ಕಲಬುರಗಿ | ಬಯಲಾಟ ಸಂಶೋಧನಾ ಕೇಂದ್ರ ಆರಂಭವಾಗಲಿ: ಪ್ರೊ. ಎಚ್ ಟಿ ಪೋತೆ

Date:

ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ, ಡಾ.ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರ, ಕನ್ನಡ ವಿಭಾಗ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡ, ಕಲ್ಯಾಣ ಕರ್ನಾಟಕ ಬಯಲಾಟ ಪರಂಪರೆ ಎರಡು ದಿನದ ವಿಚಾರ ಸಂಕಿರ್ಣ ಕಾರ್ಯಕ್ರಮವನ್ನು ಕಲಬುರಗಿ ಜಿಲ್ಲೆಯ ಗುಲ್ಬರ್ಗಾ ವಿಶ್ವವಿದ್ಯಾನಿಲಯ ಗಾಂಧಿ ಭವನದಲ್ಲಿ ನಡೆಯಿತು.

“ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯು ಗುಲ್ಬರ್ಗಾ ವಿ.ವಿಯಲ್ಲಿ ಕಲ್ಯಾಣ ಕರ್ನಾಟಕದ ಬಯಲಾಟ ಸಂಶೋಧನ ಕೇಂದ್ರ ಮತ್ತು ಬಯಲಾಟ ರಂಗ ಮಂದಿರವನ್ನು ನಿರ್ಮಾಣ ಮಾಡಬೇಕಿದೆ. ಕಲ್ಯಾಣ ಕರ್ನಾಟಕದ ಹೊಸ ಪೀಳಿಗೆಯ ರಾಜಕಾರಣಿಯ ಸಾಂಸ್ಕೃತಿಕ ರಾಜಕಾರಣ ಮಾಡಬೇಕಾಗುತ್ತದೆ. ಕಲ್ಯಾಣ ಕರ್ನಾಟಕದ ತರುಣ ವಿದ್ವಾಂಸರು ಇಲ್ಲಿನ ಸಮಸ್ಯೆಗಳ ಬಗ್ಗೆ ಧನಿ ಎತ್ತುತ್ತಿಲ್ಲ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಚ್ ಟಿ ಪೋತೆ ತಿಳಿಸಿದರು.

“ಗುಲ್ಬರ್ಗಾ ವಿ.ವಿಯಲ್ಲಿ ಕನ್ನಡ ಮತ್ತು ಜಾನಪದ ಎಂ.ಎ ಆರಂಭವಾಗಿ 44 ವರ್ಷಗಳಾದವು. ಪದವಿ ತರಗತಿಗಳಿಗೆ ಜಾನಪದ ವಿಶೇಷ ಪತ್ರಿಕೆಯನ್ನು ಅಳವಡಿಸಬೇಕು. ಪದವಿ ಓದುವ ಮಕ್ಕಳಿಗೆ ಜಾನಪದ ಬಯಲಾಟಗಳ ಬಗ್ಗೆ ಆಸಕ್ತಿ ಬೆಳೆಯುತ್ತದೆ. ಪ್ರತ್ಯೇಕ ಬಯಲಾಟ ಸಂಶೋಧನ ಕೇಂದ್ರ ಆದರೆ, ಬಯಲಾಟದ ಬಗ್ಗೆ ಹೊಸ ತಲೆಮಾರು ಅಧ್ಯಯನ ಮಾಡುವುದಕ್ಕೆ ನೆರವಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಗೀತಾ 2

“ಜನರ ಇತಿಹಾಸವನ್ನು ಮರು ಶೋಧಿಸಬೇಕಿದೆ. ಸಮಾಜದ ಎಲ್ಲರೂ ಘನತೆಯಿಂದ ಬದುಕುತ್ತಿದ್ದಾರೆಯೇ ಎಂದು ಹುಡುಕಿದರೆ ನಿರಾಸೆಯಾಗುತ್ತದೆ. ಜನಪದ ಕಲೆಗಳು ಬೆವರಿನಿಂದ ಹುಟ್ಟಿದ ಕಲೆಗಳು. ಅದರಲ್ಲೂ ಜನರ ಬದುಕನ್ನು ಹಸನು ಮಾಡಲು ಇದ್ದ ಕಲೆ ಯಾವುದು? ಎನ್ನುವುದನ್ನು ಮರುಶೋಧಿಸಬೇಕಿದೆ. ನಮ್ಮ ನಾಡು ಅವೈದಿಕ ಪರಂಪರೆಯ ನಾಡು, ಹಾಗಾಗಿ ನಮ್ಮ ಜನಪದ ಕಲೆಗಳಲ್ಲಿ ಅವೈದಿಕ ಪರಂಪರೆಯ ಬೇರುಗಳನ್ನು ಹುಡುಕಬೇಕಾಗಿದೆ. ನಮ್ಮ ಭಾಗದಲ್ಲಿ ಬುದ್ಧ ಬಸವ ಅಂಬೇಡ್ಕರ್ ಬಗ್ಗೆ ವ್ಯಾಪಕವಾಗಿ ಜನಪದ ಹಾಡುಗಳು ಹುಟ್ಟಿವೆ. ಕಲ್ಯಾಣ ಕರ್ನಾಟಕ ಅಂತ ಹೆಸರು ಬದಲಾಯಿತು. ಆದರೆ ಇಲ್ಲಿನ ಜನರ ಬದಲಾವಣೆಯಾಗಿಲ್ಲ” ಎಂದು ಚಿಂತಕಿ ಕೆ.ನೀಲಾ ತಿಳಿಸಿದರು.

ಇದನ್ನೂ ಓದಿದ್ದೀರಾ?ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ?

“ಬಯಲಾಟ ಅಕಾಡೆಮಿಯಿಂದ ಜಿಲ್ಲಾವಾರು ಬಯಲಾಟ ಕಲಾವಿದರನ್ನು ಶೋಧಿಸಲು, ಬಯಲಾಟಗಳ ಹಸ್ತಪ್ರತಿಗಳನ್ನು ಸಂಗ್ರಹಿಸಲು ಜಿಲ್ಲೆಗೆ ಒಬ್ಬರಂತೆ ಸಂಶೋಧಕ ಸಹಾಯಕರನ್ನು ಆಯ್ದುಕೊಳ್ಳಲಾಗಿದೆ. ಎಲ್ಲಾ ಜಿಲ್ಲೆಗಳ ಬಯಲಾಟಗಳ ಪುನರಾವಲೋಕನ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಪ್ರೊ. ಕೆ ಆರ್ ದುರ್ಗಾದಾಸ್ ಅವರ ಅಧ್ಯಕ್ಷತೆಯಲ್ಲಿ ಬಯಲಾಟ ಅಕಾಡೆಮಿಯು ಹಿಂದಿನ ಅವಧಿಗಳಿಗಿಂತ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ” ಎಂದು ಬಯಲಾಟ ಅಕಾಡೆಮಿಯ ಸದಸ್ಯರಾದ ಡಾ. ಅರುಣ್ ಜೋಳದಕೂಡ್ಲಿಗಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...