ಕಲಬುರಗಿ | ಕೆಸರುಗದ್ದೆಯಂತಾದ ರಸ್ತೆಗಳು; ರಸ್ತೆ ಮಧ್ಯೆ ನೇಗಿಲಿನಿಂದ ಉತ್ತು, ಸಸಿ ನೆಟ್ಟು ರೈತರ ಆಕ್ರೋಶ 

Date:

ಕೆಸರುಗದ್ದೆಯಂತಾದ ರಸ್ತೆ ಮಧ್ಯೆ ನೇಗಿಲಿನಿಂದ ಉತ್ತು, ಸಸಿ ನೆಡುವ ಮೂಲಕ ರೈತರು, ರೈತ ಪರ ಸಂಘಟನೆಗಳ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಕೆಸರುಗದ್ದೆಯಂತಾಗಿರುವ ಕಾರಣದಿಂದಾಗಿ ಭಂಕಲಗಾ ಗ್ರಾಮದ ರೈತಪರ ಸಂಘಟನೆಯ ಯುವಕರು ಮತ್ತು ರೈತರು ರಸ್ತೆಯ ಮಧ್ಯದಲ್ಲಿ ನೇಗಿಲಿನಿಂದ ಉತ್ತು ಬೀಜ ಬಿತ್ತನೆ ಮಾಡಿ, ರಸ್ತೆಯ ಮಧ್ಯದಲ್ಲಿ ಸಸಿ ನೆಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಭಂಕಲಗಾ ಗ್ರಾಮದ ಮುಖ್ಯರಸ್ತೆಯು ಕಳೆದ ಕೆಲ ತಿಂಗಳುಗಳಿಂದ ಸಂಪೂರ್ಣವಾಗಿ ಹಾಳಾಗಿತ್ತು. ಇತ್ತೀಚಿನ ದಿನಗಳಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಯು ಸಂಪೂರ್ಣವಾಗಿ ಕೆಸರುಗದ್ದೆಯಂತಾಗಿದೆ. ಈ ಕುರಿತಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ರಸ್ತೆ ದುರಸ್ತಿ ಕಾಮಗಾರಿ ಮಾಡಿಲ್ಲವೆಂಬುದು ಸ್ಥಳೀಯರ ಆರೋಪವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೆಸರುಗದ್ದೆಯಂತಾದ ರಸ್ತೆ
ಕೆಸರುಗದ್ದೆಯಂತಾದ ರಸ್ತೆಯಲ್ಲಿ ಸಸಿ ನಾಟಿ ಮಾಡುತ್ತಿರುವ ರೈತ ಯುವಜನರು

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕ ಅಧ್ಯಕ್ಷ ಮೌನೇಶ್ ಭಂಕಲಗಾ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕೆಸರುಗದ್ದೆಯಂತಿರುವ ರಸ್ತೆಯಲ್ಲಿ ಪ್ರತಿದಿನ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದಾರೆ. ಅಲ್ಲದೆ ಗ್ರಾಮದ ವೃದ್ಧರು ಈ ರಸ್ತೆಯಲ್ಲಿ ತಿರುಗಾಡಲು ಹರಸಾಹಸ ಪಡುತ್ತಿದ್ದಾರೆ. ಈ ಗ್ರಾಮದಿಂದ ಬಹುತೇಕ ಮಕ್ಕಳು ಶಾಲೆ-ಕಾಲೇಜಿಗೆ ಹೋಗುತ್ತಾರೆ. ಈ ವೇಳೆ ಅವರ  ಸಮವಸ್ತ್ರಗಳು ಸಂಪೂರ್ಣವಾಗಿ ಕೆಸರು ಮಯವಾಗುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಸ್ತೆಗಳು ಅವ್ಯವಸ್ಥೆಯಿಂದ ಕೂಡಿದ್ದರೂ ಅಭಿವೃದ್ಧಿ ಅಧಿಕಾರಿಗಳು ದುರಸ್ತಿ ಕಾರ್ಯ ಮಾಡದೇ ಇರುವುದು ಖಂಡನೀಯ. ಶೀಘ್ರದಲ್ಲಿಯೇ ರಸ್ತೆ ದುರಸ್ತಿ ಕಾಮಗಾರಿ ಮಾಡಿ ಸಾರ್ವಜನಿಕರಿಗೆ ತಿರುಗಾಡಲು ಅನುಕೂಲ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಕೆಸರುಗದ್ದೆಯಂತಾದ ರಸ್ತೆ
ಕೆಸರುಗದ್ದೆಯಂತಾದ ರಸ್ತೆಯಲ್ಲಿ ಸಸಿ ನಾಟಿ ಮಾಡುವ ಮೂಲಕ ರೈತ ಯುವಜನರ ಆಕ್ರೋಶ

ಗ್ರಾಮದ ಮುಖ್ಯ ರಸ್ತೆಯು ಸಂಪೂರ್ಣವಾಗಿ ಕೆಟ್ಟು ಹೋಗಿರುವುದು ದುರಸ್ತಿ ಕಾರ್ಯದ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಆದರೆ ಅಭಿವೃದ್ಧಿ ಅಧಿಕಾರಿ ಬಂದು ನೋಡುತ್ತೇನೆಂದು ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆಯೇ ಹೊರತು ಯಾವುದೇ ಕಾರ್ಯ ಮಾಡುತ್ತಿಲ್ಲ. ಇಂತಹ ಬೇಜವಾಬ್ದಾರಿ ಅಧಿಕಾರಿಗಳಿಂದ ಗ್ರಾಮಗಳಲ್ಲಿ ಅಭಿವೃದ್ಧಿ ಕಾಣದಂತಾಗಿದೆ. ಇಂತಹ ಅಧಿಕಾರಿಗಳ ವಿರುದ್ದ ಶಾಸಕ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಗಮನ ಹರಿಸಿ ಸೂಕ್ತ ಕ್ರಮ ಕೈಗೊಂಡು ಗ್ರಾಮದ ಅಭಿವೃದ್ಧಿ ಮಾಡಬೇಕು” ಎಂದು ಒತ್ತಾಯಿಸಿದರು.

ಆಕ್ರೋಶಗಗೊಂಡ ರೈತ ಪರ ಸಂಘಟನೆಯ ಪದಾಧಿಕಾರಿಗಳು ಮತ್ತು ಗ್ರಾಮದ ಯುವಕರು ಸೇರಿಕೊಂಡು ರಸ್ತೆಯ ಮದ್ಯದಲ್ಲಿ ನೇಗಿಲು ಹಿಡಿದು ಬೀಜ ಬಿತ್ತನೆ ಮಾಡಿ, ರಸ್ತೆಯಲ್ಲಿಯೇ ಸಸಿ ನೆಡುವ ಮೂಲಕ ಅಭಿವೃದ್ಧಿ ಅಧಿಕಾರಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪಂಪ್‌ಸೆಟ್ ಮುಳುಗುವ ಭೀತಿಯಲ್ಲಿ ರೈತರು; ಬ್ಯಾರೇಜ್ ಗೇಟ್ ತೆರೆಯಲು ರೈತರಿಂದ ದಿಢೀರ್ ಪ್ರತಿಭಟನೆ

ಪಿಡಿಒ ಬಸವರಾಜ ರಾಜೊಳ್ಳಾ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮದಲ್ಲಿ ಪ್ರತಿ ಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಜಲ ಜೀವನ್ ಮಿಷನ್ ಅಭಿಯಾನದಲ್ಲಿ ಕಾರ್ಯ ಮಾಡಲಾಗುತ್ತಿದೆ. ಈ ಕಾರ್ಯ ಮಾಡಲು ಜೆಜೆಎಂನವರು ಗ್ರಾಮ ಪಂಚಾಯಿತಿಗೆ ಯಾವುದೇ ಮಾಹಿತಿ ನೀಡದೆ ರಸ್ತೆ ಅಗೆದಿರುವುದರಿಂದ ರಸ್ತೆಯ ಮೇಲೆ ಮಣ್ಣು ನಿಂತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ರಸ್ತೆಯನ್ನು ಎರಡು ದಿನದಲ್ಲಿ ತಾತ್ಕಾಲಿಕ ದುರಸ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುತ್ತೇವೆ. ಜೆಜೆಎಂ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರ ಖಾಯಂ ದುರಸ್ತಿ ಕಾರ್ಯ ಮಾಡಲಾಗುವುದು” ಎಂದು ಭರವಸೆ ನೀಡಿದರು.

ವರದಿ: ವಾಲೆಂಟಿಯರ್- ಅನಂತ ದೇಶಪಾಂಡೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...