ಕಲಬುರಗಿ | ಪೊರಕೆ ಹಿಡಿದು ಕಸ ಗುಡಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Date:

ಅತಿಥಿ ಉಪನ್ಯಾಸಕರ ಸೇವಾ ಖಾಯಂಮಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 21 ದಿನಕ್ಕೆ ಕಾಲಿಟ್ಟಿದ್ದು ಇಂದು (ಡಿ.13) ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅತಿಥಿ ಉಪನ್ಯಾಸಕರೆಲ್ಲರೂ ಪೊರಕೆ ಹಿಡಿದು ಕಸ ಗುಡಿಸುವುದರ ಮೂಲ ಪ್ರತಿಭಟನೆ ಮಾಡಿದ್ದಾರೆ.

ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಸದ್ಯದ ಕಾರ್ಯನಿರತ ಹುದ್ದೆಗಳಿಗೆ ವಿರುದ್ಧವಾಗಿ ಹೊಸ ಹುದ್ದೆಗಳನ್ನು ಸೃಜಿಸಿ, ಸೇರ್ಪಡೆ ಹಾಗೂ ಕಾನೂನು ತಿದ್ದುಪಡಿ ಮಾಡಿಕೊಂಡು ಅನುಮೋದನೆ ನೀಡಿ, ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೃಜಿಸಿದ ಹುದ್ದೆಗಳಲ್ಲಿ ವಿಲೀನಗೊಳಿಸಿ ಸಕ್ರಮಾತಿ ಮಾಡುವ ಬಗ್ಗೆ ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಮಾತನಾಡಿ, ನಮ್ಮ ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 11,000ಕ್ಕಿಂತ ಅಧಿಕ ಅತಿಥಿ ಉಪನ್ಯಾಸಕರು, ಹತ್ತಾರು ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ವಯೋಮಿತಿ ಮೀರಿದ ಮತ್ತು ಮೀರುತ್ತಿರುವವರು ಇದ್ದಾರೆ. ಈಗ ಅತಿಥಿ ಉಪನ್ಯಾಸಕರಿಗೆ ಸೇವಾ ಖಾಯಮಾತಿ ಇಲ್ಲದೆ ನಮ್ಮೆಲ್ಲರ ಬದುಕು ಅಭದ್ರತೆಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿಥಿ ಉಪನ್ಯಾಸಕ, ತಾತ್ಕಾಲಿಕ ಎಂಬುದು ಅವೈಜ್ಞಾನಿಕ ಪದ್ಧತಿ ಉನ್ನತ ಶಿಕ್ಷಣ ವ್ಯವಸ್ಥೆಗೆ ಮತ್ತು ಕಾಲೇಜುಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ವೃತ್ತಿಯಲ್ಲಿ ಸಾಕಷ್ಟು ಪ್ರತಿಭಾವಂತ, ಅರ್ಹರು ಮತ್ತು ಬೋಧನಾ ಕೌಶಲ್ಯವುಳ್ಳ ಅಭ್ಯರ್ಥಿಗಳು ಇದ್ದರೂ ಸಹ ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕ ಹಾಗೆ ಶೈಕ್ಷಣಿಕ ಚಟುವಟಿಕೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಇದೆ.

ಜೊತೆಗೆ ಅತ್ಯಂತ ಕಡಿಮೆ ವೇತನ ಸಮಯಕ್ಕೆ ಸರಿಯಾಗಿ ಗೌರವಧನ ಪಾವತಿಯಾಗದಿರುವುದು. ವರ್ಷಪೂರ್ತಿ ಕೆಲಸ ಸಿಗದಿರುವುದು ಅವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಪ್ರತಿನಿತ್ಯ ಆತಂಕದ ಹಾಗೂ ಅಭದ್ರತೆಯ ಪರಿಸ್ಥಿತಿಯಲ್ಲಿ ಬದುಕುವಂತೆ ಮಾಡಿದೆ.

ಸರ್ಕಾರ ಈ ಹಿಂದೆ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು, ಅರೆಕಾಲಿಕ, ಅತಿಥಿ ಉಪನ್ಯಾಸಕರನ್ನು ಜೆ.ಒ.ಸಿ ಸೇವೆ ಸಲ್ಲಿಸಿದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು, ಮುರಾರ್ಜಿ ದೇಸಾಯಿ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ದಿನಗೂಲಿ ವೈದ್ಯರುಗಳನ್ನು ಅರೆ ವೈದ್ಯಕೀಯ ಸಿಬ್ಬಂದಿವರ್ಗ ಮತ್ತು ವಾಹನ ಚಾಲಕರನ್ನು ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ನೌಕರರಿಗೆ ಖಾಯಂಮಾತಿ ನೀಡಲು ತೆಗೆದುಕೊಂಡ ದೃಢ ನಿರ್ಧಾರವನ್ನು ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ವಿಷಯದಲ್ಲೂ ಕೂಡ ತೆಗೆದುಕೊಳ್ಳಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...