ಕಲಬುರಗಿ | ಪ್ರಥಮ ತ್ರಿಪಿಟಕ ಪಠಣ ಮಹೋತ್ಸವ

Date:

ದಮ್ಮ ಸಜ್ಜಾಯನ ಹಾಗೂ ಪ್ರಥಮ ತ್ರಿಪಿಟಕ ಪಠಣ ಮಹೋತ್ಸವವನ್ನು ರಾಯಚೂರು ಜಿಲ್ಲೆ ಚಿತ್ತಾಪುರ ತಾಲೂಕಿನ ಐತಿಹಾಸಿಕ ಸನ್ನತಿ (ಕನಗನಹಳ್ಳಿ) ಗ್ರಾಮದ ಬೌದ್ಧ ಮಹಾಸ್ಥೂಪದ ಆವರಣದಲ್ಲಿ ನಡೆಸಲಾಯಿತು.

ಬೆಂಗಳೂರು ಮಹಾಬೋಧಿ ಸೊಸೈಟಿ ಪ್ರಧಾನ ಕಾರ್ಯದರ್ಶಿ ಭಂತೆ ಆನಂದ ಥೇರಾ ಮಾತನಾಡಿ, “ತ್ರಿಪಿಟಕ ಎಂದರೆ ಮೂರು ಬುಟ್ಟಿಗಳು. ವಿನಯ ಪೀಠಕ, ಸುತ್ತ ಪೀಠಕ ಹಾಗೂ ಅಭಿದಮ್ಮ ಪೀಠಕ ಎಂಬ ಈ ಮೂರು ಪುಸ್ತಕಗಳು ಬೌದ್ಧ ಧರ್ಮೀಯರ ಪವಿತ್ರ ಗ್ರಂಥಗಳಾಗಿವೆ. ಭಂತೆ ಇತಿಕಾ ಮಹಾಥೇರಾ ಬೆಂಗಳೂರು ಮಹಾಬೋಧಿ ಸೊಸೈಟಿ ಅಧ್ಯಕ್ಷರಾದ ಭಂತೆ ಕಶ್ಯಪ ಮಹಾಥೇರಾ ಧಮ್ಮ ಸಂದೇಶ” ನೀಡಿದರು.

ಕಾರ್ಯಕ್ರಮಕ್ಕೆ ಉಪನ್ಯಾಸಕರಾಗಿ ಆಗಮಿಸಿದ ಹರ್ಷಕುಮಾರ ಕುಗ್ವೆ ಮಾತನಾಡಿ, “ಸಾಮ್ರಾಟ ಅಶೋಕನ ಬಂಡೆ ಶಾಸನಗಳು ದೇಶಾದ್ಯಂತ ಹಲವೆಡೆ ದೊರಕಿವೆ. ಆದರೆ, ಸನ್ನತಿ ಗ್ರಾಮವೊಂದರಲ್ಲೇ 200ಕ್ಕೂ ಹೆಚ್ಚು ಶಾಸನಗಳು ಸಿಕ್ಕಿವೆ. ಮೊಟ್ಟ ಮೊದಲು ಶಾಸನಗಳು ಸಿಕ್ಕಿದ್ದು ಕನಗನಹಳ್ಳಿಯಲ್ಲಿ ಎನ್ನುವುದ ಎಷ್ಟು ಸತ್ಯವೋ, ಶಾತವಾಹನರು ಕರ್ನಾಟಕ ಮೂಲದ ಅರಸರು ಎನ್ನುವುದು ಅಷ್ಟೇ ಸತ್ಯ. ಕನ್ನಡಿಗರ ಮತ್ತು ಕರುನಾಡಿನ ಮೊಟ್ಟ ಮೊದಲ ಧರ್ಮ ಅದು ಬೌದ್ಧ ಧಮ್ಮ. ಶಾತವಾಹನರ ಇತಿಹಾಸ ಬರೆಯುವಾಗ ಇತಿಹಾಸಕಾರರು ಉದ್ದೇಶಪೂರ್ವಕವಾಗಿ ಬೌದ್ಧ ಧರ್ಮ ಮರೆಮಾಚಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕದ ಐ.ಟಿ.ಸಿ.ಸಿ. ಸಂಸ್ಥಾಪಕಿ ವಾಗ್ಮೋ ದೀಕ್ಷಿ ಅವರು ಸಾಮ್ರಾಟ ಅಶೋಕ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಭಂತೆ ಧಮ್ಮಾನಂದ ಮಹಾಥೇರಾ, ಭಂತೆ ಮನೋರಕ್ಖಿತ ಥೇರಾ, ಭಂತೆ ಜ್ಞಾನ ಸಾಗರ, ಭಂತೆ ವರಜ್ಯೋತಿ, ಭಂತೆ ಧಮ್ಮಸಿರಿ, ಭಂತೆ ಖಂತಿಸಾರೋ, ಭಂತೆ ಲಂಕಾನಂದ ಸೇರಿದಂತೆ 200ಕ್ಕೂ ಅಧಿಕ ಭಂತೆಜಿಗಳು ಸಾನಿಧ್ಯ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಪಿಯು ವಿದ್ಯಾರ್ಥಿಗಳ ತಾಲೂಕು ರಸಪ್ರಶ್ನೆ ಸ್ಪರ್ಧೆ ಸಾಧನೆಗೆ ಸತತ ಅಧ್ಯಯನ ಅಗತ್ಯ: ಡಾ. ಅಜೀಜ್

ಕಾರ್ಯಕ್ರಮದಲ್ಲಿ ಟೋಪಣ್ಣ ಕೋಮಟೆ, ವಿಠ್ಠಲ ದೊಡ್ಡಮನಿ, ರವಿಕಿರಣ ಒಂಟಿ, ಮರಿಯಪ್ಪ ಹಳ್ಳಿ, ಅರ್ಜುನ್ ಭದ್ರೆ, ದೇವಿಂದ್ರ ಹೆಗಡೆ, ಸೂರ್ಯಕಾಂತ ನಿಂಬಾಳಕರ, ಸುರೇಶ ಮೆಂಗನ, ಬಸವರಾಜ ಬೆಣ್ಣೂರ, ಎಸ್.ಆರ್.ಕೊಲ್ಲೂರ, ನೀಲಕಂಠ ಬಡಿಗೇರ, ದೇವಿಂದ್ರ ಹೆಗಡೆ, ಮಲ್ಲಿಕಾರ್ಜುನ ಪೂಜಾರಿ, ಸೂರ್ಯಕಾಂತ ರದ್ದೇವಾಡಿ, ಲಕ್ಷ್ಮೀಕಾಂತ ಹುಬ್ಳಿ, ಮೋನಪ್ಪ ನಡಗೇರಿ, ಬಾಬು ಬಂದಳ್ಳಿ ಶಿವಯೋಗಿ ದೇವಿದ್ರಕರ, ಶ್ರೀಮಂತ ಭಾವಿಮನಿ, ಸಂದೀಪ ಕಟ್ಟಿ ಶರಣಬಸು ಸಿರೂರಕರ, ಮರೆಪ್ಪ ಚಟ್ಟೇರಕರ್, ವಿಶ್ವನಾಥ ನಾಟ್ಟೇಕರ್, ಬಸವರಾಜ ಚಿಪ್ಪರ್, ನಿಂಗಪ್ಪ ದೋರನಹಳ್ಳಿ, ಶಿವಕುಮಾರ ಪೋತೆ, ಶೇಖರ್ ಬಡಿಗೇರ್, ಮರೆಪ್ಪ ಜಾಲಿಮಂಚಿ, ಬಸವರಾಜ್ ಗುಡಿಮನಿ, ನಿಂಗಣ್ಣ ನಾಟ್ಟೇಕರ್, ದಿನೇಶ ದೊಡ್ಡಮನಿ, ಸಂತೋಷ ಮೆಲ್ಮನಿ, ಮಿಲಿಂದ್ ಸಾಗರ್, ಭೂತಾಳಿ ನಡಗಟ್ಟಿ, ಪರಶುರಾಮ ನಡಗಟ್ಟಿ, ಶಿವು ಹೆಗ್ಡೆ, ಚಂದಪ್ಪ ಕಟ್ಟಿಮನಿ, ಬಸಲಿಂಗಪ್ಪ, ರಾಹುಲ್ ಹುಲಿಮನಿ, ರವೀಂದ್ರನಾಥ್ ಹೊಸಮನಿ, ರಾಯಪ್ಪ, ವಿದ್ಯಾಧರ್ ಮಾಳಗೆ, ಪುಟ್ಟಮನಿ ದೇವಿದಾಸ್, ವಿಠಲ್ ದೊಡ್ಡಮನಿ, ಮಹಾತಪ್ಪ ಸಂಗಾವಿ
ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...