ಕಲಬುರಗಿ | ಕರ್ನಾಟಕ ಕಬ್ಬು ಬೆಳೆಗಾರರ ಸಂಘ ವತಿಯಿಂದ ರಸ್ತೆ ತಡೆದು ಬೃಹತ್ ಪ್ರತಿಭಟನೆ

Date:

ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಅಫಜಲಪುರ ತಾಲೂಕಿನ ಚೌಡಾಪುರ ಕ್ರಾಸ್ ಬಳಿ ಗುರುವಾರ ಭಾರೀ ಪ್ರಮಾಣದ ರಸ್ತೆ ತಡೆ ಚಳವಳಿ ನಡೆಸಿ ಅಫಜಲಪುರ ತಹಶಿಲ್ದಾರರ ರವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬೆಳಗಾವಿ ಮಾದರಿಯಲ್ಲಿ ಕಬ್ಬಿನ ಬೆಂಬಲ ಬೆಲೆ ನಿಗಧಿಪಡಿಸಿ, ಕಟಾವು ಮತ್ತು ಸಾಗಾಣಿಕೆ ವೆಚ್ಚ ನಿಶ್ಚಿತಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನೂರಾರು ರೈತರು ಪಾಲ್ಗೊಂಡು, “ಸಿಹಿ ಬೆಳೆದು ಕಹಿ ಉಣ್ಣುವ ಸ್ಥಿತಿ ಕೊನೆಗೊಳ್ಳಲಿ!”, “ಕಬ್ಬು ಬೆಳೆಗಾರರ ಬೆವರಿನ ಬೆಲೆ ನೀಡಬೇಕು!” ಎಂದು ಘೋಷಣೆ ಕೂಗಿದರು. ಸರಕಾರಿ, ಕಾರ್ಖಾನೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರು ಸಕ್ಕರೆ ಕಾರ್ಖಾನೆಗಳ ಅನ್ಯಾಯದ ವಿರುದ್ಧ ಗಂಭೀರ ಆರೋಪ ಮಾಡಿದರು. ‘ಸರಕಾರದ ಆದೇಶವಿದ್ದರೂ ಕಾರ್ಖಾನೆಗಳು ಸಕ್ಕರೆ ಇಳುವರಿ ಪರೀಕ್ಷೆ ಪ್ರತಿ 15 ದಿನಕ್ಕೊಮ್ಮೆ ನಡೆಸದೇ, ರೈತರ ಅನುಮತಿಯಿಲ್ಲದೆ ಲೆಕ್ಕ ಅಂಕೆಗಳನ್ನು ನಿಗದಿಪಡಿಸುತ್ತಿವೆ. ತೂಕದ ಲೆಕ್ಕಾಚಾರದಲ್ಲೂ ಮೋಸ ನಡೆದಿದೆ,” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡ ಶರಣಬಸಪ್ಪ ಮಮಶೇಟ್ಟಿ ಮಾತನಾಡಿ, “ಕಾರ್ಖಾನೆಗಳು ಸರ್ಕಾರದ ಕಟಾವು ಮತ್ತು ಸಾಗಾಣಿಕೆ ಮಾರ್ಗಸೂಚಿ ಉಲ್ಲಂಘಿಸಿ ರೈತರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿವೆ. ರೈತರು ಶ್ರಮಿಸಿದರೂ ಲಾಭ ಪಡೆಯಲಾಗುತ್ತಿಲ್ಲ,” ಎಂದು ವಿಷಾದಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಸುಮಾರು 45 ಸಾವಿರ ಹೆಕ್ಟೇರ್‌ನಲ್ಲಿ ಕಬ್ಬು ಬೆಳೆ ಬೆಳೆಯಲ್ಪಡುತ್ತಿದೆ. ಒಂದು ಟನ್‌ ಕಬ್ಬು ಬೆಳೆಯಲು ರೈತರಿಗೆ ಸರಾಸರಿ ರೂ. 3,500 ವೆಚ್ಚವಾಗುತ್ತದೆ. ಆದರೆ ಸರ್ಕಾರ ನಿಗದಿಪಡಿಸಿರುವ ಎಫ್‌ಆರ್‌ಪಿ ಪ್ರಕಾರ ಅವರಿಗೆ ಸಿಗುತ್ತಿರುವ ಮೊತ್ತ ಕೇವಲ ₹3,150 ಎಂದು ತಿಳಿಸಿದರು.

ಮುಂದುವರೆದು ಡಾ. ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸಿನ ಪ್ರಕಾರ ಕಬ್ಬಿಗೆ ಕನಿಷ್ಠ ಟನ್‌ಗೆ ರೂ ಐದು ಸಾವಿರ ಬೆಲೆ ದೊರೆಯಬೇಕು. ಆದರೆ ಕೇಂದ್ರ ಸರ್ಕಾರ ಕೇವಲ ರೂ. 150 ಟನ್ ಹೆಚ್ಚಳ ಮಾಡಿ ರೈತರೊಂದಿಗೆ ಅನ್ಯಾಯ ಮಾಡಿದೆ,” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮಂಗನಿಗೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು

ಈ ವೇಳೆ ಪ್ರಮುಖ ಬೇಡಿಗಳಾದ ಡಾ. ಸ್ವಾಮಿನಾಥನ್ ಆಯೋಗದ ವರದಿಯಂತೆ ಕಬ್ಬಿಗೆ ಟನ್‌ಗೆ ರೂ. 5 ಸಾವಿರ ಬೆಂಬಲ ಬೆಲೆ ನಿಗಧಿಪಡಿಸಬೇಕು, 2022–23ರ ಸಾಲಿನ ಬಾಕಿ ₹100 ಪ್ರತಿ ಟನ್ ಹಣ (ಸುಮಾರು ₹11 ಕೋಟಿ) ತಕ್ಷಣ ಬಿಡುಗಡೆ ಮಾಡಬೇಕು, ಕಬ್ಬು ಸರಬರಾಜು ಮಾಡಿದ 14 ದಿನಗಳೊಳಗೆ ಹಣ ಪಾವತಿ ಖಚಿತಪಡಿಸಬೇಕು, ಕಟಾವು ಮತ್ತು ಸಾಗಾಣಿಕೆ ವೆಚ್ಚಕ್ಕೆ ಸರ್ಕಾರದ ಮಾರ್ಗಸೂಚಿ ಅನುಸರಿಸಬೇಕು, ಸಕ್ಕರೆ ಇಳುವರಿ ಪರೀಕ್ಷೆಗೆ ಕೃಷಿ ವಿಶ್ವವಿದ್ಯಾಲಯ ಹಾಗೂ ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದ ತಜ್ಞರ ಸಮಿತಿ ರಚಿಸಬೇಕು, ಎಸ್‌ಎಪಿ (ಸ್ಟೇಟ್ ಅಡ್ವೈಸರಿ ಪ್ರೈಜ್) ಮೂಲಕ ಟನ್‌ಗೆ ರೂ. 5 ಸಾವಿರ ಬೆಲೆ ನಿಗಧಿಪಡಿಸಬೇಕು ಅಥವಾ ತಮಿಳುನಾಡು ಮಾದರಿಯಲ್ಲಿ ಟನ್‌ಗೆ ₹500 ಪ್ರೋತ್ಸಾಹ ಧನ ನೀಡಬೇಕು, ಉಪೋತ್ಪನ್ನಗಳಾದ ಎಥೆನಾಲ್, ಮೊಲಾಸಸ್, ಕಾಕಂಬಿ ಮುಂತಾದ ಲಾಭಾಂಶದಲ್ಲಿ ರೈತರಿಗೆ ಪಾಲು ನೀಡಬೇಕು, ಕಾರ್ಖಾನೆಗಳ ಬಾಕಿ ಪಾವತಿಗೆ ಬಡ್ಡಿ ಸೇರಿಸಿ ಹಣ ಪಾವತಿಸಬೇಕು, ಎಥೆನಾಲ್ ಉತ್ಪಾದನೆ ಪ್ರಮಾಣವನ್ನು ಶೇ.25ಕ್ಕೆ ಹೆಚ್ಚಿಸಬೇಕು, ರೈತರಿಗೆ ಮಡ್ಡಿ ಹಾಗೂ ಬೂದಿಯನ್ನು ಉಚಿತವಾಗಿ ನೀಡಬೇಕೆಂದು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಎಸ್‌ಎಫ್ಎಫ್ ರಾಜ್ಯ ಉಪಾಧ್ಯಕ್ಷ ಸಿದ್ದರಾಮ ದಣ್ಣೂರು, ಅಧ್ಯಕ್ಷ ಅಶೋಕ ಹೂಗಾರ, ಶಿವಯೋಗೆಪ್ಪಾ ಬಿರದ್ದಾರ ಸೇರಿದಂತೆ ಅನೇಕರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...