ಕಲಬುರಗಿ | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ; ಹೈಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಸಿದ್ದರಾಮಯ್ಯ

Date:

ಸ್ವಾಮಿ ರಮಾನಂದ ತೀರ್ಥರು ಹಾಗೂ ಹಲವು ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಸಂಕಲ್ಪ ಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಲ್ಯಾಣ ‌ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿಯ ಸಿಎಆರ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

“2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡಲಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನದಲ್ಲಿ 371 (ಜೆ) ಪರಿಚ್ಛೇದ ಸೇರ್ಪಡೆಯೊಂದಿಗೆ ಹೈದರಾಬಾದ್‌ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಂತಾಯಿತು. ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು. ಮುಂದೆ ಮಂಡಳಿಯನ್ನು ಕಲ್ಯಾಣ ಕರ್ನಾಟಕ ‌ಪ್ರದೇಶ ಅಭಿವೃದ್ಧಿ ಮಂಡಳಿ ಎಂದು‌ ಪುನರ್ ನಾಮಕರಣ ಮಾಡಲಾಯಿತು” ಎಂದರು.

“ಸಮಾನತೆಯ ಹೊಸ ಹಾದಿಯಲ್ಲಿ ಸಾಗಿದ ಬುದ್ಧ, ಸಾಮಾಜಿಕ ‌ಕ್ರಾಂತಿಯ ಹರಿಕಾರ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ತತ್ವ ಮತ್ತು ಅದರ್ಶಗಳನ್ನು ಅಕ್ಷರಶಃ ಅಳವಡಿಸಿಕೊಂಡಿರುವ ನಮ್ಮ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನವೇ ಚುನಾವಣಾ ‌ಪೂರ್ವದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ 100 ದಿನಗಳ ಅವಧಿಯಲ್ಲಿ ಪ್ರಮುಖ ನಾಲ್ಕು ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಇದರಿಂದ ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಹೇಳಿದರು.

“ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ 371 (ಜೆ) ತಿದ್ದುಪಡಿಯನ್ವಯ ರಚನೆಗೊಂಡ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಪ್ರಸಕ್ತ 2023-24ನೇ ಸಾಲಿನ ಬಜೆಟ್‌ನಲ್ಲಿ ತಿಳಿಸಿದಂತೆ 5 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಬಳಿಕ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಕ ದಳ ಸೇರಿದಂತೆ ಹಲವು ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನದ ಸಂಭ್ರಮ ಮನೆ ಮಾಡಿದೆ. ದೇಶಕ್ಕೆ ಆಗಸ್ಟ್‌ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೆ ಹೈದ್ರಾಬಾದ್ ನಿಜಾಮರಿಂದ 1948 ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ಸಿಕ್ಕಿತು. ಇದೀಗ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಆಚರಣೆ ನಡೆಯುತ್ತಿದೆ. 

ಈ ಸುದ್ದಿ ಓದಿದ್ದೀರಾ? ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ‘ಜನತಾ ದರ್ಶನ’ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ನಾಡಿನ ಸ್ವಾತಂತ್ರ್ಯಕ್ಕಾಗಿ ದಿಟ್ಟ ಕ್ರಮ ಕೈಗೊಂಡು ಮಿಲಿಟರಿ ಆಪರೇಷನ್ ನಡೆಸಿ ಹೈದರಾಬಾದ್ ನಿಜಾಮನ ಕಪಿಮುಷ್ಟಿಯಿಂದ ಮುಕ್ತಿಗೊಳಿಸಿ ಸ್ವಾತಂತ್ರ್ಯ ಕೊಡಿಸಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೇರವೇರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಐಟಿ-ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ‌ಕಾರ್ಯದರ್ಶಿ ಗೋವಿಂದರಾಜ, ಶಾಸಕರುಗಳಾದ ಬಿ ಆರ್ ಪಾಟೀಲ, ಎಂ ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯರುಗಳಾದ ತಿಪ್ಪಣ್ಣಪ್ಪ ಕಮಕನೂರ, ಶಶೀಲ್ ಜಿ. ನಮೋಶಿ, ಮೇಯರ್ ವಿಶಾಲ ದರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಐಜಿಪಿ ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಮಿಷನರ್ ಚೇತನ್ ಆರ್, ಜಿ ಪಂ ಸಿಇಒ ಭಂವರ್ ಸಿಂಗ್ ಮೀನಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...