ಶಾಹಾಬದ್ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವುದನ್ನು ಖಂಡಿಸಿ ಗಂಗಾನಗರದ ಜಗತ್ ವೃತ್ತದಲ್ಲಿ ಶ್ರೀ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿ ವತಿಯಿಂದ ಪ್ರತಿಭಟನೆ ಜರುಗಿತು.
ಇದನ್ನೂ ಓದಿ: ಕಲಬುರಗಿ | ವೇತನ ಸಿಗದಿದ್ದಕ್ಕೆ ಬೇಸರ: ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ

ಅಂಬಿಗರ ಚೌಡಯ್ಯನವರ ಮೂರ್ತಿಗೆ ಹಾನಿ ಮಾಡಿದ ದುಷ್ಕರ್ಮಿಗಳನ್ನು ಸರ್ಕಾರ ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ಮೂರ್ತಿ ಹಾನಿಯಾದ ಅದೇ ಸ್ಥಳದಲ್ಲಿ ಹೊಸ ಮೂರ್ತಿಯನ್ನು ಸ್ಥಾಪನೆ ಮಾಡಿ ಅದಕ್ಕೆ ಸರ್ಕಾರ ರಕ್ಷಣೆ ನೀಡುವಂತೆ ಒತ್ತಾಯಿಸಿದರು. ಒಂದು ವೇಳೆ ಈ ಬೇಡಿಕೆ ಆದಷ್ಟು ಬೇಗ ಈಡೇರಿಸದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು. ಈ ಹೋರಾಟದ ಸಮಯದಲ್ಲಿ ಏನಾದರೂ ಅನಾಹುತ ಸಂಭವಿಸಿದ್ದರೆ ಇದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿಯ ಅಧ್ಯಕ್ಷ ರಮೇಶ ಜಮಾದಾರ್, ಕಾರ್ಯಾಧ್ಯಕ್ಷ ರಾಕೇಶ್ ಜಮಾದಾರ್ ಸೇರಿದಂತೆ ಸಮಾಜದ ಮುಖಂಡರು ಯುವಕರು ಇದ್ದರು.





