ಕಲಬುರಗಿ | ತ್ಯಾಗ-ಸ್ಫೂರ್ತಿಯ ಸಂಕೇತ ರಮಾಬಾಯಿ ಅಂಬೇಡ್ಕ‌ರ್: ಮಿಲಿಂದ್ ಸಾಗರ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನದಲ್ಲಿ ಮಾತೇ ರಾಮಬಾಯಿ ಅಂಬೇಡ್ಕರ್ ಅವರ 127ನೇ ಜನ್ಮದಿನವನ್ನು ಆಚರಣೆ ಮಾಡಲಾಯಿತು.

ರಮಾಬಾಯಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಭಾರತೀಯ ಬೌದ್ಧ ಮಹಾಸಭಾ ತಾಲೂಕು ಕಾರ್ಯದರ್ಶಿ ಮಿಲಿಂದ್ ಸಾಗರ್ ಮಾತನಾಡಿ, “ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆಯ ಬೆಂಬಲ ಇದ್ದೇ ಇರುತ್ತದೆ. ಈ ಸಾಲು ಹಳೆಯದಾದರೂ ತಾತ್ಪರ್ಯ ಮಾತ್ರ ನಿತ್ಯ. ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಬದುಕಿನಲ್ಲಿ ಪತ್ನಿ ರಮಾಬಾಯಿ ಅಂಬೇಡ್ಕರ್ ಅವರು ಬೆನ್ನೆಲುಬಾಗಿ ನಿಂತಿದ್ದರು” ಎಂದು ಹೇಳಿದರು.

“ರಮಾಬಾಯಿಯವರು ಹುಟ್ಟಿದ್ದು 1898 ಫೆಬ್ರವರಿ 7ರಂದು. ತಂದೆ ಭಿಕು ವಳಗಂಕರ್ ಮತ್ತು ತಾಯಿ ರುಕ್ಮಿಣಿ. ತಂದೆಯ ವೃತ್ತಿ ಮುಂಬಯಿಯ ಬಂದರಿನಲ್ಲಿ ಹಡಗುಗಳಿಗೆ ಮೀನು ತುಂಬುವುದು. ಆ ಕಾರಣಕ್ಕೆ 1906ರಲ್ಲಿ ಭೀಮರಾವ್ ರ ಜೊತೆ ರಮಾಬಾಯಿಯವರ ವಿವಾಹ ನಡೆದಾಗ ಅದು ನಡೆದದ್ದು ಮುಂಬಯಿಯ ಬೈಕುಲ್ಲ ಎಂಬ ಮೀನು ಮಾರುಕಟ್ಟೆಯಲ್ಲಿ. ಮಾರುಕಟ್ಟೆಯ ವ್ಯವಹಾರಗಳು ಮುಗಿದಾಗ ಸಂಜೆ ಭೀಮರಾವ್ ಮತ್ತು ರಮಾಬಾಯಿಯವರ ವಿವಾಹ ಆಗಿತ್ತು. ತಮ್ಮ ಪತ್ನಿಯನ್ನು ಅಂಬೇಡ್ಕರರು ಪ್ರೀತಿಯಿಂದ ರಾಮು ಎಂದು ಕರೆಯುತ್ತಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಜನವಿರೋಧಿ ಕೇಂದ್ರ ಬಜೆಟ್ ವಿರುದ್ಧ ರೈತ-ಕಾರ್ಮಿಕರ ಯುವಜನ ಸೇವಾ ಸಂಘ ಪ್ರತಿಭಟನೆ

ಈ ಸಂದರ್ಭದಲ್ಲಿ ಭಾರತೀಯ ಬೌದ್ಧ ಮಹಾಸಭಾ ತಾಲೂಕು ಅಧ್ಯಕ್ಷ ಮಲ್ಲಣ್ಣ ಕುಡಚಿ, ಮಲ್ಲಮ್ಮ ಕೊಂಬಿನ, ಯಶ್ವಂತ್ ಬಡಿಗೇರ್, ರವಿ ಕುಳಗೇರಿ, ಶ್ರೀಮಂತ ಹರನೂರ, ರವಿ ಕೊಳಕೋರ್, ವಿಕ್ರಂ ಬಡಿಗೇರ್, ಪರಶುರಾಮ್ ನಡಗಟ್ಟಿ, ಸಿದ್ದು ಜಳಕಿ, ಶರಣು ಕಟ್ಟಿ, ಮಾನಪ್ಪ ಹೊಸಮನಿ, ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...