ಕಲಬುರಗಿ | ಹೆಗ್ಗಿನಾಳ ಗ್ರಾಮಕ್ಕಿಲ್ಲ ರಸ್ತೆ ಭಾಗ್ಯ; ಸಮಸ್ಯೆ ಒಂದು – ಪರಿಣಾಮ ಹಲವು

Date:

ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಹೆಸರು ಬದಲಿಸಿದರೂ, ಇಲ್ಲಿನ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಇಂದಿಗೂ ನಾನಾ ಸಮಸ್ಯೆಗಳು ಇಲ್ಲಿನ ಜನರನ್ನು ಬಾಧಿಸುತ್ತಲೇ ಇವೆ. ಬಿಸಿಲು, ಬರ, ಅತಿವೃಷ್ಟಿ, ಅನಾವೃಷ್ಟಿ, ಕುಡಿಯುವ ನೀರು, ಆರೋಗ್ಯ ಸೇರಿದಂತೆ ನಾನಾ ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದಾರೆ. ಇದೆಲ್ಲದರ ನಡುವೆ, ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕವೂ ಇಲ್ಲದೇ ಇರುವುದು ಮತ್ತಷ್ಟು ಸಂಕಷ್ಟವನ್ನು ತಂದೊಡ್ಡುತ್ತಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸಮೀಪದಲ್ಲೇ ಇರುವ ಹೆಗ್ಗಿನಾಳ ಗ್ರಾಮಕ್ಕೆ ರಸ್ತೆ ಸಂಪರ್ಕವೇ ಇಲ್ಲ. ಹೀಗಾಗಿ, ಕಳೆದ 20 ವರ್ಷಗಳಿಂದ ಗ್ರಾಮದತ್ತ ಸಾರಿಗೆ ಬಸ್‌ ಸುಳಿದಿಲ್ಲ. ಸಾರಿಗೆ ವ್ಯವಸ್ಥೆ ಇಲ್ಲದೆ, ತಮ್ಮೂರಿನಿಂದ ಎಲ್ಲಿಗೆ ಹೋಗಬೇಕೆಂದರೂ ಏಳೆಂಟು ಕಿ.ಮೀ ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿ ಈ ಗ್ರಾಮದ ಜನರದ್ದು. ರಸ್ತೆ, ಬಸ್‌ ವ್ಯವಸ್ಥೆಯಿಲ್ಲದೆ ವೃದ್ಧರು, ವಿದ್ಯಾರ್ಥಿಗಳು, ರೋಗಿಗಳು, ಗರ್ಭಿಣಿಯರು ದಿನನಿತ್ಯ ಪರದಾಡುವಂತಾಗಿದೆ.

ಸುಮಾರು 20 ವರ್ಷಗಳ ಹಿಂದೆ ಇಲ್ಲಿನ ರಸ್ತೆ ಹಾಳಾಗಿತ್ತು. ಅಂದಿನಿಂದ ಇಲ್ಲಿಯವರೆಗೂ ಆ ರಸ್ತೆಯಲ್ಲಿ ದುರಸ್ತಿ ಮಾಡಿಸುವ ಕೆಲಸವಾಗಿಲ್ಲ. ಮಳೆಗಾಲದಲ್ಲಿ ರಸ್ತೆ ಕೆಸರು ಗದ್ದೆಯಂತಾಗುತ್ತದೆ. ಗಾಡಿ, ಆಟೋ ಹೋಗುವುದು ತುಂಬಾ ಕಷ್ಟ. ರಸ್ತೆಯ ಮಧ್ಯ ದೊಡ್ಡ ದೊಡ್ಡ ತಗ್ಗು ಗುಂಡಿಗಳಿವೆ. ಗರ್ಭಿಣಿಯರು ಹೆರಿಗೆಗಾಗಿ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆ ತೆರಳುವಾಗ ಎಷ್ಟೋ ಬಾರಿ ರಸ್ತೆ ಮಧ್ಯದಲ್ಲಿಯೇ ಹೆರಿಗೆಯಾಗಿರುವ ಉದಾಹರಣೆಗಳೂ ಇವೆ. ಅಲ್ಲದೆ ವಯಸ್ಸಾದ ವೃದ್ಧರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದರೆ ಬೆನ್ನ ಮೇಲೆ ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ ಬಹುಸಂಖ್ಯಾತ ಜನರು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಹಲವರ ಬಳಿ ಸ್ವಂತ ವಾಹನಗಳಿಲ್ಲ. ಅನುಕೂಲಸ್ಥರು ತಮ್ಮ ಸ್ವಂತ ವಾಹನಗಳಲ್ಲಿ ಓಡಾಡುತ್ತಾರೆ. ಆದರೆ, ನಮ್ಮಂಥ ಬಡವರು ಹೇಗೆ ಬದುಕುವುದು. ನಡೆದುಕೊಂಡೇ ಓಡಾಡುತ್ತಿದ್ದೇವೆ. ಜೀವನವೇ ದುಸ್ತರವಾಗಿದೆ. ಗ್ರಾಮಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಿದರೆ, ಬಿಸಿಲಿನಲ್ಲಿ ನಡೆಯುವುದಾದರೂ ತಪ್ಪುತ್ತದೆ ಎನ್ನುತ್ತಾರೆ ಗ್ರಾಮದ ಕೂಲಿ ಕಾರ್ಮಿಕರು.

WhatsApp Image 2023 09 12 at 7.23.01 PM

ಹೆಗ್ಗಿನಾಳ ಗ್ರಾಮದ ಶಾಲೆಯಲ್ಲಿ 7ನೇ ತರಗತಿವರೆಗೆ ಮಾತ್ರವೇ ಕಲಿಸಲಾಗುತ್ತದೆ. ಪ್ರೌಢಶಾಲೆಗಾಗಿ ಜೇವರ್ಗಿಗೆ ಹೋಗಬೇಕು. ಅಲ್ಲಿನ ಶಾಲೆಗೆ ಹೋಗಲು ಪ್ರತಿದಿನ 6 ಕಿ.ಮೀ. ನಡೆದುಕೊಂಡು ಹೋಗಿ, 6 ಕಿ.ಮೀ ನಡೆದುಕೊಂಡೇ ಬರಬೇಕು. ದಿನಕ್ಕೆ 12 ಕಿ.ಮೀ ನಡೆಯುವ ವಿದ್ಯಾರ್ಥಿಗಳು ದಣಿದುಹೋಗುತ್ತಾರೆ. ಅವರ ಸಮಯವೆಲ್ಲ ಶಾಲೆಗೆ ಹೋಗಿ ಬರುವುದರಲ್ಲೇ ಕಳೆದುಹೋಗುತ್ತಿದೆ. ಪುಸ್ತಕದ ಚೀಲ ಹೊತ್ತು ನಡೆದು ಬಂದು, ಕೈ-ಕಾಲು ನೋವಿನಿಂದ ಸಂಜೆ ಓದಿಕೊಳ್ಳಲೂ ಆಗದೇ, ವಿದ್ಯಾಭ್ಯಾಸದಲ್ಲಿ ಹಿಂದುಳಿಯುತ್ತಿದ್ದಾರೆ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಉಡುಪಿ | ಪರಶುರಾಮ ಥೀಮ್ ಪಾರ್ಕ್: ಪರಶುರಾಮನ ಕಂಚಿನ ಪ್ರತಿಮೆ ಅಸಲಿಯೋ? ನಕಲಿಯೋ?

ಜಮೀನುಗಳ ನಡುವೆ ಕಾಲುಹಾದಿ ಇದ್ದು, ಬೆಳೆ ಬೆಳದಾದ ಆ ಹಾದಿಯೂ ಮುಚ್ಚಿಹೋಗುತ್ತದೆ. ಅಲ್ಲದೆ, ಹಾವು-ಚೇಳುಗಳಿದ್ದರೂ ಗೊತ್ತಾಗುವುದಿಲ್ಲ. ಅದರಲ್ಲೂ ಹೆಣ್ಣು ಮಕ್ಕಳಿಗೆ ಮತ್ತೇನಾದರೂ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಹಲವರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳಿಸುವುದನ್ನೇ ನಿಲ್ಲಿಸಿದ್ದಾರೆ. ಓದಬೇಕೆಂಬ ಹಂಬಲವಿದ್ದರೂ, ರಸ್ತೆ, ಬಸ್‌ ವ್ಯವಸ್ಥೆ ಇಲ್ಲದ ಕಾರಣಕ್ಕೆ ಹಲವು ಹೆಣ್ಣು ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ.

ಶಾಸಕ ಡಾ. ಅಜಯ್ ಸಿಂಗ್ ಅವರು ಜೇವರ್ಗಿ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. ಆದರೂ, ಗ್ರಾಮದತ್ತ ಅವರು ಸುಳಿವಿಲ್ಲ. ಚುನಾವಣೆ ಸಮಯದಲ್ಲಿ ರಸ್ತೆ ಮಾಡಿಸುವುದಾಗಿ ಆಶ್ವಾಸನೆ ನೀಡುತ್ತಾರೆ. ಚುನಾವಣೆ ಮುಗಿದ ಮೇಲೆ ಮತ್ತೊಂದು ಚುನಾವಣೆ ಬರುವವರೆಗೂ ಅವರು ಗ್ರಾಮದತ್ತ ತಲೆ ಹಾಕುವುದಿಲ್ಲ. ಶಾಸಕರು, ಗ್ರಾಮದ ಪ್ರತಿನಿಧಿಗಳು, ಅಧಿಕಾರಿಗಳು ಬೇಜವಾಬ್ದಾರಿತನದಿಂದ ಕಾಣು, ಕಿವಿ ಮುಚ್ಚಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ರಸ್ತೆ ಸಮಸ್ಯೆ ಕುರಿತು ಅಜಯ್ ಸಿಂಗ್‌ ಅವರನ್ನು ಮಾತನಾಡಿಸಲು ಈದಿನ.ಕಾಮ್ ಪ್ರಯತ್ನಿಸಿತು. ಆದರೆ, ಅವರು ಕರೆ ಸ್ವೀಕರಿಸಲಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...