ಕಲಬುರಗಿ | ಅತ್ಯಾಚಾರ ಪ್ರಕರಣ; ಸಮಗ್ರ ತನಿಖೆಗೆ ಒತ್ತಾಯ

Date:

ಮಹಿಳೆಯರಿಗೆ ಸಮಾನತೆ ಮತ್ತು ಸ್ವಾತಂತ್ರ್ಯ ಕಲ್ಪಿಸದ ಯಾವುದೇ ಒಂದು ಸಮಾಜವು ನಾಗರಿಕ ಸಮಾಜ ಎನಿಸಿಕೊಳ್ಳಲಾರದೆಂದು ಡಾ. ಬಿ.ಆರ್‌ ಅಂಬೇಡ್ಕರ್‌ ಅಂದೇ ಹೇಳಿದ್ದರು. ಆದರೆ, ಇಂದಿಗೂ ಹೆಣ್ಣು ಮಕ್ಕಳಿಗೆ ಸ್ಥಾನಮಾನ ಸಿಗುತ್ತಿಲ್ಲ ಎಂದು ಪ್ರಬುದ್ಧ ಭಾರತ ಸಂಘರ್ಷ ಸಮಿತಿಯ ಸಂಚಾಲಕಿ ಅಶ್ವಿನಿ ಮದನಕರ್ ಹೇಳಿದರು.

ಕಲಬುರಗಿ ಜಿಲ್ಲೆಯಲ್ಲಿ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ದೇಶವನ್ನೇ ಬೆಚ್ಚಿ ಬೀಳಿಸಿದ ದೆಹಲಿಯ ನಿರ್ಭಯ ಪ್ರಕರಣ, ಅದೇ ಸಮಯದಲ್ಲಿ ಧರ್ಮಸ್ಥಳದಲ್ಲಿ ನಡೆದ 17 ವರ್ಷದ ಬಾಲಕಿ ಸೌಜನ್ಯ ಮೇಲಿನ ಅತ್ಯಾಚಾರ-ಕೊಲೆ, ಬಿಜಾಪುರದ ಹೃದಯಭಾಗದಲ್ಲಿ ನಡೆದ ದಾನಮ್ಮಳ ಭೀಕರ ಅತ್ಯಚಾರ ಮತ್ತು ಇತ್ತೀಚಿಗೆ ಆಳಂದ ತಾಲೂಕಿನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಬೆಳಕಿಗೆ ಬಂದರೂ ಕೂಡ, ಸೌಜನ್ಯಳಿಂದ ಹಿಡಿದು ದಾನಮ್ಮಳವರೆಗೂ ಯಾವುದೇ ಪ್ರಕರಣದಲ್ಲಿ ಇನ್ನೂ ನ್ಯಾಯ ದೊರೆತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪ್ರಬುದ್ಧ ಭಾರತ ಸಂಘರ್ಷ ಸಮಿತಿ ಮತ್ತು ಅತ್ಯಾಚಾರ ವಿರೋಧಿ ಆಂದೋಲನ ಬಳಗದ ನಿಯೋಗ ಮಂಗಳವಾರ ಬಾಲಕಿಯ ಮನೆಗೆ ಭೇಟಿ ನೀಡಿತ್ತು. ಕುಟುಂಬಸ್ಥರ ಆಕ್ರಂದನ ಕೇಳಿ, ಸಾಂತ್ವನ ಹೇಳಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಚನ ಓದಿನಲ್ಲಿ ಸಾಕಷ್ಟು ಆಸಕ್ತಿ ಹೊಂದಿದ್ದ ಬಾಲಕಿ, ವಚನ ಪುಸ್ತಕ ತರಲು ತನ್ನ ಪಕ್ಕದ ಊರಿನ ದೊಡ್ಡಮ್ಮನ ಮನೆಗೆ ಹೋಗುವಾಗ, ವಿಕೃತ ಕಾಮುಕರು ಅತ್ಯಾಚಾರ ಎಸಗಿ, ಹತ್ಯೆ ಮಾಡಿ ಬಾವಿಗೆ ಬಿಸಾಡಿದ್ದಾರೆ” ಎಂದು ಹೇಳಿದರು.

“ಆರೋಪಿಯು ಕಬ್ಬಿನ ಗದ್ದೆಯಲ್ಲಿ ಆ ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾನೆ. ಆ ಕಾಮುಕ ಈ ಹಿಂದೆಯೇ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಅದೇ ಬಾವಿಯಲ್ಲಿ ಎಸೆದಿದ್ದ ಎಂದು ತಿಳಿದುಬಂದಿದೆ. ಈ ಕುರಿತು ಸಮಗ್ರ ತನಿಖೆಯಾಗಬೇಕು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಶಾಲೆಗೆ ಹೋಗಲು 1 ಕಿ.ಮೀ ಕಾಲು ದಾರಿಗಳು ಇರುತ್ತವೆ. ಅಂತಹ ಮಾರ್ಗಮಧ್ಯೆ ಮಕ್ಕಳ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ” ಎಂದರು.

“ಅತ್ಯಾಚಾರವಾಗಿ ಬದುಕುಳಿದ ಮಕ್ಕಳೂ ಕೂಡ ತಮ್ಮ ಮೇಲಿನ ದೌರ್ಜನ್ಯದ ಕುರಿತು ಮನೆಯಲ್ಲಿ ಹೇಳುವುದಿಲ್ಲ. ಶಾಲೆಗೆ ಹೋಗುವ ಮಕ್ಕಳಿಗೆ ವಿಶೇಷ ರಕ್ಷಣೆ ಒದಗಿಸಬೇಕು. ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಮಾಡಿ, ಅಪರಾಧಿಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ – ಕೊಲೆ; ಕಾಮುಕ ಹಂತಕರ ಬಂಧನಕ್ಕೆ ಆಗ್ರಹ

“ಅತ್ಯಾಚಾರಕ್ಕೊಳಗಾದ ಬಾಲಕಿ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಕೊಡಬೇಕು. ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು. ಹಾಗೆಯೇ ಧರ್ಮಸ್ಥಳದ ಸೌರ್ಜನ್ಯ ಮತ್ತು ವಿಜಯಪುರದ ದಾನಮ್ಮಳ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು. ಎಸ್‌ಐಟಿ ರಚಿಸಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪ್ರಬುದ್ಧ ಭಾರತ ಸಂಘರ್ಷ ಸಮಿತಿ ಸಂಚಾಲಕಿ ಭವಾನಿ ಪ್ರಸಾದ್‌, ದಿಲೀಪಕುಮಾರ ಕಾಯನಕರ್‌, ಪ್ರಗತಿಪರ ಮಹಿಳಾ ಸಂಘದ ಅಧ್ಯಕ್ಷೆ ಮಹಾದೇವಿ ಎಂ. ಸಜ್ಜನ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...