ಕಲಬುರಗಿ | ಪ್ರೊ. ಮೊಗಳ್ಳಿ ಗಣೇಶ ನುಡಿನಮನ ಕಾರ್ಯಕ್ರಮ

Date:

ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರೊ. ಮೊಗಳ್ಳಿ ಗಣೇಶ ನುಡಿನಮನ ಕಾರ್ಯಕ್ರಮವನ್ನು ಗುರುವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಸಾಭ ಭವನದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರೊ. ಅರಣುಕುಮಾರ್ ಜೋಳದಕೂಡ್ಲಿಗಿ ಮಾತನಾಡಿ, ‘ಪ್ರೊ. ಮೊಗಳ್ಳಿ ಗಣೇಶ ಅವರು ವೈರುಧ್ಯಪೂರ್ಣ ವ್ಯಕ್ತಿತ್ವದ ಜೊತೆಗೆ ಜೀವಂತ ಚಿಂತನೆಯುಳ್ಳ ಬರಹಗಾರರಾಗಿದ್ದರು. ಅವರ ಕತೆಗಳಲ್ಲಿ ಬಾಲ್ಯದ ನೋವು, ದಲಿತ ಸಮುದಾಯದ ಅನುಭವಗಳು ಹಾಗೂ ಸಾಮಾಜಿಕ ಅಸಮಾನತೆಗಳ ನೈಜ ಚಿತ್ರಣ ಅವರ ಕಥೆಗಳಲ್ಲಿ ಕಂಡುಬರುತ್ತದೆ’ ಎಂದು ಹೇಳಿದರು.

ಅವರು ಮುಂದುವರಿಸಿ, “ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಮೊಗಳ್ಳಿ ಗಣೇಶರು ವಿಶಿಷ್ಟ ಸ್ಥಾನ ಹೊಂದಿದ್ದಾರೆ. ಅವರ ಕಥೆಗಳು ಕಲ್ಪನಾಶಕ್ತಿ ಮತ್ತು ಸಾಮಾಜಿಕ ವಾಸ್ತವದ ಸಂಯೋಜನೆಯಿಂದ ವಿಶಿಷ್ಟತೆ ಪಡೆದಿವೆ,” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬೊರಗಿ’ ಸೇರಿದಂತೆ ಮೊಗಳ್ಳಿಯವರ ಅನೇಕ ಕೃತಿಗಳು ಸಮಾಜದ ನೈಜ ಬದುಕಿನ ಕಥೆಯನ್ನು ಹೇಳುತ್ತವೆ. ಅವರು ಸಂಶೋಧಕ, ಚಿಂತಕ ಮತ್ತು ಸಂಸ್ಕೃತಿ ವಿಶ್ಲೇಷಕ (ಕಲ್ಚರಲ್ ತಿಂಕರ್) ಆಗಿ ಹೊಸ ಸಾಹಿತ್ಯ ದೃಷ್ಟಿಕೋನವನ್ನು ನೀಡಿದರು. ‘ಗೋವು ಬ್ರಾಹ್ಮಣ ಸಂಕೇತ, ಹುಲಿ ದಲಿತರ ಸಂಕೇತ’ ಎಂದು ಅವರ ವಿಶ್ಲೇಷಣೆ ಕನ್ನಡ ಚಿಂತನೆಗೆ ಹೊಸ ಆಯಾಮ ನೀಡಿತು. ಅವರ ಕೆಲವು ಕೃತಿಗಳು ಇಂಗ್ಲಿಷ್‌ನಲ್ಲಿಯೂ ಅನುವಾದಗೊಂಡಿವೆ,’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | 69ನೇ ಧಮ್ಮಚಕ್ರ ಪ್ರವರ್ತನಾ ದಿನಾಚರಣ

‘ಮೊಗಳ್ಳಿಯವರು ಮೇಲ್ಜಾತಿ ಕಥೆಗಳ ಏಕಾಧಿಪತ್ಯ ಮುರಿದು, ದಲಿತ ಕಥನಗಳಿಗೆ ಸಾಹಿತ್ಯದಲ್ಲಿ ಕೇಂದ್ರ ಸ್ಥಾನ ನೀಡಿದರು. ಕನ್ನಡ ವಿಮರ್ಶೆಗೆ ಹೊಸ ಚೈತನ್ಯ ತುಂಬಿದರು. ಅವರು ಈಗ ನಮ್ಮ ನಡುವೆ ಇಲ್ಲದಿದ್ದರೂ, ಅವರ ಬರಹಗಳು ಮತ್ತು ಚಿಂತನೆಗಳು ಸದಾ ಜೀವಂತವಾಗಿವೆ,’ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ದಸಂಸ ಹಿರಿಯ ಮುಖಂಡ ಮರೆಪ್ಪ ಹಳ್ಳಿ, ಪ್ರೊ. ಆರ್.ಕೆ. ಹುಡಗಿ, ಪ್ರೊ. ಜಯದೇವ ಗಾಯಕವಾಡ್, ಪ್ರೊ. ಅಪ್ಪುಗಿರಿ ಸೋಮಶೇಖರ್, ರೇಣುಕಾ ಸಿಂಗೆ, ಸುರೇಶ ಹಾದಿಮನಿ, ಸಂಜಯ್ ಮ್ಯಾಕಲ್, ದತ್ತಾತ್ರೇಯ ಇಕ್ಕಳಕಿ, ಅಶ್ವಿನಿ ಮದನಕರ್, ದಿಲಿಪ್ ಕಾಯಂಕರ್, ಡಾ. ಮಾಹೇಶ ಕುಮಾರ್ ರಾಠೋಡ್, ರಾಜಕುಮಾರ ಮಾಳಗೆ, ಸಿದ್ದಪ್ಪ ಹೊಸಮನಿ, ಡಾ. ನಂದುಕುಮಾರ್ ಸೇರಿದಂತೆ ಪ್ರಗತಿಪರ ಚಿಂತಕರು, ಬಂಡಾಯ ಸಾಹಿತಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...