ಕಲಬುರಗಿ | ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದ ಪತ್ರಕರ್ತನಿಗೆ ಬೆದರಿಕೆ : ಪಿಡಿಒ ಅಮಾನತು

Date:

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಮಾಹಿತಿ ಕೋರಿದ್ದ ಪತ್ರಕರ್ತನಿಗೆ ಬೆದರಿಕೆ ಹಾಕಿ ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಚಿತ್ತಾಪುರ ತಾಲ್ಲೂಕಿನ ಅಳ್ಳೊಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೇಂದ್ರಪ್ಪ ಭಾಲ್ಕಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಪತ್ರಿಕೆಯೊಂದರ ವರದಿಗಾರ ನಾಗಯ್ಯ ಸ್ವಾಮಿ ಅಲ್ಲೂರು ಅವರು 15ನೇ ಹಣಕಾಸು ಯೋಜನೆಯಡಿ ಖರ್ಚಾದ ಮಾಹಿತಿ ಕೊಡುವಂತೆ ಅಳ್ಳೊಳ್ಳಿ ಗ್ರಾ.ಪಂ.ಗೆ ಆರ್‌ಟಿಐ ಅರ್ಜಿ ಹಾಕಿದ್ದರು. ಖರ್ಚಿನ ಮಾಹಿತಿಯನ್ನು ನೀಡದೆ ಅರ್ಜಿದಾರನಿಗೆ ಫೋನ್ ಕರೆ ಮಾಡಿದ್ದ ಪಿಡಿಒ ದೇವೇಂದ್ರಪ್ಪ, ʼಬ್ಲಾಕ್‌ಮೇಲ್ ಮಾಡಲು ಅರ್ಜಿ ಹಾಕಿದ್ದೀಯಾ, ಪೊಲೀಸರಿಗೆ ದೂರು ಕೊಟ್ಟು ಒಳ ಹಾಕಿಸುತ್ತೇನೆʼ ಎಂದು ಬೆದರಿಕೆ ಹಾಕಿದ್ದರು ಎಂದು ಸಿಇಒ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ನಾಗಯ್ಯ ಸ್ವಾಮಿ ಅವರು ಚಿತ್ತಾಪುರ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದ್ದರು. ದೇವೇಂದ್ರಪ್ಪ ಅವರಿಗೆ ಇಒ ನೋಟಿಸ್‌ ನೀಡಿದ್ದರೂ ಸಮಜಾಯಿಷಿ ನೀಡಿರಲಿಲ್ಲ. ಜತೆಗೆ ಆರ್‌ಟಿಐ ಅಡಿ ಮಾಹಿತಿಯೂ ಕೊಡದೆ ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ, ದೇವೇಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...