ಕಲಬುರಗಿ | ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

Date:

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಲಬುರಗಿ ವತಿಯಿಂದ ಜಿಲ್ಲಾಧಿಕಾರಿಗಳು ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದ ಜನತೆ ಬಹಳ ನಿರೀಕ್ಷೆಯೊಂದಿಗೆ ಕೋಮುವಾದಿ, ಪ್ರಜಾಪ್ರಭುತ್ವ ವಿರೋಧಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿ.ಜೆ.ಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದರೂ ಕೂಡ ಯಥಾಸ್ಥಿತಿ ಆಡಳಿತ ಮುಂದುವರೆಯುತ್ತಿದೆ. ಈ ಸರ್ಕಾರ ಬಂದು ಒಂದು ವರ್ಷ ಅವಧಿಯಲ್ಲೇ ಹಗರಣಗಳ ಆರೋಪಕ್ಕೆ ಒಳಗಾಗಿದೆ. ರೈತರ ಆತ್ಮಹತ್ಯೆ ಸರಣಿ ಮುಂದುವರೆಯುತ್ತಲೇ ಇದೆ. ಈ ಸರ್ಕಾರಕ್ಕೆ ಎಚ್ಚರಿಕೆ ನೀಡಿ ರೈತಪರ ನೀತಿಗಳನ್ನು ರೂಪಿಸಲು ರೈತರ ಆತ್ಮಹತ್ಯೆ ತಡೆಗಟ್ಟಲು ಒತ್ತಾಯಿಸಿ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಾಗಣ್ಣ ತಂಬೆ, ಗೌರಮ್ಮ ಆರ್,ಚಿಂತಕೋಟ್ಟಿ, ಸಿದ್ದು ವೇದಶೆಟ್ಟಿ, ಸಿದ್ಧರೋಡ, ಶರಣಗೌಡ ಪಾಟೀಲ್, ಕರೆಪ್ಪ, ವಿಜಯಕುಮಾರ ಇನ್ನಿತರರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಕ್ಕೊತ್ತಾಯಗಳು

  1. ರೈತರ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವತಃ ವೆಚ್ಚವನ್ನು ಭರಿಸಬೇಕೆಂದು ಸರ್ಕಾರ ತೀರ್ಮಾನಿಸಿದೆ. ಈ ತೀರ್ಮಾನವು ರೈತರಿಗೆ ಹೊರೆಯಾಗಿದ್ದು 2-3 ಲಕ್ಷ ರೂಪಾಯಿ ದೊಡ್ಡ ಮೊತ್ತದ ವೆಚ್ಚವನ್ನು ರೈತರು ಭರಿಸಲು ಸಾಧ್ಯವಾಗುವುದಿಲ್ಲ. ಸರ್ಕಾರ ಈ ತೀರ್ಮಾನವನ್ನು ಹಿಂಪಡೆದು ಹಿಂದಿನ ಪದ್ಧತಿಯನ್ನು ಮುಂದುವರೆಸಬೇಕು. ಕರ ನಿರಾಕರಣೆ ಚಳುವಳಿಯಲ್ಲಿ ರೈತ ಕುಟುಂಬದವರು ಉಳಿಸಿಕೊಂಡಿರುವ ಗೃಹ ವಿದ್ಯುತ್ ಬಾಕಿಯನ್ನು ಮನ್ನಾ ಮಾಡಬೇಕು.
  2. ಕಳೆದ ವರ್ಷ ಏಪ್ರಿಲ್ ನಿಂದ ಇದುವರೆಗೆ 1182 ರೈತರ ಆತ್ಮಹತ್ಯೆಗೆ ಒಳಗಾಗಿದ್ದಾರೆ. ಈ ಆತ್ಮಹತ್ಯೆಗಳಲ್ಲಿ ಯುವಕರು ಹೆಚ್ಚು ಒಳಗಾಗಿದ್ದು ಆತಂಕಕ್ಕೀಡು ಮಾಡಿದ್ದು, ಸರ್ಕಾರ ಆತ್ಮಹತ್ಯೆ ತಡೆಗಟ್ಟಲು ರೈತ ಪರ ಕಾರ್ಯಕ್ರಮಗಳನ್ನು ರೂಪಿಸಿ ರೈತ ಸಮುದಾಯಕ್ಕೆ ಆತ್ಮಸ್ಥೆರ್ಯ ತುಂಬಬೇಕು ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಕೃಷಿ ಬೆಲೆ ಆಯೋಗವನ್ನು ಸಬಲೀಕರಣಗೊಳಿಸಬೇಕು.
  3. ರಾಜ್ಯ ಸರ್ಕಾರವೇ ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಪಿ ನಿಗದಿಪಡಿಸಿ ಖರೀದಿಸಬೇಕು. ಹಿಂದೆಂದು ಕಂಡರಿಯದ ಬರಗಾಲವನ್ನು ರಾಜ್ಯ ಎದುರಿಸಿದೆ. ಇಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸಾಲಬಾಕಿ ವಸೂಲಿಗಾಗಿ ರೈತರಿಗೆ ಕಿರುಕುಳ ನೀಡುತ್ತಿವೆ ಇದನ್ನು ತಪ್ಪಿಸಲು ರೈತರ ರಕ್ಷಣೆಗೆ ಬರಬೇಕು.
  4. ರೈತರ ಎಲ್ಲಾ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆ ಹಾನಿ ನಿರ್ಧರಿಸಬೇಕು ವಿಮಾ ಕಂಪೆನಿಗಳು ಉಳಿಸಿಕೊಂಡಿರುವ ಬಾಕಿಯನ್ನು ರೈತರ ಖಾತೆಗೆ ಕೂಡಲೇ ಹಾಕಬೇಕು.
  5. ಫಸಲು ಪಹಣಿ ದುರಸ್ಥಿ, ಪಕ್ಕಾಪೋಡು, ಹದ್ದುಬಸ್ತು ಶುಲ್ಕ ದುಬಾರಿಯಾಗಿದ್ದು ಅದನ್ನು ಕೂಡಲೇ ಇಳಿಸಬೇಕು.
  6. ಬರ ಪರಿಹಾರದ ಹಣ ವಿಮಾ ಪರಿಹಾರದ ಹಣವನ್ನು ಸಹ ಬ್ಯಾಂಕ್‌ನವರು ಸಾಲಕ್ಕಾಗಿ ಜಮೆ ಮಾಡಿಕೊಳ್ಳುತ್ತಿದ್ದಾರೆ ಬ್ಯಾಂಕ್‌ನವರಿಗೆ ಸೂಕ್ತ ನಿರ್ದೇಶನ ನೀಡಿ ಇದನ್ನು ತಪ್ಪಿಸಬೇಕು.
  7. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯ ಕಿರುಕುಳವನ್ನು ತಪ್ಪಿಸಿ ಸಾಗುವಳಿ ಮಾಡುತ್ತಿರುವ ಎಲ್ಲಾ ರೈತರಿಗೆ ಪಟ್ಟಾ ನೀಡಬೇಕು.
  8. ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳು ಟನ್ ಒಂದಕ್ಕೆ 150/- ರೂ ಪಾವತಿಸಬೇಕೆಂದು ಹಿಂದಿನ ಸರ್ಕಾರ ತೀರ್ಮಾನಿಸಿದ್ದು ಇದಕ್ಕಿರುವ ತಾಂತ್ರಿಕ ತೊಂದರೆಗಳನ್ನು ಕೂಡಲೇ ನಿವಾರಿಸಿ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು ರಾಜ್ಯ ಸರ್ಕಾರ ಎಂ.ಎಸ್.ಪಿ ಘೋಷಿಸಬೇಕು.
  9. ಸರ್ಕಾರ ಮಾತಿನಂತೆ ಭೂಸ್ವಾಧೀನ ತಿದ್ದುಪಡಿ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು.
  10. ಯಾದಗಿರಿ ಜಿಲ್ಲೆಯಾದ್ಯಂತ ಬರಪರಿಹಾರ ಸಮರ್ಪಕವಾಗಿ ವಿತರಿಸದೇ ಇದ್ದರೆ ಮುಂದಿನ ಯಾವುದೇ ಕೆಟ್ಟ ಪರಿಣಾಮಕ್ಕೆ ಜಿಲ್ಲಾಡಳಿತವೇ ನೇರ ಹೊಣೆ.
  11. ರೈತರಿಗೆ ಬರವಸೆ ನೀಡಿದಂತೆ ಸತತವಾಗಿ 7 ಗಂಟೆ ನೀಡಬೇಕಾಗಿರುವ ವಿದ್ಯುತ್‌ನ್ನು ಹಗಲು ಹೊತ್ತಿನಲ್ಲಿ ಕೊಡುವಂತೆ ಒತ್ತಾಯ.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...