ಕಲಬುರಗಿ | ಅಂಬೇಡ್ಕರ್ ಆಶಯದಂತೆ ಗುಣಮಟ್ಟ ಶಿಕ್ಷಣ ಪಡೆಯೋಣ : ಸಚಿವ ಶರಣಪ್ರಕಾಶ ಪಾಟೀಲ್

Date:

ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಸಂವಿಧಾನ ಬರೆಯದಿದ್ದರೆ ನಮ್ಮ ಬದುಕು ಕಷ್ಟಕರವಾಗಿತ್ತು. ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗದೆ ಗುಣಮಟ್ಟ ಶಿಕ್ಷಣ ಪಡೆದು ಉತ್ತಮ ಬದುಕು ರೂಪಿಸಿಕೊಂಡರೆ ಮಾತ್ರ ಅಂಬೇಡ್ಕರ್ ಆಶಯ ಈಡೇರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

ಸೇಡಂ ಪಟ್ಟಣದಲ್ಲಿ ಶನಿವಾರ ಸಂಜೆ ಛಲವಾದಿ ಸಮಾಜ ಆಯೋಜಿಸಿದ್ದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಆಚರಣೆ ಪ್ರಯುಕ್ತ ಭೀಮಾ ಘರ್ಜನೆ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ʼದೇಶಾದ್ಯಂತ ಡಾ.ಅಂಬೇಡ್ಕರ್ ಅವರ ಜಯಂತಿ ಅತಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸ್ವಾಭಿಮಾನ ಬದುಕು ನೀಡಿದ ಮಹಾನ್ ನಾಯಕ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅನನ್ಯವಾಗಿದೆ. ನಮ್ಮ ಮಕ್ಕಳನ್ನು ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರವಹಿಸಿ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡಬೇಕುʼ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಮಾನತೆ ಸಮಾಜ ನಿರ್ಮಾಣಕ್ಕಾಗಿ ಎಲ್ಲರಿಗೂ ಸಂವಿಧಾನ ಮೂಲಕ ಸಮಾನ ಅವಕಾಶಗಳನ್ನು ನೀಡಿದ್ದಾರೆ. ಶೋಷಿತ ಸಮುದಾಯಕ್ಕೆ ಸ್ವಾಭಿಮಾನದಿಂದ ಬದುಕಲು ಬುನಾದಿ ಹಾಕಿಕೊಟ್ಟಿದ್ದಾರೆ. ಕಾರ್ಮಿಕರು ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡಬೇಕೆಂಬ ಕಾನೂನು ಬಾಬಾ ಸಾಹೇಬರು ನೀಡಿದ್ದಾರೆʼ ಎಂದು ತಿಳಿಸಿದರು.

ಉರಿಲಿಂಗ ಪೆದ್ದೀಶ್ವರ ಮಹಾ ಸಂಸ್ಥಾನದ ಜ್ಞಾನ ಪ್ರಕಾಶ ಸ್ವಾಮಿ, ಆಣದೂರ ಭಂತೆ ವರಜ್ಯೋತಿ ದಿವ್ಯ ಸಾನಿಧ್ಯ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಪುರಸಭೆ ಅಧ್ಯಕ್ಷ ವೀರೇಂದ್ರ ರುದ್ನೂರ, ಜಯಂತೋತ್ಸವ ಸಮಿತಿ ಅಧ್ಯಕ್ಷ ಶ್ರೀಶೈಲ್ ಶಿವಕುಮಾರ್ ತೋಟ್ನಳ್ಳಿ, ಜೈ ಭೀಮ್ ಉಡಗಿ, ಬಸವರಾಜ ಪಾಟೀಲ್ ಉಡಗಿ, ಮಹಾಂತಪ್ಪ ಸಂಗಾವಿ, ಸತೀಶ್ ಪುಜಾರಿ, ಹಾಬಳ ಟಿ. ರೇವಣಸಿದ್ದಪ್ಪ ಚೊಂಚ್, ಬಸವರಾಜ ಸಾಗರ, ಗೋಪಾಲ ಸೇಡಂಕರ್, ಮಾರುತಿ ಹುಳಗೋಳಕರ, ಸುನೀಲ್ ಕೋಳಿ, ಜಗನ್ನಾಥ ಚಿಂತ್ಪಳಿ, ರಾಜು ಕಾಳಗಿ, ವೇಂಕಟಯ್ಯ ಮುಸ್ತಾಜರ್, ಶಂಭುಲಿಂಗ ನಾಟ್ಟೇಕರ್, ರಾಮಯ್ಯ ಪುಜಾರಿ, ಹಾಜಿ ನಾಡೆಪಲ್ಲಿ, ರಾಜು ಚೌವ್ಹಾಣ್, ಪ್ರಶಾಂತ ಸೇಡಂಕರ್, ಸಿದ್ದು ಉಡಗಿ, ಅರುಣಕುಮಾರ ಮೂಡಬೂಳಕರ್, ಮಹಾವೀರ ಅಳೋಳಿ, ಶ್ರೀಕಾಂತ್ ಜಾಪನೂರ, ರಾಮಕೃಷ್ಣ ರೆಡಿ, ಮಾರುತಿ ಕೊಡಂಗಲಕರ್, ಶಿವಶರಣಪ್ಪ ಗದ್ದಗಿ ಉಪಸ್ಥಿತರಿದ್ದರು. ವಿಲಾಸ್ ಗೌತಮ್ ಸ್ವಾಗತಿಸಿದರು. ಲಕ್ಷ್ಮಿಣ ರಂಜೋಳಕರ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...