ಕಲಬುರಗಿ | ಕಾಮಗಾರಿ ಅಪೂರ್ಣ; ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಲು ಆಗ್ರಹ

Date:

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಕ್ರಾಸ್ ಮುಖ್ಯರಸ್ತೆ ಕಾಮಗಾರಿ 12 ತಿಂಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಿ, ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ (ಎಐಎಡಬ್ಲೂಯು) ಒತ್ತಾಯಿಸಿದೆ. ಸಂಘಟನೆಯ ಮುಖಂಡರು ಕಲಬುರಗಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿ ಕಾಶಿನಾಥ ಬಂಡಿ, “ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮುಖ್ಯ ರಸ್ತೆ ಕಾಮಗಾರಿ ಸುಮಾರು ದಿನಗಳಿಂದ ನೆನೆಗುದಿಗೆ ಬಿದ್ದಿದೆ, 12 ತಿಂಗಳ ಹಿಂದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡುತ್ತೇವೆಂದು ಹಿಟಾಚಿಗಳು ತಂದು ಬೇಕಾಬಿಟ್ಟಿಯಾಗಿ ತಗ್ಗು-ಗುಂಡಿಗಳನ್ನು ತೋಡಿ ಹಾಕಿ, ಪೂರ್ಣಪ್ರಮಾಣದ ಕಾಮಗಾರಿ ಮಾಡದೇ ಕಾಟಾಚಾರಕ್ಕೆ ಕೇದರಿ ಇಂದಿಗೆ ವರ್ಷ ದಾಟಿದೆ” ಎಂದರು.

ಈ ರಸ್ತೆಯ ಮೇಲೆ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತವೆ. ದಿನ ನಿತ್ಯ ಇಲ್ಲಿ ರಸ್ತೆ ಅಪಘಾತಗಳು ಸಾಮಾನ್ಯ ಎನ್ನುವಂತಾಗಿವೆ. ರಸ್ತೆ ಸಮೀಪ ವಾಸಿಸುವ ಕುಟುಂಬಗಳ ಮನೆಗಳಲ್ಲಿ ಧೂಳು ಹಾರುತ್ತಿದ್ದು, ಜನ ಅನಾರೋಗ್ಯಕ್ಕಿಡಾಗುತ್ತಿದ್ದಾರೆ. ಸುಮಾರು ಸಲ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಏನು ಪ್ರಯೋಜವಾಗಿರುವುದಿಲ್ಲ. ಸಂಬಂಧಿಸಿದ ಗುತ್ತಿಗೆದಾರ ಈ ಕಡೆ ಕಣ್ಣು ಹಾಕುತ್ತಿಲ್ಲ. ಇಂತಹ ಬೇಜಬ್ಬಾರಿ ಗುತ್ತಿಗೇದಾರನ ಪರವಾನಿಗೆ ಕಪ್ಪು-ಪಟ್ಟಿಗೆ ಹಾಕಿ ಕಾನೂನಿನ ಕ್ರಮ ಜರುಗಿಸಬೇಕು, ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡುಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕೂಡಲೆ ಸಂಬಂಧಿಸಿದ ಗುತ್ತಿಗೇದಾರ ಹಾಗೂ ಅಧಿಕಾರಿಗಳ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳದೇ ಹೋದರೆ. ಮುಂಬರುವ ದಿನಗಳಲ್ಲಿ ಇನ್ನು ಉಗ್ರವಾಗಿ ಹೋರಾಟ ಮಾಡುವುದಾಗಿ, ಈ ರಸ್ತಾರೋಖೋ ಮೂಲಕ ಆಗ್ರಹಿಸುತ್ತೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಗುರುನಂದೇಶ ಕೋಣಿನ್ ಅಧ್ಯಕ್ಷರು, ಕಾಶಿನಾಥ ಬಂಡಿ ಕಾರ್ಯದರ್ಶಿ, ಮಲ್ಲಮ್ಮ ಮಗಿ ಜಿಲ್ಲಾ ಕಾರ್ಯದರ್ಶಿ, ಸಂಗಮೇಶ ತಾಂಡೂರ, ಸಂತೋಷ ಪಾಟೀಲ್, ಅಬ್ಬಾಸಲಿ ಮಲ್ಲು ಚಿಂತಕುಂಟಾ, ಚಂದ್ರಶೆಟ್ಟಿ ಡೊಣ್ಣೂರ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...