ಕಲಬುರಗಿ | ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದ ಬಳಿಕ ಪಿಂಚಣಿ ಸ್ಥಗಿತ; ಕಾರ್ಮಿಕರಿಂದ ಪ್ರತಿಭಟನೆ

Date:

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದ ಬಳಿಕ ಪಿಂಚಣಿಯೂ ನಿಂತು ಹೋಗಿದೆ ಎಂದು ಆರೋಪಿಸಿ ಎಐಟಿಯುಸಿ ನೇತೃತ್ವದ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಕಾರ್ಯಕರ್ತರು ಕಲಬುರಗಿಯ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದ ನಂತರ ಕಾರ್ಮಿಕರ ಕ್ಲೇಮು ಮತ್ತು ರಿನೀವಲ್, ಹೊಸ ಅರ್ಜಿಗಳನ್ನು ಸುಲಭವಾಗಿ ತೆಗೆದುಕೊಳ್ಳುತ್ತಿಲ್ಲ. ಕಟ್ಟಡ ಕಾರ್ಮಿಕರಿಗೆ 60 ವರ್ಷವಾದ ನಂತರ ಯಾವಾಗಲಾದರೂ ಪಿಂಚಣಿ ಅರ್ಜಿ ಹಾಕಲು ಅವಕಾಶ ನೀಡಬೇಕು. ಈಗ ಇರುವ ಕಾಲಮಿತಿಯನ್ನು ಕೈಬಿಡಬೇಕು. ಸರಳವಾಗಿ ಅರ್ಜಿಯನ್ನು ತಂತ್ರಾಂಶದಲ್ಲಿ ತೆಗೆದುಕೊಳ್ಳುವ ವ್ಯವಸ್ಥೆ ಜಾರಿ ಮಾಡಬೇಕು. ಕಾರ್ಮಿಕರ ಮಕ್ಕಳ ಹಿಂದಿನ ಸ್ಕಾಲರ್‌ಶಿಪ್ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಖಾಸಗಿ ಆಸ್ಪತ್ರೆಯಿಂದ ನಡೆಸುತ್ತಿರುವ ಆರೋಗ್ಯ ತಪಾಸಣಾ ಶಿಬಿರವನ್ನು ನಿಲ್ಲಿಸಿ ಕಾರ್ಮಿಕರಿಗೆ ನೆರವಾಗುವಂತಹ ಇಎಸ್‌ಐ ಜಾರಿ ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು.

ಹೊಸ ತಂತ್ರಾಂಶದಲ್ಲಿ ಅರ್ಜಿ ಹಾಕುವ ಸಮಯದಲ್ಲಿ ಕೇಳುತ್ತಿರುವ ಕಟ್ಟಡ ಕಾರ್ಮಿಕರು ಒದಗಿಸಲಾಗದ, ದಾಖಲಾತಿಗಳನ್ನು ಕೈಬಿಟ್ಟು ಕಾರ್ಮಿಕರ ಬಳಿ ಇರುವ ದಾಖಲಾತಿಗಳನ್ನು ತೆಗೆದುಕೊಂಡು ಅರ್ಜಿಗೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದರಿಂದ ಎರಡು ವರ್ಷಗಳ ಹಿಂದಿನಿಂದ ಕ್ಲೇಮು ಅರ್ಜಿಗಳು ಅನುಮೋದನೆಯಾಗಿದ್ದರೂ ಈವರೆಗೆ ಕಾರ್ಮಿಕರಿಗೆ ಹಣ ಪಾವತಿಯಾಗಿಲ್ಲ. ದಾಖಲೆಗಳ ಕೊರತೆಯ ನೆಪವೊಡ್ಡಿ ಎರಡು ವರ್ಷಗಳಿಂದ ತಡೆ ಹಿಡಿದಿದ್ದಾರೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುದೇವ ಯಳಸಂಗಿ, ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಪತಕಿ, ಶಿವಲಿಂಗಮ್ಮ ಲೆಂಗಟಿಕರ್, ಜಿಲ್ಲಾ ಸಹ ಕಾರ್ಯದರ್ಶಿ ಕಲ್ಯಾಣಿ ತುಕ್ಕಾಣಿ, ಶರಣಮ್ಮ ಪೂಜಾರಿ, ಮಾನಪ್ಪ ಕಟ್ಟಿಮನಿ ಹಾಗೂ ಕಟ್ಟಡ ಕಾರ್ಮಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...