ಕಲಬುರಗಿ | ಪಡಿತರ ಚೀಟಿಯ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಸ್ಲಂ ಜನಾಂದೋಲನ ಸಂಘಟನೆಯಿಂದ ಪ್ರತಿಭಟನೆ

Date:

ಆಹಾರ ಪಡಿತರ ಚೀಟಿ ಪಡೆಯಲು ರಾಜ್ಯದ ಬಡ ಜನರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಲು ಆಗ್ರಹಿಸಿ ಹಾಗೂ ನೈಜ ಫಲಾನುಭವಿಗಳನ್ನು ಹೊಸ ಪಡಿತರ ಚೀಟಿ ನೀಡುವುದಕ್ಕೆ ಇರುವ ಮಾನದಂಡಗಳನ್ನು ಸರಳೀಕರಿಸಲು ಒತ್ತಾಯಿಸಿ ಕಲಬುರಗಿಯಲ್ಲಿ ಸ್ಲಂ ಜನಾಂದೋಲನ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಸಂಘಟನೆಯ ವತಿಯಿಂದ ಕಲುಬರಗಿ ಜಿಲ್ಲಾಧಿಕಾರಿಗಳ ಮುಖಾಂತರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಹೆಚ್.ಮುನಿಯಪ್ಪನವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಚುನಾವಣೆಯಲ್ಲಿ ಘೋಷಿಸಿರುವಂತಹ ಐದು ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ, ಶಕ್ತಿ ಯೋಜನೆ. ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ. ಆದರೆ ಈ ಯೋಜನೆಗಳನ್ನು ಪಡೆಯಲು ಲಕ್ಷಾಂತರ ಜನ ಅರ್ಜಿ ಸಲ್ಲಿಕೆ ಮಾಡಲು ಸರದಿ ಸಾಲಿನಲ್ಲಿ ನಿಲ್ಲಿಸಲಾಗುತ್ತಿದೆ. ನೈಜ ಬಡಜನರು ಹೊಸ ಪಡಿತರ ಚೀಟಿಗಳನ್ನು ಮಾಡಿದುಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಅರ್ಜಿ ಸಲ್ಲಿಸಲು ನೀಡಿತ್ತಿರುವ ಸಮಯ ತುಂಬಾ ಕಡಿಮೆ ಆಗಿದ್ದರಿಂದ ಸಾವಿರಾರು ಜನರಲ್ಲಿ ಕೇವಲ 4-5 ಜನರ ಮಾತ್ರ ಆನ್ ಲೈನನಲ್ಲಿ ಅರ್ಜಿಗಳು ಸಲ್ಲಿಕೆ ಆಗುತ್ತಿರುವುದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ತಮ್ಮ ದಿನನಿತ್ಯದ ಕೆಲಸಗಳನ್ನು ಬಿಟ್ಟು ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ರಾಜ್ಯದಲ್ಲಿ 1.15 ಕೋಟಿ ಕುಟುಂಬಗಳು ಅಂದರೆ ನಮ್ಮ ರಾಜ್ಯದ ಜನಸಂಖ್ಯೆ ಶೇ70%ಕ್ಕಿಂತಲೂ ಹೆಚ್ಚು ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈ ಸೌಲಭ್ಯಗಳು ದುರ್ಬಳಕ್ಕೆ ಮಾಡಿಕೊಳ್ಳುವ ಸಾಧ್ಯತೆಗಳಿವೆ ಎಂಬ ಕಾರಣದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ಪಡಿತರ ಚೀಟಿಗಳನ್ನು ರದ್ದುಗೊಳಿಸುತ್ತಿರುವ ಸರ್ಕಾರದ ಕ್ರಮವನ್ನು ಸ್ಲಂ ಜನಾಂದೋಲನ-ಕರ್ನಾಟಕ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಈಗಾಗಲೇ ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ತಮ್ಮ ಪಡಿತರ ಚೀಟಿಗಳಲ್ಲಿ ತಿದ್ದುಪಡಿ ಹಾಗೂ ಸೇರ್ಪಡೆ ಪ್ರಕ್ರಿಯೆ ಮಾಡಿ ಸುಮಾರು ತಿಂಗಳಾದರು ಸಹ ಆಹಾರ ಇಲಾಖೆಯಲ್ಲಿ ತಿದ್ದುಪಡಿ ಹಾಗೂ ಸೇರ್ಪಡೆಗೊಂಡ ಹೊಸ ಪಡಿತರ ಚೀಟಿಗಳನ್ನು ನೀಡುವಲ್ಲಿ ವಿಳಂಭ ನೀತಿಯನ್ನು ಅನುಸರಿಸಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಹೊಸ ಪಡಿತರ ಚೀಟಿಗಳನ್ನು ಪಡೆಯುವ ಸಲುವಾಗಿ ಅರ್ಜಿ ಸಲ್ಲಿಸಲು ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು ಹಾಗೂ ತಿದ್ದುಪಡಿ ಮತ್ತು ಸೇರ್ಪಡೆ ಮಾಡಿಕೊಂಡಿರುವ ಪಡಿತರ ಚೀಟಿಗಳನ್ನು ಕೊಡಲೇ ಫಲಾನುಭವಿಗಳಿಗೆ ವಿತರಣೆ ಮಾಡುವಂತೆ ಕ್ರಮ ಕೈಗೊಳ್ಳಬೇಕೆಂದು ಸ್ಲಂ ಜನಾಂದೋಲನ- ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೌರಮ್ಮ ಮಾಕಾ, ಅಶ್ವಿನಿ ಮದನಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2024 08 20 at 6.48.58 PM 1
WhatsApp Image 2024 08 20 at 6.48.59 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...