಹಕರಾಗಿ ರಾಘು ಮರೆನೂರ, ಸಂಕಲನ ಓಂಕಾರ ಮತ್ತು ಭಾಗ್ಯೇಶ್ ಪಾಟೀಲ್ ಜಂಟಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಹಾಗೂ ಸುಚೀನ್ ಶರ್ಮಾ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...