ಕಲಬುರಗಿ | ಒಳಮೀಸಲಾತಿ ಜಾರಿಗೆ ಮೂರು ತಿಂಗಳ ಕಾಲಾವಕಾಶ; ರವಿ ಬೆಳಮಗಿ ಖಂಡನೆ

Date:

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟದಲ್ಲಿ ಒಳಮಿಸಲಾತಿ ಜಾರಿಯಾಗುವವರೆಗೂ ನೇಮಕಾತಿ ತಡೆ ಹಿಡಿದಿರುವುದು ಸ್ವಾಗತಾರ್ಹ. ಆದರೆ ಉಪಚುನಾವಣೆ ಸಲುವಾಗಿ ಒಳಮೀಸಲಾತಿ ಜಾರಿಗೆ ಮೂರು ತಿಂಗಳ ಕಾಲಾವಕಾಶ ಕೊಟ್ಟಿರುವುದು ಬೇಸರವನ್ನುಂಟು ಮಾಡಿದೆ ಎಂದು ಮಾದಿಗ ಸಮಾಜದ ಯುವ ಮುಖಂಡ ರವಿ ಬೆಳಮಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಪತ್ರಕೆ ಹೇಳಿಕೆ ನೀಡಿರುವ ಅವರು, “ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗವು ವೈಜ್ಞಾನಿಕ ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದೆ. ಮತ್ತೆ ಮೂರು ಬಾರಿ ಸುಪ್ರೀಂ ಕೋರ್ಟ್ ಒಳಮೀಸಲಾತಿಯು ಆಯಾ ರಾಜ್ಯ ಸರ್ಕಾರಗಳು ನೀಡಬಹುದಾಗಿದೆಯೆಂದು ಐತಿಹಾಸಿಕ ತೀರ್ಪು ನೀಡಿದೆ. ಇಷ್ಟಾದರೂ ರಾಜ್ಯ ಸರ್ಕಾರ ಮತ್ತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವ ಆಯೋಗ ರಚನೆ ಮಾಡಿ ವರದಿ ತರಿಸಿ, ಮೂರು ತಿಂಗಳಲ್ಲಿ ಜಾರಿಗೆ ಮಾಡುತ್ತೇವೆ. ಸರ್ಕಾರ ಈಗಾಗಲೇ ಮಾತಿನಂತೆ ಜಾರಿ ಮಾಡಬೇಕು. ಸರ್ಕಾರದ ಉದ್ದೇಶ ಉಪಚುನಾವಣೆ ಆಗೋವರೆಗೂ ಮಾದಿಗ ಸಮುದಾಯದವರು ಕಾಂಗ್ರೆಸ್ ಪರ ಮತದಾನ ಮಾಡಬೇಕೆಂದು ಒಂದು ಕಲ್ಪನೆಯಲ್ಲಿ ಇದ್ದಿದ್ದರೆ ಅದಕ್ಕಾಗಿ ಮಾದಿಗ ಸಮುದಾಯದ ಜೊತೆ ಸರ್ಕಾರ ಚದುರಂಗ ಆಟವಾಡುತ್ತಿದೆ. ಅದಕ್ಕಾಗಿ ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕಾಸರಗೋಡು ಕನ್ನಡ ಮಕ್ಕಳ ಕೊರಗು ಮುಗಿಯದ ಗೋಳು: ಶಕುಂತಲಾ ಶೆಟ್ಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾದಿಗ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕೆಂಬ ಒಂದು ಗುರಿ ಇಟ್ಟುಕೊಂಡು ಮೂರು ತಿಂಗಳ ಕಾಲ ಕಾಲಾವಕಾಶವನ್ನು ತೆಗೆದುಕೊಂಡಂತೆ ಕಾಣುತ್ತಿದೆ. ಸಿದ್ದರಾಮಯ್ಯನವರೇ ನೀವು ಮನಸ್ಸು ಮಾಡಿದ್ದರೆ ಇದೇ ಸಚಿವ ಸಂಪುಟದಲ್ಲಿ ಜಾರಿಗೆ ಮಾಡಲು ಅವಕಾಶವಿತ್ತು. ತಾವು ಯಾಕೆ ಮಾಡಿಲ್ಲ? ಎಂಬ ಪ್ರಶ್ನೆಗೆ ಮಾದಿಗ ಸಮುದಾಯಕ್ಕೆ ತಾವು ಉತ್ತರ ನೀಡಬೇಕು. ಉಪಚುನಾವಣೆ ಸಲುವಾಗಿ ಮೂರು ತಿಂಗಳ ಕಾಲಾವಕಾಶ ಕೊಟ್ಟಿದ್ದೀರಿ! ಅಥವಾ ತಾವು ಒಳಮೀಸಲಾತಿ ಜಾರಿ ಮಾಡಬೇಕೆಂದು ಹೇಳುತ್ತ ಇದೇ ರೀತಿಯಾಗಿ ಮುಂದುವರೆಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಸಿಕೊಳ್ಳುತ್ತ ಹೋಗುತ್ತಿರುವುದು ಖಂಡನೀಯ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...