ಕಲಬುರಗಿ | ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿ ನಳಿನ್‌ ಅತುಲ್‌ ಅಧಿಕಾರ ಸ್ವೀಕಾರ

Date:

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಕಾರ್ಯದರ್ಶಿಯಾಗಿ 2014ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ನಳಿನ್‌ ಅತುಲ್‌ ಗುರುವಾರ ಅಧಿಕಾರ ಸ್ವೀಕರಿಸಿದರು.

ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಎಂ.ಸುಂದರೇಶ ಬಾಬು ಅವರನ್ನು ಕೇಂದ್ರ ಸರ್ಕಾರದ ಸೇವೆಗೆ ನಿಯೋಜನೆ ಮಾಡಿದ್ದರಿಂದ ತೆರವಾದ ಸ್ಥಾನಕ್ಕೆ ನಲಿನ್ ಅತುಲ್ ಅವರನ್ನು ಸರ್ಕಾರ ಇತ್ತೀಚೆಗೆ ವರ್ಗಾಯಿಸಿತ್ತು.

ಮೂಲತಃ ಬಿಹಾರ್‌ ರಾಜ್ಯದವರಾದ ನಳಿನ್ ಅತುಲ್ ಬಿ.ಟೆಕ್ ಪದವೀಧರರು. ರಾಯಚೂರು ಜಿ.ಪಂ. ಸಿಇಒ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಖ್ಯಸ್ಥ, ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಕೆಲಸ ಮಾಡಿದ್ದಾರೆ. ಈ ಹಿಂದೆ ಕಲಬುರಗಿಯಲ್ಲಿ 2019ರ ಅ.22ರಿಂದ 2022ರ ಜ.27ರವರೆಗೆ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಮತ್ತು ಸರ್ವ ಸದಸ್ಯರ ಸಲಹೆ ಹಾಗೂ ಪ್ರದೇಶದ ಏಳು ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒಗಳ ಅಭಿಪ್ರಾಯ ಪಡೆದು ರಾಜ್ಯ ಸರ್ಕಾರ ಮಂಡಳಿಗೆ ಒದಗಿಸಿರುವ ಅನುದಾನವನ್ನು ಪ್ರದೇಶದ ಒಳಿತಿಗೆ ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆʼ ಎಂದು ನಳಿನ್ ಅತುಲ್ ತಿಳಿಸಿದ್ದಾರೆ.

ಇದನ್ನೂ ಓದಿ : ಕಲಬುರಗಿ | ಕರ್ತವ್ಯ ಲೋಪ ಆರೋಪ : ಪ್ರಭಾರ ಮುಖ್ಯಶಿಕ್ಷಕ ಅಮಾನತು

ಈ ಸಂದರ್ಭದಲ್ಲಿ ಮಂಡಳಿ ಉಪ ಕಾರ್ಯದರ್ಶಿ ಮಂಜುನಾಥ ಸ್ವಾಮಿ ಜಿ.ಎನ್., ಹೆಚ್ಚುವರಿ ನಿರ್ದೇಶಕಿ ಪ್ರವೀಣಪ್ರಿಯಾ ಡೇವಿಡ್, ಅಧೀಕ್ಷಕ ಎಂಜಿನಿಯರ್‌ ವಿಜಯಕುಮಾರ ಪಾಟೀಲ, ಅಕ್ಕನಾಗಮ್ಮ, ಪ್ರಕಾಶ ಕುದರಿ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...