ಕಲಬುರಗಿ | ಕಲ್ಯಾಣ ಕರ್ನಾಟಕದಲ್ಲಿ ಐಟಿ ಕಂಪೆನಿ ಸ್ಥಾಪಿಸಿ, ಗುಳೆ ಹೋಗುವುದನ್ನು ತಪ್ಪಿಸಿ: ಅಪ್ಪಾರಾಯ ಬಡಿಗೇರ

Date:

ಕಲ್ಯಾಣ ಕರ್ನಾಟಕದ ಜನರು ಗುಳೆ ಹೋಗುವುದನ್ನು ತಡೆಯಲು ವಿದ್ಯಾವಂತರಿಗೆ ಹಾಗೂ ಇತರರಿಗೆ ಸ್ಥಳೀಯವಾಗಿಯೇ ಕೆಲಸಗಳು ಸಿಗುವಂತಾಗಬೇಕು. ಹಾಗಾಗಿ ಐಟಿ ಕಂಪೆನಿಗಳು ಸ್ಥಾಪನೆಯಾಗಿ ತಮ್ಮ ಹುಟ್ಟೂರಿನಲ್ಲಿಯೇ ಕೆಲಸ ಸಿಗುವಂತಾಗಬೇಕು ಎಂದು ಅಪ್ಪಾರಾಯ ಬಡಿಗೇರ ಆಗ್ರಹಿಸಿದ್ದಾರೆ.

ಕಲಬುರಗಿ ನಗರದಲ್ಲಿ ಪತ್ರಕೆ ಹೇಳಿಕೆ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಜಿಲ್ಲೆಗಳ ಜನರು ತಮ್ಮ ಬದುಕು ಕಟ್ಟಿಕೊಳ್ಳಲು ನೆರೆ ರಾಜ್ಯಗಳಿಗೆ ಮತ್ತು ದೂರದ ಬೆಂಗಳೂರಿಗೆ ಗುಳೆ ಹೋಗುತ್ತಾರೆ. ವಯಸ್ಸಾದ ತಂದೆ ತಾಯಿಗಳನ್ನು ಬಿಟ್ಟು ಹೋಗುವುದರಿಂದ ಇನ್ನಷ್ಟು ಕಷ್ಟವಾಗುತ್ತಿದೆ. ದೂರದ ಊರುಗಳಿಗೆ ಹೋದರೂ ಕೂಡಾ ಕಡಿಮೆ ಸಂಬಳಕ್ಕೆ ಕೆಲಸ ಮಾಬೇಕಾದ ಅನಿವಾರ್ಯತೆ ಎದುರಾಗಿದೆ” ಎಂದು ಹೇಳಿದರು.

“ಬೆಂಗಳೂರಿನಂತಹ ನಗರಗಳಲ್ಲಿ ಒಬ್ಬರು ದುಡಿದು ಜೀವನ ಸಾಗಿಸುವದೇ ಕಷ್ಟ ಹೀಗಿರುವಾಗ ಅವರು ತಮ್ಮ ಮನೆಗಳಿಗೂ ಹಣ ಕಳಿಸಬೇಕು. ಇದು ತುಂಬಾ ಹೊರೆಯಾಗುತ್ತದೆ. ಹಾಗಾಗಿ ಕಲ್ಯಾಣ ಕರ್ನಾಟಕದ ಭಾಗಗಳಲ್ಲಿಯೇ ಕಾರ್ಖಾನೆಗಳನ್ನು ಆರಂಭಿಸಬೇಕು. ಅವುಗಳನ್ನು ಬಿಟ್ಟು ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನಡೆಸಿ ಸಚಿವ ಸಂಪುದಲ್ಲಿ ಕೆಲವು ಫೈಲ್‌ಗಳಿಗೆ ಸಹಿ ಮಾಡಿ ಬಾಯ್ ಬಾಯ್ ಕಲಬುರಗಿ ಅನ್ನುವುದನ್ನು ಬಿಟ್ಟು ಸಿಎಂ ಸೇರಿದಂತೆ ಎಲ್ಲ ಸಚಿವರು ಸಚಿವ ಸಂಪುಟದಲ್ಲಿ ಇದರ ಬಗ್ಗೆ ಚರ್ಚೆ ಮಾಡಿ ಇಲ್ಲಿಯೂ ಐಟಿ ಕಂಪನಿಗಳನ್ನು ಸ್ಥಾಪನೆ ಮಾಡಬೇಕು. ಈ ಕುರಿತು ಸಂಪುಟ ಸಭೆಯ ಎಲ್ಲ ಸದಸ್ಯರೂ ತೀರ್ಮಾನ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಎಂಟು ಲಕ್ಷ ವ್ಯಯಿಸಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸಿದ ಪ್ರಾಥಮಿಕ ಶಾಲಾ ಶಿಕ್ಷಕ

“ಕಲ್ಯಾಣ ಕರ್ನಾಟಕ ಭಾಗದ ಜನರು ತುತ್ತು ಅನ್ನಕ್ಕಾಗಿ ತಮ್ಮ ಹೆಂಡರು ಮಕ್ಕಳನ್ನು ಕರೆದುಕೊಂಡು ಬೆಂಗಳೂರು, ತೆಲಂಗಾಣದ ಹೈದ್ರಾಬಾದ್, ಮಹಾರಾಷ್ಟ್ರದ ಪುಣೆ, ಮುಂಬಯಿ ಸೇರಿದಂತೆ ಇನ್ನೂ ಹಲವು ನಗರಗಳಿಗೆ ಗುಳೆ ಹೋಗಿ ಅಲ್ಲಿ ಗಾರೆಕೆಲಸ, ಸೆಕ್ಯೂರಿಟಿ ಕೆಲಸ, ಸ್ವಚ್ಛತೆ ಕೆಲಸಗಳನ್ನು ಮಾಡುತ್ತಾರೆ. ಆದರೆ ಅಲ್ಲಿಯೂ ಕೂಡ ಅವರಿಗೆ ಉತ್ತಮ ಸಂಬಳ ದೊರೆಯುವುದಿಲ್ಲ. ನಗರ ಜೀವನದಲ್ಲಿ ಹೆಚ್ಚಿನ ಖರ್ಚುಗಳಿರುವುದರಿಂದ ದುಡಿದ ಹಣ ಸಾಕಾಗುವುದಿಲ್ಲ. ಹಾಗಾಗಿ ಸ್ಥಳೀಯವಾಗಿಯೇ ಕಂಪೆನಿಗಳನ್ನು ನಿರ್ಮಾಣ ಮಾಡಿ, ಕನಿಷ್ಠ ಕೂಲಿ, ಉದ್ಯೋಗ ಭದ್ರತೆ ನೀಡಬೇಕು. ಸ್ಥಳೀಯ ನಿವಾಸಿಗಳು ಬೇರೆ ನಗರಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರವ ವಹಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...