ಕಲಬುರಗಿ | ವಿದ್ಯುತ್‌ ದರ ಏರಿಕೆ ವಿರೋಧಿಸಿ ಕೆಪಿಆರ್‌ಎಸ್‌ ಪ್ರತಿಭಟನೆ

Date:

ವಿದ್ಯುತ್ ಮೀಟರೀಕರಣದ ಕೆಇಆರ್‌ಸಿ ಸುತ್ತೋಲೆ ವಿರೋಧಿಸಿ ಹಾಗೂ ವಿದ್ಯುತ್ ದರ ಏರಿಕೆ ಧಿಕ್ಕರಿಸಿ ಕರ್ನಾಟಕ ಪ್ರಾಂತ ರೈತ ಸಂಘದ(ಕೆಪಿಆರ್‌ಎಸ್) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಲಬುರಗಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿದ್ಯುತ್‌ ಸರಬರಾಜು ಕಂಪನಿ ವ್ಯವಸ್ಥಾಪಕ ನಿರ್ದೇಶಕರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ‌ದರು.

“ಹತ್ತು ಎಚ್‌ಪಿಗಿಂತ ಕಡಿಮೆ ಇರುವ ಎಲ್ಲ ಕೃಷಿ ಪಂಪಸೆಟ್‌ಗಳಿಗೆ, ಮೀಟರ್ ಅಳವಡಿಸಿ, ಅದರ ಆರ್‌ಆರ್‌ ನಂಬರ್‌ಗಳನ್ನು ರೈತರ ಆಧಾರ್ ಕಾರ್ಡ್ ಜೊತೆ ಜೋಡಣೆ ಮಾಡಬೇಕು ಎಂದು ರಾಜ್ಯದ ಎಲ್ಲ ವಿದ್ಯುತ್ ವಿತರಣಾ ಕಂಪನಿಗಳಿಗೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್‌ಸಿ) ಆದೇಶ ಹೊರಡಿಸಿರುವುದು ಪಂಪಸೆಟ್ ಅವಲಂಬಿಸಿ ಕೃಷಿ ಮಾಡುತ್ತಿರುವ ರೈತರಿಗೆ ಅಘಾತಕಾರಿಯಾಗಿದೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರು ತಿಂಗಳ ಒಳಗೆ ಎಲ್ಲ ಕೃಷಿ ಪಂಪಸೆಟ್‌ಗಳಿಗೆ ಆಧಾರ್ ಕಾರ್ಡ್ ಜೋಡಣೆ ಮಾಡದಿದ್ದರೆ ಅಂತಹ ಕೃಷಿ ಪಂಪಸೆಟ್‌ಗಳಿಗೆ ಸರ್ಕಾರದ ಸಹಾಯಧನ ಬಿಡುಗಡೆ ಮಾಡುವುದಿಲ್ಲ ಎಂದು ಎಚ್ಚರಿಸಿರುವ ಕೆಇಆರ್‌ಸಿ ಸುತ್ತೋಲೆಯನ್ನು ಕೂಡಲೆ ಹಿಂಪಡೆಯಲು ಬೇಕಾದ ಅಗತ್ಯ ಕ್ರಮಗಳನ್ನು ಅನುಸರಿಸಿ ರೈತರ ಆತಂಕವನ್ನು ನಿವಾರಿಸಬೇಕು” ಎಂದು ರಾಜ್ಯ ಸರ್ಕಾರದ ಇಂಧನ ಇಲಾಖೆಯನ್ನು ಒತ್ತಾಯಿಸಿದ್ದಾರೆ.

“ಕೃಷಿಯಿಂದ ಈಗಾಗಲೇ ನಷ್ಟ ಅನುಭವಿಸುತ್ತಿದ್ದೇವೆ. ಕೃಷಿ ಲಾಗುವಾಡುಗಳ ದುಬಾರಿ ವೆಚ್ಚದಿಂದಾಗಿ ಪ್ರತಿಯೊಂದು ರೈತ ಕುಟುಂಬವು ಅಪಾರ ಸಾಲ- ಕಟವನ್ನು ಎದುರಿಸುತ್ತಿದೆ. ದೇಶದ ಹಾಗೂ ರಾಜ್ಯದ ಆಹಾರ ಭದ್ರತೆ, ಸ್ವಾವಲಂಬನೆಗೆ ಇಷ್ಟೆಲ್ಲಾ ಸಂಕಟಗಳ ನಡುವೆ ಶ್ರಮಿಸುತ್ತಿರುವ ರೈತರನ್ನು ಮತ್ತಷ್ಟು ಸಂಕಟಕ್ಕೆ ತಳ್ಳುವ ಕ್ರಮಗಳು ರೈತ ಸಮುದಾಯದ ಆತ್ಮಸ್ಥೈರ್ಯವನ್ನೇ ಕುಗ್ಗಿಸುತ್ತವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಭೂಮಿ ಮತ್ತು ನೀರು ರೈತರ ಮೂಲಭೂತ ಅವಶ್ಯಕತೆಯಾಗಿದೆ. ಇಂತಹ ಅಗತ್ಯಗಳನ್ನು ಪೂರೈಸುವ ಜವಾಬ್ದಾರಿ ಇರುವ ಸರ್ಕಾರಗಳು ತಮ್ಮ ಹೊಣೆಗಾರಿಕೆಯಿಂದ ನುಣಚಿಕೊಳ್ಳುವಂತಿಲ್ಲ. ಜೀವನ ವೆಚ್ಚ ಮತ್ತು ಬೇಸಾಯದ ವೆಚ್ಚದ ಅಧಿಕ ಭಾರದಿಂದ ನರಳುತ್ತಿರುವ ರೈತರ ಗಾಯದ ಮೇಲೆ ಬರೆ ಎಳೆಯುವ ಇಂತಹ ನಿರ್ಧಾರಗಳನ್ನು ಕೂಡಲೇ ಕೈ ಬಿಡಬೇಕು” ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಸಚಿವ ಕೃಷ್ಣ ಭೈರೇಗೌಡ ಒತ್ತಾಯ

“ವಿದ್ಯುತ್ ರಂಗವನ್ನು ಸಂಪೂರ್ಣ ಖಾಸಗೀಕರಣ ಮಾಡುವ ಕರಾಳ ವಿದ್ಯುತ್ ತಿದ್ದುಪಡಿ ಕಾಯ್ದೆ 2022 ರೈತರ ಪ್ರಬಲ ವಿರೋಧದ ನಡುವೆಯೂ ಸಂಸತ್ತಿನಲ್ಲಿ ಮಂಡನೆಯಾಗಿದೆ. ಇದು ಸಂಸತ್ತಿನಲ್ಲಿ ಅಂಗೀಕಾರ ಆಗುವ ಮುನ್ನವೇ ಇಂತಹ ರೈತ ವಿರೋಧಿ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ಮಾಡುವ ಪ್ರಯತ್ನವು ಕಾನೂನಿನ ಆಳ್ವಿಕೆಯ ಅಣಕವಾಗಿದೆ” ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕೆಪಿಆರ್‌ಎಸ್‌ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಸೈಯಿಬಣ್ಣ ಗುಡುಬಾ, ಸುಭಾಷ್ ಹೊಸಮನಿ, ಅಲ್ತಾಫ್ ಇನಾಂದಾರ್, ಗೌರಮ್ಮ ಪಿ ಪಾಟೀಲ್, ಎಂ ಬಿ ಸಜ್ಜನ್, ರಾಯಪ್ಪ ಹುರಮುಂಜಿ, ನಾಗಯ್ಯಾ ಸ್ವಾಮಿ, ಮೇಘರಾಜ ಕಠಾರೆ, ರೇವಣ್ಣಸಿದ್ದಪ್ಪಾ ಪಾಟೀಲ್, ರೇವಣಸಿದ್ಧಪ್ಪಾ ಮುಕರಂಬಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...