ಕಲಬುರಗಿ | ಮೀತಿ ಮೀರಿದ ಧೂಳಿನಿಂದ ಬದುಕು ಅಸಹನೀಯ

Date:

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣ ಸಿಮೆಂಟ್‌ಗೆ ಹೆಸರುವಾಸಿ. ಅತೀ ಹೆಚ್ಚು ಧೂಳಿನ ಪಟ್ಟಣ ಸಹ ಹೌದು. ಈ ಧೂಳಿನಿಂ ಜನರ ಬದುಕು ಅಸ್ಥಿರವಾಗಿದೆ. ಆದರೆ, ಧೂಳನ್ನು ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಪಟ್ಟಣದಲ್ಲಿ ಧೂಳಿನಿಂದ ಸಾರ್ವಜನಿಕರು ಅಕ್ಷರಶಃ ನಲುಗಿ ಹೋಗಿದ್ದಾರೆ. ಇಲ್ಲಿ ಬದುಕು ಅಸಹನೀಯವೆನ್ನಿಸುವಷ್ಟು ಮಟ್ಟಿಗೆ ಪಟ್ಟಣದಲ್ಲಿ ದೂಳು ಹರಡುತ್ತಿದ್ದು, ಗಂಭೀರ ಕಾಯಿಲೆಗಳ ಸಾಧ್ಯತೆ ಹೆಚ್ಚಾಗಿದೆ ಎಂದು ನಾಗರಿಕರು ದೂಳು ಹರಡುತ್ತಿರುವ ಕಾರ್ಖಾನೆ ಹಾಗೂ ಹದಗೆಟ್ಟ ರಸ್ತೆಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸ್ಥಳೀಯ ಸಿಮೆಂಟ್ ಕಾರ್ಖಾನೆಯಿಂದ ವಿಪರೀತ ದೂಳು ಹೊರಬರುತ್ತದೆ. ದೂಳಿನೊಂದಿಗೆ ಹೊರಬರುವ ವಿಷಕಾರಿ ಕಣಗಳು ಜನರಶ್ವಾಸಕೋಶ ಸೇರಿ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಕಾರ್ಖಾನೆ ನಿರ್ಮಿಸಿದ ರಸ್ತೆಯನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ ಈ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ವಾಹನಗಳು ಓಡಾಡುವಾಗ ಮುಗಿಲೆತ್ತರ ಧೂಳು ಏಳುತ್ತದೆ. ಪಕ್ಕದಲ್ಲಿನ ವಾಹನಗಳು ಕಾಣದಿರುವಷ್ಟು ದೂಳು ಹರಡುತ್ತಿದ್ದು ಇದರಿಂದ ವಾಹನ ಸವಾರರು ಮತ್ತು ಸ್ಥಳೀಯರು ಕಂಗಲಾಗಿದ್ದು ಪ್ರತೀ ದಿನ ಪುರಸಭೆ ಮತ್ತು ಕಾರ್ಖಾನೆಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾವೂರಿನಿಂದ ಪಟ್ಟಣ ಸಂಪರ್ಕಿಸುವ ರಸ್ತೆ ಹಾಗೂ ಪಟ್ಟಣದ ಶ್ರೀನಿವಾಸ ಗುಡಿ ಚೌಕ್ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು,ರಸ್ತೆಗೆ ಹೊಂದಿಕೊಂಡು ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿದ್ದು ಇಲ್ಲಿರುವ ಕುಟುಂಬಗಳು ಹೆಚ್ಚಿನ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿವೆ. ಪೊಲೀಸರು ವಸತಿ ಗೃಹಗಳಲ್ಲಿ ವಾಸಮಾಡಲಾಗದೇ ಕೆಲವರು ಬೇರೆಕಡೆ ಮನೆ ಮಾಡಿಕೊಂಡಿದ್ದಾರೆ ಎನ್ನುತ್ತಾರೆ ಸ್ಥಳೀಯರು.

ಹದಗೆಟ್ಟ ರಸ್ತೆಯನ್ನು ಮತ್ತೇ ನಿರ್ಮಾಣ ಮಾಡುವ, ಪ್ರತಿನಿತ್ಯ ರಸ್ತೆ ಮೇಲೆ ನೀರು ಸಿಂಪಡಿಸಬೇಕೆನ್ನುವ ಕನಿಷ್ಠ ಕಾಳಜಿಯನ್ನು ಎಸಿಸಿ ಕಾರ್ಖಾನೆ ಹಾಗೂ ಸ್ಥಳೀಯ ಪುರಸಭೆ ತೋರುತ್ತಿಲ್ಲ. ನಮಗೆ ಬದುಕೇ ನರಕ ಎನ್ನುವಂತಾಗಿದೆ  ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ದೂಳು ನಿಯಂತ್ರಣಕ್ಕೆ ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...