ಕಲಬುರಗಿ | ಅತಿವೃಷ್ಟಿಯಿಂದ ಜಮೀನು ಜಲಾವೃತ; ಬೆಳೆ ಹಾನಿ ಪರಿಹಾರದ ನಿರೀಕ್ಷೆಯಲ್ಲಿ ರೈತರು

Date:

ಕಳೆದ ಕೆಲ ದಿನಗಳಿಂದ ಕಲಬುರಗಿ ಜಿಲ್ಲೆಯಾದ್ಯಂತ ಸತತ ಸುರಿದ ಮಳೆಯಿಂದಾಗಿ ತೊಗರಿ, ಹೆಸರು, ಉದ್ದು, ಹತ್ತಿ, ಸೋಯಾಬಿನ್ ಸೇರಿದಂತೆ ಇತರೆ ಬೆಳೆ ಹಾನಿಯಾಗಿದ್ದು, ರೈತರು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ.

ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ತೊಗರಿ (59,5150) ಹೆಕ್ಟೇರ್, ಹೆಸರು (50,121) ಹೆಕ್ಟೇ‌ರ್, ಉದ್ದು (30,890 ಹೆಕ್ಟೇರ್), ಸೋಯಾಅವರೆ (23,440) ಹೆಕ್ಟೇರ್ ಹಾಗೂ ಹತ್ತಿ (98,550) ಹೆಕ್ಟೇರ್ ಮುಂಗಾರು ಬಿತ್ತನೆಯಾಗಿದೆ. ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆಯಿಂದಾಗಿ ಸಂತಸಗೊಂಡ ರೈತರು ಬಿತ್ತನೆ ಕಾರ್ಯ ಕೈಗೊಂಡು ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದರು. ಆದರೆ, ಆಗಸ್ಟ್‌ ಮೊದಲ ವಾರದಲ್ಲಿ ಸುರಿದ ಅಧಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ ಎಂದು ರೈತರು ಹೇಳುತ್ತಿದ್ದಾರೆ.

ಈ ಬಾರಿ ಹೆಸರು ಬೆಳೆ ಚನ್ನಾಗಿ ಮೊಳಕೆಯೊಡೆದು, ಕೆಲ ದಿನಗಳಲ್ಲಿ ಕಟಾವಿಗೆ ಬಂದಿತು. ಆದರೆ, ಬಿಟ್ಟು ಬಿಡದೆ ನಿರಂತರ ಸುರಿದ ಜಿಟಿ ಜಿಟಿ ಮಳೆಗೆ ಅಧಿಕ ತೇವಾಂಶದಿಂದ ಹೆಸರು ನೆಲಕಚ್ಚಿದೆ. ಇನ್ನು ಅಧಿಕ ಮಳೆಯಿಂದ ಜಿಲ್ಲೆಯ ಮುಲ್ಲಾಮಾರಿ ಏತ ನೀರಾವರಿ, ಚಂದ್ರಂಪಳ್ಳಿ ಡ್ಯಾಮ್, ಗಂಡೂರಿ ನಾಲಾ ಅಣೆಕಟ್ಟು, ಭೀಮಾ ನದಿ, ಆಲಮಟ್ಟಿ, ನಾರಾಯಣಪುರ ಡ್ಯಾಮ್, ಕೃಷ್ಣ ನದಿ, ಬೆಣ್ಣೆತೋರೆ ಡ್ಯಾಮ್‌ಗಳು ಮೈದುಂಬಿ ಹರಿಯುತ್ತಿದ್ದು, ನೀರಿನ ಹರಿವು ಹೆಚ್ಚಾದ ಪರಿಣಾಮ ಹರಿಬಿಡಲಾಗಿದೆ, ಇದರಿಂದ ತಗ್ಗು ಪ್ರದೇಶಗಳ ಜಮೀನುಗಳು ಜಲಾವೃತಗೊಂಡು ಬೆಳೆ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿವೃಷ್ಟಿಯಿಂದ ʼಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲʼ ಎಂಬಂತೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಚಿಂತೆಗೀಡಾಗಿದ್ದಾರೆ. ಜಮೀನುಗಳಲ್ಲಿ ನೀರು ನಿಂತಿದ್ದ ಪರಿಣಾಮ ಬೆಳೆ ಸಂಪೂರ್ಣ ನೆಲಕಚ್ಚಿದೆ. ಬೆಳೆ ಕಳೆದುಕೊಂಡ ರೈತರು ಪರಿಹಾರದ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.

WhatsApp Image 2025 08 23 at 9.19.46 AM

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ʼಅತಿವೃಷ್ಟಿಯಿಂದ ಹತ್ತಿ, ತೊಗರಿ, ಹೆಸರು, ಸೋಯಾಬಿನ್ ಹಾನಿಯಾಗಿದೆ. ಸಾಲ ಸೂಲ ಮಾಡಿ ಬೆಳೆದ ಬೆಳೆ ಕೈಗೆ ಬಾರದೆ ಹಾನಿಯಾಗಿದೆ. ಬೀಜ, ರಸಗೊಬ್ಬರ, ಯೂರಿಯಾ ಔಷಧಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿದ ಅನ್ನದಾತನಿಗೆ ಆರ್ಥಿಕ ನಷ್ಟ ಎದುರಾಗಿದೆ. ಅತಿವೃಷ್ಟಿ-ಅನಾವೃಷ್ಟಿಯಿಂದ ಬೆಳೆ ಕಳೆದುಕೊಂಡ ರೈತರು ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಬೆಳೆ ಹಾನಿ ಸಮೀಕ್ಷೆ ಮಾಡಿ ಪರಿಹಾರ ಕೊಡಬೇಕು. ಹಿಂದಿನ ವರ್ಷದ 315 ಕೋಟಿ ರೂ. ಬೆಳೆ ವಿಮೆ ಹಣ ಬಿಡುಗಡೆ ಮಾಡಿ ರೈತರ ಖಾತೆಗೆ ಜಮೆ ಮಾಡಬೇಕುʼ ಎಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಮಾತನಾಡಿ, ʼ ಜಿಲ್ಲೆಯಲ್ಲಿ ಈ ಭಾರಿ ಸುರಿದ ಅಧಿಕ ಮಳೆಯಿಂದ ಬೆಳೆ ಹಾನಿಯಾಗಿದೆ. ತೊಗರಿ ಕಣಜ ಎಂದೇ ಕರೆಯುವ ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ರೈತರು ತೊಗರಿ ಬಿತ್ತನೆ ಮಾಡಿದರು. ಆದರೆ, ಅತಿವೃಷ್ಟಿಯಿಂದ ಹಾನಿಗೊಳಗಾಗಿದೆ. ಕೂಡಲೇ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಸರ್ಕಾರ ಶೀಘ್ರದಲ್ಲಿ ಹೆಚ್ಚಿನ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕುʼ ಎಂದರು.

ʼಅಫಜಲಪುರ ತಾಲೂಕಿನಲ್ಲಿ ಹತ್ತಿ, ತೊಗರಿ, ಸೋಯಾಬಿನ್, ಕಬ್ಬು ಸೇರಿದಂತೆ ತೋಟಗಾರಿಕೆ ಬೆಳೆಗಳು ಭಾರಿ ಮಳೆಗೆ ಹಾನಿಗೀಡಾಗಿವೆ. ಮಹಾರಾಷ್ಟ್ರದ ದುದನಿ ನಾಲಾ ನೀರು, ಅಮರ್ಜಾ ಭೀಮಾ ನದಿಗಳಿಗೆ ನೀರು ಹರಿಬಿಟ್ಟಿರುವ ಕಾರಣ ತಾಲೂಕಿನಾದ್ಯಂತ ಶೇಕಡಾ 70ರಷ್ಟು ಬೆಳೆ ಹಾನಿಯಾಗಿದೆʼ ಕರ್ನಾಟಕ ಪ್ರಾಂತ ರೈತ ಸಂಘದ ಶ್ರೀಮಂತ ಬಿರಾದಾರ ಹೇಳುತ್ತಾರೆ.

ʼಭೀಮಾನದಿ ದಡ ಜಮೀನುಗಳಲ್ಲಿ ಬೆಳೆಯಲಾದ ಕಬ್ಬು, ಬಾಳೆ ನೀರಿನ ಹರಿವು ಹೆಚ್ಚಳದಿಂದ ಜಮೀನುಗಳು ಜಲಾವೃತಗೊಂಡು ಬೆಳೆ ಹಾನಿಯಾಗಿದೆ. ಹಾನಿಯಾದ ಕೃಷಿ ಬೆಳೆಗೆ ಪ್ರತಿ ಎಕರೆಗೆ 25 ಸಾವಿರ ಹಾಗೂ ತೋಟಗಾರಿಕೆ ಬೆಳೆಗೆ 40 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು. ಸಾಲ ವಸೂಲಾತಿ ನಿಲ್ಲಿಸಿ ರೈತರ ಸಾಲಾ ಮನ್ನಾ ಮಾಡಬೇಕುʼ ಎಂದು ಅವರು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಕಾರ್ಯಧ್ಯಕ್ಷ ಕರೆಪ್ಪ ಕರಗೊಂಡ ಆಳಂಡ ಅವರು ಮಾತನಾಡಿ, ʼಸತತ ಮಳೆಗೆ ತೇವಾಂಶ ಹೆಚ್ಚಾಗಿರುವುದೇ ಬೆಳೆ ಹಾನಿಗೆ ಕಾರಣ. ಪೋಷಕಾಂಶ ಕೊರತೆಯಿಂದ ಎಲೆಗಳು ಹಳದಿಯಾಗಿ, ಮಚ್ಚೆ ರೋಗ ಬರುತ್ತಿದೆ. ಮಳೆ ನಿಂತರೂ ರೋಗ ತಪ್ಪಿದ್ದಲ್ಲ. ರಾಜ್ಯ ಕೃಷಿ ಸಚಿವವರು ಇಲ್ಲಿಯವರೆಗೆ ಉತ್ತರ ಕರ್ನಾಟಕದ ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿ ರೈತರ ಸಮಸ್ಯೆ ಅಲಿಸಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆʼ ಎಂದು ತಿಳಿಸಿದರು.

ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ʼಈದಿನʼ ಜೊತೆಗೆ ಮಾತನಾಡಿ, ʼಮಳೆಯಿಂದ ಹಾನಿಯಾದ ಬೆಳೆ ವೀಕ್ಷಣೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಎಷ್ಟು ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂಬುದು ನಿಖರ ಮಾಹಿತಿ ಸಿಗುತ್ತುಲ್ಲ. ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆʼ ಎಂದರು.

ಇದನ್ನೂ ಓದಿ : ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ಕೃಷಿ ತಜ್ಞ ಡಾ.ರಾಜು ತೆಗ್ಗಳಿ ಮಾತನಾಡಿ, ʼಅಧಿಕ ಮಳೆಯಿಂದಾಗಿ ಬೆಳೆಗೆ ಮಚ್ಚಿ ಫೈಟಾಫ್ತೇರಾ ಎಲೆ ಮತ್ತು ಕಾಂಡ ಮಚ್ಚೆ ರೋಗ ಬರುವ ಸಾಧ್ಯತೆಗಳು ಇರುತ್ತವೆ. ಜಮೀನಿನಲ್ಲಿ ನಿಂತ ನೀರು ಬಸಿಗಾವಲು ಮಾಡುವುದರ ಮೂಲಕ ನೀರು ಹೊರಹಾಕಿದರೆ ಈ ರೋಗ ತಡೆಯಬಹುದು. ಯೂರಿಯಾ ಬಳಸಿದರೆ ಪೋಷಕಾಂಶ ಕಳೆದುಕೊಂಡ ಬೆಳೆ ಪುನಃ ಚೇತರಿಸಿಕೊಳ್ಳುತ್ತದೆ. ಒಂದು ಲೀಟರ್ ನೀರಿನಲ್ಲಿ‌ ಟ್ರೈ ಕೋಡರ್ಮ ಪ್ರತಿ ಎಕರೆಗೆ 5 ಗ್ರಾಂ ಬೆರೆಸಿ ಸಿಂಪಡಿಸುವುದರಿಂದ ನೆಟೆರೋಗ ತಡೆಗಟ್ಟಬಹುದುʼ ಎಂದು ಮಾಹಿತಿ ತಿಳಿಸಿದರು.

WhatsApp Image 2024 11 08 at 12.18.37 667ed234 e1731048718511
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...