ಕಲಬುರಗಿ | ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸುವಂತೆ ಎಐಡಿಎಸ್‌ಒ ಆಗ್ರಹ

Date:

ಸರ್ಕಾರಿ ಪದವಿ ಕಾಲೇಜು ಸ್ಥಳವನ್ನು ಶಿಕ್ಷಣೇತರ ಕೆಲಸಕ್ಕೆ ನೀಡುವ ಸರ್ಕಾರದ ನಿಲುವನ್ನು ಖಂಡಿಸಿ ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಹಾಗೂ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.

ಸರ್ಕಾರಿ ಪದವಿ ಮಹಾವಿದ್ಯಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

“ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ ಸೇರಿದ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಕೊಡಬೇಕೆಂದು ಸಚಿವ ಸಂಪುಟದಲ್ಲಿ ನಿರ್ಧರಿಸಿರುವುದು ಖಂಡನೀಯ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ ಮಾತನಾಡಿ, “ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ(ಸ್ವಾಯತ್ತ) ಐದು ಸಾವಿರಕ್ಕೂ ಅಧಿಕ ಮಂದಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಈ ಪದವಿ ಕಾಲೇಜಿಗೆ ಸೇರಿದ ಮೂರು ಎಕರೆ ಏಳು ಗುಂಟೆ ಜಮೀನನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಕೊಡಬೇಕೆಂದು ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧರಿಸಿರುವುದು ಖಂಡನೀಯವಾಗಿದೆ” ಎಂದರು.

“ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ತೊಂದರೆ ಉಂಟುಮಾಡುತ್ತದೆ. ಸರ್ಕಾರ ಉನ್ನತ ಶಿಕ್ಷಣವನ್ನು ಬಲಪಡಿಸಿ ವಿದ್ಯಾರ್ಥಿಗಳಲ್ಲಿ ಆದರ್ಶ ಮೌಲ್ಯಗಳನ್ನು ತುಂಬಬೇಕು. ಅದನ್ನು ಬಿಟ್ಟು ಸರ್ಕಾರಗಳು ಶಿಕ್ಷಣಕ್ಕೆ ಸಂಬಂಧಪಟ್ಟ ಭೂಮಿಯನ್ನು ಶಿಕ್ಷಣೇತರ ಕೆಲಸಕ್ಕೆ ಬಳಸುತ್ತಿರುವುದು ಅತ್ಯಂತ ಆಘಾತಕಾರಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ ಮಾತನಾಡಿ, “ಶಿಕ್ಷಣಕ್ಕೆ ಸಂಬಂಧಿಸಿದ ಜಾಗವನ್ನು ಯಾವುದೇ ಸಮುದಾಯಗಳಿಗೆ ಅಥವಾ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು, ಕಾಲೇಜು ಭೂಮಿ ಕಾಲೇಜಿಗೆ ಬಳಸಿಕೊಳ್ಳಬೇಕು. ಸಚಿವ ಸಂಪುಟದ ಈ ನಿರ್ಧಾರ ವಿದ್ಯಾರ್ಥಿಗಳ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ತರುತ್ತದೆ. ಕರ್ನಾಟಕ ರಾಜ್ಯ ಸರ್ಕಾರವು ಈ ಕೂಡಲೇ ಈ ವಿಷಯದ ಕುರಿತು ಗಮನಹರಿಸಬೇಕು ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಇರುವ ಜಾಗವನ್ನು ಯಾವುದೇ ಸಮುದಾಯಕ್ಕೆ ಕೊಡಬಾರದು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಕೆಪಿಟಿಸಿಎಲ್ ಸಿಬ್ಬಂದಿಗಳಿಂದಲೇ ವಿದ್ಯುತ್‌ ಕಂಬ ಕಳ್ಳತನ: ಸ್ವಾಮಿ ಹೆಚ್ ಎಸ್ ಆರೋಪ

ಈ ಸಂದರ್ಭದಲ್ಲಿ ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್ ಎಚ್, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದಾರ್ಥ್ ತಿಪ್ಪನೋರ, ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಸದಸ್ಯರಾದ ಅಭಿಷೇಕ್, ಕಾಶಿನಾಥ್, ಭೀಮಾಶಂಕರ, ಸಂತೋಷಿ, ಯುವರಾಜ, ರಾಹುಲ್, ಸ್ಪೂರ್ತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...